ಬೆಂಗಳೂರು ಪಿಜಿಯಲ್ಲಿ ಯುವತಿಯ ಬರ್ಬರ ಹತ್ಯೆ ಮಾಡಿದ್ದ ಆರೋಪಿ ಮಧ್ಯಪ್ರದೇಶದಲ್ಲಿ ಅರೆಸ್ಟ್
ಬೆಂಗಳೂರು, ಜುಲೈ. 27: ಬೆಂಗಳೂರಿನ ಕೋರಮಂಗಲದ ಪೇಯಿಂಗ್ ಗೆಸ್ಟ್ ವಸತಿಗೃಹದಲ್ಲಿ ವಾಸವಾಗಿದ್ದ ಬಿಹಾರ ಮೂಲದ 24 ವರ್ಷದ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದ ವ್ಯಕ್ತಿಯನ್ನು ಮಧ್ಯಪ್ರದೇಶದಲ್ಲಿ ಬಂಧಿಸಲಾಗಿದೆ. ಯುವತಿನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.
ಬಿಹಾರ ಮೂಲದ 24 ವರ್ಷದ ಯುವತಿ ಕೃತಿ ಕುಮಾರಿ ಎನ್ನುವವರನ್ನು ಬರ್ಬರವಾಗಿ ಕೊಂದ ಆರೋಪಿಯನ್ನು ಮಧ್ಯಪ್ರದೇಶದಲ್ಲಿ ಇಂದು (ಜುಲೈ. 27) ಬಂಧಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ ನಗರಕ್ಕೆ ಕರೆತರಲಾಗುತ್ತಿದೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ್ ಮಾಧ್ಯಮಗಳಿಗೆ ಖಚಿತಪಡಿಸಿದ್ದಾರೆ.

ಸಂತ್ರಸ್ತೆ, ಕೃತಿ ಕುಮಾರಿ, ಮೂಲತಃ ಬಿಹಾರ ಮೂಲದವರಾಗಿದ್ದು, ಬೆಂಗಳೂರಿನ ಕೋರಮಂಗಲದ ಪೇಯಿಂಗ್ ಗೆಸ್ಟ್ (ಪಿಜಿ) ವಸತಿಗೃಹದಲ್ಲಿ ವಾಸಿಸುತ್ತಿದ್ದರು. ಮಂಗಳವಾರ ರಾತ್ರಿ 11 ಗಂಟೆಯ ಸುಮಾರಿಗೆ ಕಟ್ಟಡಕ್ಕೆ ಬಂದ ವ್ಯಕ್ತಿ ಆಕೆಯನ್ನು ಚಾಕುವಿನಿಂದ ಇರಿದು ಪರಾರಿಯಾಗಿದ್ದ. ಮೂಲಗಳ ಪ್ರಕಾರ, ಈ ವ್ಯಕ್ತಿ ಪಿಜಿಯಲ್ಲಿ ರೂಮ್ಮೇಟ್ ಆಗಿದ್ದ ಯುವತಿಯ ಬಾಯ್ಫ್ರೆಂಡ್ ಆಗಿದ್ದ.
ಆರೋಪಿ ಅಭಿಷೇಕ್ ಒಬ್ಬ ನಿರುದ್ಯೋಗಿಯಾಗಿದ್ದ. ಇದು ಅವರ ನಡುವೆ ಜಗಳಗ್ಗೆ ಕಾರಣವಾಗಿತ್ತು. ಇಬ್ಬರ ಜಗಳ ಕಡಿಮೆ ಮಾಡಲು ಕೃತಿ ಕುಮಾರಿ ಹಲವು ಬಾರಿ ಮಧ್ಯಪ್ರವೇಶಿಸುತ್ತಿದ್ದರು ಎನ್ನಲಾಗಿದೆ. ಇದರ ಜೊತೆಗೆ ಆ ವ್ಯಕ್ತಿಯಿಂದ ದೂರವಿರುವಂತೆ ತನ್ನ ರೂಮ್ಮೇಟ್ಗೆ ಕೃತಿ ಕುಮಾರಿ ಸಲಹೆ ನೀಡಿದ್ದಾಳೆ. ತಮ್ಮ ಗರ್ಲ್ಫ್ರೆಂಡ್ ತನ್ನನ್ನು ದೂರವಿಡಲು ಈಕೆಯೇ ಕಾರಣ ಎಂದು ತಿಳಿದು ಆತ ಈ ಅಪರಾಧ ಎಸಗಿದ್ದಾನೆ ಎನ್ನಲಾಗಿದೆ.

ಪಿಜಿ ಕಾರಿಡಾರ್ನಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಈ ಭೀಕರ ಕೊಲೆಯ ದೃಶ್ಯ ಸೆರೆಯಾಗಿದೆ. ಕೃತಿ ಕುಮಾರಿಯ ರೂಮಿನ ಬಾಗಿಲನ್ನು ತಟ್ಟುತ್ತಿರುವ ವ್ಯಕ್ತಿಯ ದೃಶ್ಯಗಳು, ಆತ ಮೃತಳಿಗೆ ಚಾಕು ಇರುಯುತ್ತಿರುವುದು, ಇಬ್ಬರ ನಡುವೆ ಜಗಳ ನಡೆಯುತ್ತಿರುವುದು ಕಾಣಿಸುತ್ತಿದೆ. ಗಲಾಟೆ ಕೇಳಿ ಅಲ್ಲಿಗೆ ಬಂದ ಇತರ ಯುವತಿಯರು ಪೊಲೀಸರಿಗೆ ಕರೆ ಮಾಡಿದ್ದಾರೆ. ಆರೋಪಿಗಳನ್ನು ಹಿಡಿಯಲು ಬೆಂಗಳೂರು ಪೊಲೀಸರು ಮೂರು ವಿಶೇಷ ತಂಡಗಳನ್ನು ರಚಿಸಿದ್ದರು.
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ









Click it and Unblock the Notifications