ಕೋಲಾರದ ಯುವತಿ ಅಂಗಾಂಗ ದಾನ: ಏಳು ಜನರ ಬದುಕಿನ ನವ'ಚೈತ್ರ'
ಬೆಂಗಳೂರು, ಫೆಬ್ರವರಿ 12: ವೈವಾಹಿಕ ಜೀವನದ ಹೊಸ್ತಿಲಿನಲ್ಲಿದ್ದ ಯುವತಿಯು ಆರತಕ್ಷತೆ ದಿನವೇ ಅಸ್ವಸ್ಥಗೊಂಡ ಮದುಮಗಳ ಮೆದುಳು ನಿಷ್ಕ್ರಿಯ (ಬ್ರೈನ್ ಡೆಡ್) ಆಗಿರುವಂತಹ ಮನ ಕಲಕುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದಿದೆ. ಬ್ರೈನ್ ಸ್ಟ್ರೋಕ್ ನಿಂದಾಗಿ ಮೃತಪಟ್ಟ ಯುವತಿ ಅಂಗಾಂಗ ದಾನದ ಮೂಲಕ ಏಳು ಜನರ ಬದುಕಿನಲ್ಲಿ ಚೈತ್ರದ ಬೆಳಕು ಮೂಡಿದೆ.
ಕಳೆದ ಫೆಬ್ರವರಿ 6ರಂದು ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಕೋಡಿಚರವು ಗ್ರಾಮದ ಕೆ ವಿ ರಾಮಪ್ಪ ದಂಪತಿಯ ಪುತ್ರಿ 26 ವರ್ಷದ ಚೈತ್ರಾ ವೈವಾಹಿಕ ಬದುಕಿನ ಹೊಸ್ತಿಲಿನಲ್ಲಿದ್ದರು. ಮದುವೆ ಆರತಕ್ಷತೆಯ ದಿನ ಸಂಬಂಧಿಕರೊಂದಿಗೆ ಫೋಟೋ ಕ್ಲಿಕ್ಕಿಸಿಕೊಳ್ಳುತ್ತಿದ್ದ ವಧು ಚೈತ್ರ ದಿಢೀರನೇ ಕುಸಿದು ಬಿದ್ದರು.
ಮದುವೆ ಮನೆಯಲ್ಲೇ ಕುಸಿದು ಬಿದ್ದ ಚೈತ್ರಾರನ್ನು ತಕ್ಷಣವೇ ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಅಲ್ಲಿನ ವೈದ್ಯರು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸಲಹೆ ನೀಡಿದ್ದರು. ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಿದ ನಂತರ ವೈದ್ಯರು ಪರೀಕ್ಷೆ ನಡೆಸಿದ್ದು, ಬ್ರೈನ್ ಡೆಡ್ ಆಗಿರುವ ಬಗ್ಗೆ ಗೊತ್ತಾಗಿದೆ.
ಮಗಳ ಸಾವಿನಿಂದ ಪೋಷಕರ ಆಕ್ರಂದನ:
ನವದಾಂಪತ್ಯದ ಹೊಸ್ತಿಲಿನಲ್ಲಿದ್ದ ಮಗಳನ್ನು ಉಳಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ವೈದ್ಯರ ಈ ಮಾತನ್ನು ಕೇಳಿದ ಸಂಬಂಧಿಕರಿಗೆ ಮುಗಿಲು ಕಳಚಿ ಬಿದ್ದಂತಾಯಿತು, ಮಗಳನ್ನು ಕಳೆದುಕೊಂಡ ಆಪ್ತರ ಆಕ್ರಂದನ ಮುಗಿಲು ಮುಟ್ಟಿತ್ತು.

ಮಗಳ ಅಂಗಾಂಗ ದಾನಕ್ಕೆ ಪೋಷಕರ ಸಮ್ಮತಿ:
ಚೈತ್ರಾ ಸಂಬಂಧಿಕರಲ್ಲಿ ಧೈರ್ಯ ತುಂಬಿದ ನಿಮ್ಹಾನ್ಸ್ ಆಸ್ಪತ್ರೆ ವೈದ್ಯರು, ಆಕೆ ಅಂಗಾಂಗ ದಾನ ಮಾಡುವುದರ ಮೂಲಕ ಹಲವರ ಬದುಕಿಗೆ ಬೆಳಕಾಗಬಹುದು ಎಂಬ ಸಲಹೆ ನೀಡಿದರು. ವೈದ್ಯರ ಸಲಹೆಗೆ ಒಪ್ಪಿಕೊಂಡ ಸಂಬಂಧಿಕರು ಅಂಗಾಂಗ ದಾನಕ್ಕೆ ಸಮ್ಮತಿ ಸೂಚಿಸಿದರು. ತದನಂತರ ಮೂತ್ರಪಿಂಡ, ಕಣ್ಣು, ಹೃದಯವನ್ನು ದಾನ ಮಾಡಲಾಯಿತು. ಅಂಗಾಂಗಾ ದಾನದ ಮೂಲಕ ಸಾವಿನ ನಂತರವೂ ಹಲವರ ಬದುಕಿಗೆ ಬೆಳಕು ನೀಡುವ ಮೂಲಕ ಚೈತ್ರಾ ಜೀವಂತವಾಗಿದ್ದಾರೆ. ಮಗಳ ಅಗಲಿಕೆ ನೋವಿನ ನಡುವೆಯೂ ಅಂಗಾಂಗ ದಾನಕ್ಕೆ ಸಮ್ಮತಿಸಿದ ಪೋಷಕರ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.
ಚೈತ್ರಾ ಅಂಗಾಂಗ ದಾನದ ಬಗ್ಗೆ ಟ್ವೀಟ್:
It was a big day for the 26-year Chaitra but destiny had other plans. She collapsed during her wedding reception at Srinivasapur in Kolar district. She was later declared as brain dead at NIMHANS. Despite the heart breaking tragedy, her parents have decided to donate her organs. pic.twitter.com/KQZff1IEoq
— Dr Sudhakar K (@mla_sudhakar) February 11, 2022
"26 ವರ್ಷಗಳ ಚೈತ್ರಾ ಪಾಲಿಗೆ ಇದು ಒಂದು ಮಹತ್ವದ ದಿನವಾಗಿತ್ತು, ಆದರೆ ವಿಧಿಯಾಟವೇ ಬೇರೆ ಆಗಿತ್ತು. ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಮದುವೆಯ ಆರತಕ್ಷತೆ ವೇಳೆ ಕುಸಿದು ಬಿದ್ದರು. ನಂತರ ನಿಮ್ಹಾನ್ಸ್ ನಲ್ಲಿ ಆಕೆಯ ಬ್ರೈನ್ ಡೆಡ್ ಆಗಿರುವ ಬಗ್ಗೆ ಘೋಷಿಸಲಾಯಿತು. ಹೃದಯವಿದ್ರಾವಕ ದುರಂತದ ನಡುವೆಯೂ ಆಕೆಯ ಪೋಷಕರು ಆಕೆಯ ಅಂಗಾಂಗಗಳನ್ನು ದಾನ ಮಾಡಲು ನಿರ್ಧರಿಸಿದ್ದಾರೆ," ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.
Recommended Video
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications