ಬೆಂಗಳೂರು ಮಾರುಕಟ್ಟೆಗೆ ಲಗ್ಗೆ ಇಡಲಿವೆ ಅಕ್ಕಪಕ್ಕದ ಜಿಲ್ಲೆಗಳ ಮಾವು
ಬೆಂಗಳೂರು, ಏಪ್ರಿಲ್ 7: ವಿವಿಧ ಕಾರಣಕ್ಕೆ ಬೆಂಗಳೂರು ನಗರದ ಮಾರುಕಟ್ಟೆಗೆ ಮಾವು ಬರುವುದು ವಿಳಂಬವಾಗಿದೆ. ಆದ್ದರಿಂದ ಜನರಿಗೆ ಸರಿಯಾಗಿ ಈ ಬಾರಿ ಮಾವಿನ ಹಣ್ಣು ಸವಿಯುವ ಅವಕಾಶ ಸಿಕ್ಕಿಲ್ಲ. ಆದರೆ ಏಪ್ರಿಲ್ನಲ್ಲಿ ಅಕ್ಕಪಕ್ಕದ ಜಿಲ್ಲೆಗಳಿಂದ ಮಾವು ಮಾರುಕಟ್ಟೆಗೆ ಬರಲು ತಯಾರಿ ನಡೆದಿದೆ. ಕೋಲಾರ ಮತ್ತು ರಾಮನಗರ ಜಿಲ್ಲೆಯ ಮಾವು ಮಾರುಕಟ್ಟೆಗೆ ಲಗ್ಗೆ ಇಡಲಿದ್ದು, ಮಾವಿನ ಮಾರುಕಟ್ಟೆಯ ಚಿತ್ರಣವೇ ಬದಲಾಗಲಿದೆ.
ಪ್ರತಿ ವರ್ಷ ಮಾರ್ಚ್ 20ರ ಬಳಿಕ ಮಾರುಕಟ್ಟೆಯಲ್ಲಿ ಹಣ್ಣುಗಳ ರಾಜ ಮಾವು ಆರ್ಭಟ ಜೋರಾಗಿ ಇರುತ್ತಿತ್ತು. ಆದರೆ ಕಳೆದ ವರ್ಷದ ನಿರಂತರ ಮಳೆ, ಹೂವಾಗುವುದು ತಡ ಸೇರಿ ವಿವಿಧ ಕಾರಣಕ್ಕೆ ಮಾರುಕಟ್ಟೆಗೆ ಇನ್ನೂ ಸರಿಯಾಗಿ ಮಾವು ಬಂದಿಲ್ಲ. ಆದ್ದರಿಂದ ಬೇಸಿಗೆಯಲ್ಲಿ ಮಾವಿನ ಹಣ್ಣು ಸವಿಯುವ ಜನರ ಆಸೆಗೆ ತಣ್ಣೀರು ಸುರಿದಂತೆ ಆಗಿದೆ.

ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತದ ಅಧಿಕಾರಿಗಳು ಈ ಕುರಿತು ಮಾತನಾಡಿದ್ದು, ಏಪ್ರಿಲ್ನಲ್ಲಿ ಬೆಂಗಳೂರು ಸೇರಿದಂತೆ ವಿವಿಧ ನಗರದ ಮಾರುಕಟ್ಟೆಗಳಿಗೆ ಅಪಾರವಾದ ಮಾವಿನ ಹಣ್ಣುಗಳು ಬರಲಿವೆ. ಜನರು ನೆಚ್ಚಿನ, ತಾಜಾ ಹಣ್ಣುಗಳನ್ನು ಖರೀದಿ ಮಾಡಬಹುದು ಎಂದು ಹೇಳಿದ್ದಾರೆ.
ಕೆಲವು ಜಿಲ್ಲೆಗಳಲ್ಲಿ ಇಳುವರಿ ಸ್ಪಷ್ಪ ಕಡಿಮೆ ಇದೆ. ಆದರೆ ರಾಜ್ಯಾದ್ಯಂತ ಉತ್ತಮವಾಗಿ ಫಸಲು ಬಂದಿದೆ. ಏಪ್ರಿಲ್ನ ಕಟಾವು ಬಳಿಕ ಮಾರುಕಟ್ಟೆಗೆ 8 ರಿಂದ 9 ಮೆಟ್ರಿಕ್ ಟನ್ ಮಾವಿನ ಹಣ್ಣು ಪೂರೈಕೆಯಾಗಲಿದೆ ಎಂದು ಅಂದಾಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
2024ಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ಬೇಗನೇ ಮಾವಿನ ಗಿಡಗಳಲ್ಲಿ ಹೂಗಳು ಬಂದಿತ್ತು. ಆದರೆ ಕೆಲವು ಜಿಲ್ಲೆಗಳಲ್ಲಿ 2025ರ ಫೆಬ್ರವರಿಯಲ್ಲಿ ಹಲವು ಕಡೆ ಸುರಿದ ಅಕಾಲಿಕ ಮಳೆಯಿಂದಾಗಿ ಕಾಯಿಗಳು ಬೆಳೆದು ಹಣ್ಣಾಗುವುದು ತಡವಾಗಿದೆ.
ಏಪ್ರಿಲ್ ತಿಂಗಳ ಕಟಾವಿನ ನಂತರ ಭಾರೀ ಪ್ರಮಾಣದಲ್ಲಿ ಮಾವು ಮಾರುಕಟ್ಟೆಗೆ ಬರಲಿದೆ. ಇದನ್ನು ಮಾವಿನ ಹಣ್ಣಿನ ಋತು ಎನ್ನಬೇಕೋ?, ಬೇಡವೋ? ಎಂಬ ಬಗ್ಗೆ ಚರ್ಚೆಗಳು ಸಾಗಿವೆ. ಪ್ರತಿ ವರ್ಷ ಹಣ್ಣಿನ ಋತು ಮುಗಿದ ಬಳಿಕ ಮಾರುಕಟ್ಟೆಗೆ 6-7 ಮೆಟ್ರಿಕ್ ಟನ್ ಮಾವು ಬರುತ್ತಿತ್ತು. ಆದರೆ ಈ ವರ್ಷ ಏಪ್ರಿಲ್ನಲ್ಲಿ 12 ಮೆಟ್ರಿಕ್ ಟನ್ ತನಕ ಮಾವಿನ ಹಣ್ಣನ್ನು ನಿರೀಕ್ಷೆ ಮಾಡಲಾಗಿದೆ.
ಕೋಲಾರ, ರಾಮನಗರ ಜಿಲ್ಲೆಯಲ್ಲಿ ಈಗ ಮಾವಿನ ಕಟಾವಿಗೆ ಸಿದ್ಧತೆಗಳು ನಡೆಯುತ್ತಿವೆ. ಏಪ್ರಿಲ್ 2ನೇ ವಾರದಿಂದ ಮಾವು ಮಾರುಕಟ್ಟೆಗೆ ಬರಲಿದ್ದು, 3ನೇ ವಾರ ಹೆಚ್ಚು ಹಣ್ಣುಗಳು ಲಗ್ಗೆ ಇಡಲಿವೆ. ಉತ್ತಮ ಗುಣಮಟ್ಟದ ಹಣ್ಣುಗಳ ಕಟಾವಿಗೆ ಈಗಾಗಲೇ ರೈತರಿಗೆ ಸಹ ಸೂಚನೆ ನೀಡಲಾಗಿದೆ.
ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತದ ಪ್ರಕಾರ ರಾಜ್ಯದ 31 ಜಿಲ್ಲೆಗಳಲ್ಲಿ ಸುಮಾರು 1.49 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತದೆ. ಆದರೆ ಮುಖ್ಯವಾಗಿ ಕೋಲಾರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಧಾರವಾಡ ಮತ್ತು ಬೆಳಗಾವಿಯಲ್ಲಿ ಹೆಚ್ಚು ಮಾವು ಬೆಳೆಯುತ್ತಾರೆ.
-
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು?












Click it and Unblock the Notifications