ನಮ್ಮಬೆಂಗಳೂರು ಟ್ವಿಟ್ಟರ್ ನಲ್ಲಿ ಟ್ರೆಂಡಿಂಗ್
ಬೆಂಗಳೂರು, ಡಿಸೆಂಬರ್ 24: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಪ್ರತ್ಯೇಕ ಲಾಂಛನ ಪಡೆದುಕೊಂಡ ಮೊದಲ ನಗರ ಎಂಬ ಹೆಗ್ಗಳಿಕೆಗೆ ಬೆಂಗಳೂರು ಪಾತ್ರವಾಗಿದೆ. ಇದರ ಬೆನ್ನಲ್ಲೇ #nammabengaluru ಹ್ಯಾಶ್ ಟ್ಯಾಗ್ ಟ್ವಿಟ್ಟರ್ ನಲ್ಲಿ ಟ್ರೆಂಡಿಂಗ್ ನಲ್ಲಿದೆ.
ಪ್ರವಾಸೋದ್ಯಮ ಇಲಾಖೆಯು ಬ್ರ್ಯಾಂಡ್ ಬೆಂಗಳೂರಿಗೊಂದು ಹೊಸ ಲಾಂಛನ ಹಾಗೂ ಪ್ರವಾಸಿಗರಿಗೆ ಅನುಕೂಲಕ್ಕಾಗಿ ಅಪ್ಲಿಕೇಷನ್ ಬಿಡುಗಡೆ ಮಾಡಿದೆ. ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್ ಅವರು ಲೋಗೋ ಹಾಗೂ ಆಂಡ್ರಾಯ್ಡ್ ಅಪ್ಲಿಕೇಷನ್ ಲೋಕಾರ್ಪಣೆ ಮಾಡಿದರು.
ನ್ಯೂಯಾರ್ಕ್, ಪ್ಯಾರೀಸ್, ಹಾಗೂ ಆಮ್ಸಸ್ಟರ್ ಡ್ಯಾಮ್ ಸೇರಿದಂತೆ ಕೆಲವೇ ನಗರಗಳು ಇಂಥ ಲಾಂಛನ ಹೊಂದಿದೆ. ಆಯ್ಕೆಯಾಗಿರುವ ಲಾಂಛನ ಹಾಗೂ ಬೆಂಗಳೂರಿನ ಪ್ರವಾಸ ಕೈಗೊಳ್ಳುವವರಿಗೆ ಮಾಹಿತಿ ಮತ್ತು ಸೇವೆ ನೀಡಲು ಇದು ಬಳಕೆಯಾಗಲಿದೆ.
ನ್ಯೂಯಾರ್ಕ್ ನಲ್ಲಿ ಈ ರೀತಿ ಲಾಂಛನ ರೂಪಿಸಿ ಅದಕ್ಕೆ ಪೂರಕ ಕಾರ್ಯಕ್ರಮ ರೂಪಿಸಿದ ನಂತರ ಉದ್ಯೋಗ ಅವಕಾಶಗಳು ಹೆಚ್ಚಾಗಿದೆ ಎಂದು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

#nammabengaluru ಹ್ಯಾಶ್ ಟ್ಯಾಗ್
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಪ್ರತ್ಯೇಕ ಲಾಂಛನ ಪಡೆದುಕೊಂಡ ಮೊದಲ ನಗರ ಎಂಬ ಹೆಗ್ಗಳಿಕೆಗೆ ಬೆಂಗಳೂರು ಪಾತ್ರವಾಗಿದೆ. ಇದರ ಬೆನ್ನಲ್ಲೇ #nammabengaluru ಹ್ಯಾಶ್ ಟ್ಯಾಗ್ ಟ್ವಿಟ್ಟರ್ ನಲ್ಲಿ ಟ್ರೆಂಡಿಂಗ್ ನಲ್ಲಿದೆ.
ಪ್ರವಾಸೋದ್ಯಮ ಇಲಾಖೆಯು ಬ್ರ್ಯಾಂಡ್ ಬೆಂಗಳೂರಿಗೊಂದು ಹೊಸ ಲಾಂಛನ ಹಾಗೂ ಪ್ರವಾಸಿಗರಿಗೆ ಅನುಕೂಲಕ್ಕಾಗಿ ಅಪ್ಲಿಕೇಷನ್ ಬಿಡುಗಡೆ ಮಾಡಿದೆ.
|
ಬೆಂಗಳೂರು ಲಾಂಛನ ರಚನೆ
ಬೆಂಗಳೂರು ಲಾಂಛನ ರಚನೆಯಲ್ಲಿ ಒಂದೇ ಸಂಸ್ಥೆಗೆ ಗುತ್ತಿಗೆ ನೀಡಲಾಗಿಲ್ಲ. ಅಂತರ್ಜಾಲದಲ್ಲಿ ಸಾರ್ವಜನಿಕರಿಂದ ಸ್ಪರ್ಧೆ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಒಟ್ಟು 1,350 ಲಾಂಛನಗಳು ಸಲ್ಲಿಕೆಯಾಗಿದ್ದವು. ರಾಷ್ಟ್ರೀಯ ಫ್ಯಾಷನ್ ಟೆಕ್ನಾಲಜಿ ಸಂಸ್ಥೆ, ಚಿತ್ರಕಲಾ ಪರಿಷತ್ ಸೇರಿ ಅನೇಕ ಸಂಸ್ಥೆಗಳ ಸಹಯೋಗದಲ್ಲಿ ಒಂದು ನವೋದಯ ಸಂಸ್ಥೆ ನಮ್ಮೂರು ಸಂಸ್ಥೆಯ ವಿನೋದ್ ಕುಮಾರ್ ರೂಪಿಸಿದ ಲಾಂಛನವನ್ನು ಆಯ್ಕೆ ಮಾಡಲಾಗಿದೆ.
|
ಪ್ರವಾಸಿಗರಿಗೆ ಎಲ್ಲ ಮಾಹಿತಿ ನೀಡುವ ಆಪ್
ಬೆಂಗಳೂರಿಗೆ ಆಗಮಿಸುತ್ತಿರುವ ಪ್ರವಾಸಿಗರಿಗೆ ಎಲ್ಲ ಮಾಹಿತಿ ನೀಡುವ ಮೊಬೈಲ್ ಆಪ್ ಸಿದ್ಧವಾಗಿದೆ. ಆಂಡ್ರಾಯ್ಡ್ ಅಪ್ಲಿಕೇಷನ್ ನಲ್ಲಿ ಬೆಂಗಳೂರಿನ ಪ್ರವಾಸಿತಾಣಗಳ ಮಾಹಿತಿ ಇರಲಿದೆ.
|
ಅಪ್ಲಿಕೇಷನ್ ಮೂಲಕವೇ ಕ್ಯಾಬ್ ಬುಕ್
ಪ್ರವಾಸಿಗರು ಅಪ್ಲಿಕೇಷನ್ ಮೂಲಕವೇ ಕ್ಯಾಬ್, ಬಸ್ ಬುಕ್ ಮಾಡಿ ಸುತ್ತಾಡಬಹುದು. ಆಸ್ಪತ್ರೆಗಳು, ಮೆಟ್ರೋ ನಿಲ್ದಾಣಗಳು, ಬಿಎಂಟಿಸಿ ಬಸ್ ಸಮಯ ಬೆಂಗಳೂರಿನಲ್ಲಿ ದಿನಪೂರ್ತಿ ನಡೆಯಲಿರುವ ಸರ್ಕಾರಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆಯಬಹುದು.
|
ಮಾರ್ಗಗಳ ಮಾಹಿತಿ
ಕಬ್ಬನ್ ಪಾರ್ಕ್ ಮಾರ್ಗ, ಲಾಲ್ ಬಾಗ್ ಪಥ, ದೇವಸ್ಥಾನ ಪಥ ಹೀಗೆ ಪ್ರವಾಸಿಗರಿಗೆ ಆಸಕ್ತಿ ಇರುವ ವಿಷಯದಲ್ಲಿ ಸಂಚರಿಸಲು ಮಾಹಿತಿ ನೀಡಲಾಗುತ್ತದೆ.
|
ಲೋಗೋ ಹಾಕ್ಕೊಂಡ್ರೆ ಮೀಸಲಾತಿ ಸಿಗುತ್ತಾ?
ಈ ಲೋಗೋ ಹಾಕ್ಕೊಂಡ್ರೆ ಮೀಸಲಾತಿ ಸಿಗುತ್ತಾ? ವಿಐಪಿ ಟ್ರೀಟ್ ಸಿಗುತ್ತಾ? ಟ್ರಾಫಿಕ್ ಪೋಲೀಸರು ಸುಮ್ನೆ ಬಿಡ್ತಾರಾ? ಎಂದು ಸಾರ್ವಜನಿಕರು ಪ್ರಶ್ನೆ ಹಾಕಿದ್ದಾರೆ.
|
ಪ್ರವಾಸಿಗರ ಅನುಕೂಲಕ್ಕೆ ಆಪ್
ಬೆಂಗಳೂರಿಗೆ ಸಮಗ್ರ ಮಾಹಿತಿ ನೀಡುವ ಅಪ್ಲಿಕೇಷನ್ ಇಲ್ಲಿದೆ
-
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications