ಅಗ್ನಿ ಕೊರಳು ಸುತ್ತಿಕೊಳ್ಳುತ್ತಾ ಕೊತ್ವಾಲ್ ಹತ್ಯೆ ಪ್ರಕರಣ?
ಅಗ್ನಿ ಶ್ರೀಧರ್ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕ ಆರ್.ಕೆ ದತ್ತಾಗೆ ಪತ್ರವೊಂದನ್ನು ಬರೆದಿದ್ದರು ಎನ್ನಲಾಗಿದೆ. ಈ ಪತ್ರದಲ್ಲಿ ತಾನು ಭೂಗತ ಪಾತಕಿ ಕೊತ್ವಾಲ್ ರಾಮಚಂದ್ರ ಕೊಲೆಯಲ್ಲಿ ಭಾಗಿಯಾಗಿದ್ದೆ ಎಂದಿದ್ದಾರೆ.
ಬೆಂಗಳೂರು, ಮಾರ್ಚ್ 30: ಭೂಗತ ಪಾತಕಿ ಕೊತ್ವಾಲ್ ರಾಮಚಂದ್ರ ಹತ್ಯೆ ಪ್ರಕರಣ ಮತ್ತೆ ಮರುಜೀವ ಪಡೆದುಕೊಳ್ಳುವ ಸಾಧ್ಯತೆ ಇದೆ.
ಇತ್ತೀಚೆಗೆ ಭೂಗತ ಜಗತ್ತಿನ ಹಿನ್ನಲೆಯ ಅಗ್ನಿ ಶ್ರೀಧರ್ ರಾಜ್ಯ ಪೊಲೀಸ್ ಮಹಾನಿರ್ದೇಶಕ ಆರ್.ಕೆ ದತ್ತಾಗೆ ಪತ್ರವೊಂದನ್ನು ಬರೆದಿದ್ದರು ಎನ್ನಲಾಗಿದೆ. ಈ ಪತ್ರದಲ್ಲಿ ಸ್ವತಃ ಶ್ರೀಧರ್ ತಾನು ಭೂಗತ ಪಾತಕಿ ಕೊತ್ವಾಲ್ ರಾಮಚಂದ್ರ ಕೊಲೆಯಲ್ಲಿ ಭಾಗಿಯಾಗಿದ್ದೆ ಎಂದು ಬರೆದಿದ್ದಾರಂತೆ.[ಶೂಟೌಟ್ ಕೇಸ್ : 'ಅಗ್ನಿ' ಶ್ರೀಧರ್ ಆರೋಪಿ ನಂ. 8]
ಈ ಪತ್ರವನ್ನು ಗಂಭೀರವಾಗಿ ತೆಗೆದುಕೊಳ್ಳಲು ಬೆಂಗಳೂರು ಪೊಲೀಸರು ನಿರ್ಧರಿಸಿದ್ದಾರೆ. ಅಗ್ನಿ ಶ್ರೀಧರ್ ಪತ್ರವನ್ನು ಗಂಭೀರವಾಗಿ ತೆಗೆದುಕೊಳ್ಳಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಖಾಸಗಿ ವಾಹಿನಿಯೊಂದಕ್ಕೆ ಹೇಳಿಕೆ ನೀಡಿದ್ದಾರೆ.[ಶೂಟೌಟ್ ಪ್ರಕರಣ: ಅಗ್ನಿ ಶ್ರೀಧರ್ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು]
ಹೀಗಾಗಿ ಧೂಳು ಹಿಡಿದಿದ್ದ ಕೊತ್ವಾಲ್ ರಾಮಚಂದ್ರ ಪ್ರಕರಣ ಮತ್ತೆ ಮರುಜೀವ ಪಡೆದುಕೊಳ್ಳುವ ಸಾಧ್ಯತೆ ಇದೆ.[ಅಗ್ನಿ ಶ್ರೀಧರ್ ಆಪ್ತ ಸುನಿಲ್, ಒಂಟೆ ರೋಹಿತ್ ಬಂಧನ]