ಬೆಂಗಳೂರು ಮಾರುಕಟ್ಟೆಗೆ ಲಗ್ಗೆ ಇಡಲಿವೆ ಅಕ್ಕಪಕ್ಕದ ಜಿಲ್ಲೆಗಳ ಮಾವು
ಬೆಂಗಳೂರು, ಏಪ್ರಿಲ್ 7: ವಿವಿಧ ಕಾರಣಕ್ಕೆ ಬೆಂಗಳೂರು ನಗರದ ಮಾರುಕಟ್ಟೆಗೆ ಮಾವು ಬರುವುದು ವಿಳಂಬವಾಗಿದೆ. ಆದ್ದರಿಂದ ಜನರಿಗೆ ಸರಿಯಾಗಿ ಈ ಬಾರಿ ಮಾವಿನ ಹಣ್ಣು ಸವಿಯುವ ಅವಕಾಶ ಸಿಕ್ಕಿಲ್ಲ. ಆದರೆ ಏಪ್ರಿಲ್ನಲ್ಲಿ ಅಕ್ಕಪಕ್ಕದ ಜಿಲ್ಲೆಗಳಿಂದ ಮಾವು ಮಾರುಕಟ್ಟೆಗೆ ಬರಲು ತಯಾರಿ ನಡೆದಿದೆ. ಕೋಲಾರ ಮತ್ತು ರಾಮನಗರ ಜಿಲ್ಲೆಯ ಮಾವು ಮಾರುಕಟ್ಟೆಗೆ ಲಗ್ಗೆ ಇಡಲಿದ್ದು, ಮಾವಿನ ಮಾರುಕಟ್ಟೆಯ ಚಿತ್ರಣವೇ ಬದಲಾಗಲಿದೆ.
ಪ್ರತಿ ವರ್ಷ ಮಾರ್ಚ್ 20ರ ಬಳಿಕ ಮಾರುಕಟ್ಟೆಯಲ್ಲಿ ಹಣ್ಣುಗಳ ರಾಜ ಮಾವು ಆರ್ಭಟ ಜೋರಾಗಿ ಇರುತ್ತಿತ್ತು. ಆದರೆ ಕಳೆದ ವರ್ಷದ ನಿರಂತರ ಮಳೆ, ಹೂವಾಗುವುದು ತಡ ಸೇರಿ ವಿವಿಧ ಕಾರಣಕ್ಕೆ ಮಾರುಕಟ್ಟೆಗೆ ಇನ್ನೂ ಸರಿಯಾಗಿ ಮಾವು ಬಂದಿಲ್ಲ. ಆದ್ದರಿಂದ ಬೇಸಿಗೆಯಲ್ಲಿ ಮಾವಿನ ಹಣ್ಣು ಸವಿಯುವ ಜನರ ಆಸೆಗೆ ತಣ್ಣೀರು ಸುರಿದಂತೆ ಆಗಿದೆ.

ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತದ ಅಧಿಕಾರಿಗಳು ಈ ಕುರಿತು ಮಾತನಾಡಿದ್ದು, ಏಪ್ರಿಲ್ನಲ್ಲಿ ಬೆಂಗಳೂರು ಸೇರಿದಂತೆ ವಿವಿಧ ನಗರದ ಮಾರುಕಟ್ಟೆಗಳಿಗೆ ಅಪಾರವಾದ ಮಾವಿನ ಹಣ್ಣುಗಳು ಬರಲಿವೆ. ಜನರು ನೆಚ್ಚಿನ, ತಾಜಾ ಹಣ್ಣುಗಳನ್ನು ಖರೀದಿ ಮಾಡಬಹುದು ಎಂದು ಹೇಳಿದ್ದಾರೆ.
ಕೆಲವು ಜಿಲ್ಲೆಗಳಲ್ಲಿ ಇಳುವರಿ ಸ್ಪಷ್ಪ ಕಡಿಮೆ ಇದೆ. ಆದರೆ ರಾಜ್ಯಾದ್ಯಂತ ಉತ್ತಮವಾಗಿ ಫಸಲು ಬಂದಿದೆ. ಏಪ್ರಿಲ್ನ ಕಟಾವು ಬಳಿಕ ಮಾರುಕಟ್ಟೆಗೆ 8 ರಿಂದ 9 ಮೆಟ್ರಿಕ್ ಟನ್ ಮಾವಿನ ಹಣ್ಣು ಪೂರೈಕೆಯಾಗಲಿದೆ ಎಂದು ಅಂದಾಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
2024ಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ಬೇಗನೇ ಮಾವಿನ ಗಿಡಗಳಲ್ಲಿ ಹೂಗಳು ಬಂದಿತ್ತು. ಆದರೆ ಕೆಲವು ಜಿಲ್ಲೆಗಳಲ್ಲಿ 2025ರ ಫೆಬ್ರವರಿಯಲ್ಲಿ ಹಲವು ಕಡೆ ಸುರಿದ ಅಕಾಲಿಕ ಮಳೆಯಿಂದಾಗಿ ಕಾಯಿಗಳು ಬೆಳೆದು ಹಣ್ಣಾಗುವುದು ತಡವಾಗಿದೆ.
ಏಪ್ರಿಲ್ ತಿಂಗಳ ಕಟಾವಿನ ನಂತರ ಭಾರೀ ಪ್ರಮಾಣದಲ್ಲಿ ಮಾವು ಮಾರುಕಟ್ಟೆಗೆ ಬರಲಿದೆ. ಇದನ್ನು ಮಾವಿನ ಹಣ್ಣಿನ ಋತು ಎನ್ನಬೇಕೋ?, ಬೇಡವೋ? ಎಂಬ ಬಗ್ಗೆ ಚರ್ಚೆಗಳು ಸಾಗಿವೆ. ಪ್ರತಿ ವರ್ಷ ಹಣ್ಣಿನ ಋತು ಮುಗಿದ ಬಳಿಕ ಮಾರುಕಟ್ಟೆಗೆ 6-7 ಮೆಟ್ರಿಕ್ ಟನ್ ಮಾವು ಬರುತ್ತಿತ್ತು. ಆದರೆ ಈ ವರ್ಷ ಏಪ್ರಿಲ್ನಲ್ಲಿ 12 ಮೆಟ್ರಿಕ್ ಟನ್ ತನಕ ಮಾವಿನ ಹಣ್ಣನ್ನು ನಿರೀಕ್ಷೆ ಮಾಡಲಾಗಿದೆ.
ಕೋಲಾರ, ರಾಮನಗರ ಜಿಲ್ಲೆಯಲ್ಲಿ ಈಗ ಮಾವಿನ ಕಟಾವಿಗೆ ಸಿದ್ಧತೆಗಳು ನಡೆಯುತ್ತಿವೆ. ಏಪ್ರಿಲ್ 2ನೇ ವಾರದಿಂದ ಮಾವು ಮಾರುಕಟ್ಟೆಗೆ ಬರಲಿದ್ದು, 3ನೇ ವಾರ ಹೆಚ್ಚು ಹಣ್ಣುಗಳು ಲಗ್ಗೆ ಇಡಲಿವೆ. ಉತ್ತಮ ಗುಣಮಟ್ಟದ ಹಣ್ಣುಗಳ ಕಟಾವಿಗೆ ಈಗಾಗಲೇ ರೈತರಿಗೆ ಸಹ ಸೂಚನೆ ನೀಡಲಾಗಿದೆ.
ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತದ ಪ್ರಕಾರ ರಾಜ್ಯದ 31 ಜಿಲ್ಲೆಗಳಲ್ಲಿ ಸುಮಾರು 1.49 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತದೆ. ಆದರೆ ಮುಖ್ಯವಾಗಿ ಕೋಲಾರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಧಾರವಾಡ ಮತ್ತು ಬೆಳಗಾವಿಯಲ್ಲಿ ಹೆಚ್ಚು ಮಾವು ಬೆಳೆಯುತ್ತಾರೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications