ಸೆ.5ರಂದು ರಂಗಶಂಕರದಲ್ಲಿ 'ಕೋವಿಗೊಂದು ಕನ್ನಡಕ' ಪ್ರದರ್ಶನ
ಬೆಂಗಳೂರು, ಆಗಸ್ಟ್ 30: ಕೋವಿ ಹಿಡಿದು ತನ್ನ ಶತ್ರುವನ್ನು ಮುಗಿಸಲು ಹೊರಟ ಮುದುಕನೊಬ್ಬನಿಗೆ ಕಣ್ಣಿನ ದೃಷ್ಟಿಯೇ ಸರಿಯಿಲ್ಲ. ಶತ್ರುವನ್ನು ಮುಗಿಸಲು ದೃಷ್ಟಿ ಸರಿಯಾಗಬೇಕು, ಹಾಗಾಗಿ ಆತನಿಗೊಂದು ಕನ್ನಡಕ ಬೇಕು. ಮೊಮ್ಮಗನೊಂದಿಗೆ ಕಣ್ಣಿನ ವೈದ್ಯನ ಬಳಿ ಬರುವ ಮುದುಕ ತನ್ನ ದೃಷ್ಟಿ ಸರಿಪಡಿಸಿಕೊಂಡನೇ ? ನಿಜಕ್ಕೂ ಆತನ ಸಮಸ್ಯೆ ಕನ್ನಡಕದ್ದೇ? ಕನ್ನಡಕ ಆತನಿಗೆ ಬೇಕಿತ್ತೇ, ಆತನ ಶತ್ರುವನ್ನು ಮುಗಿಸಲು ಬೇಕಾದ ಕೋವಿಗೇ ಕನ್ನಡಕ ಬೇಕಿತ್ತೇ? ಇವೆಲ್ಲ ಪ್ರಶ್ನೆಗಳಿಗೆ ಉತ್ತರ ಹುಡುಕಲು ,ನೋಡಿ ನಾಟಕ 'ಕೋವಿಗೊಂದು ಕನ್ನಡಕ' !
ರೂಪಾಂತರ ಮತ್ತು ನಿರ್ದೇಶನ : ವೆಂಕಟೇಶ್ ಪ್ರಸಾದ್
ರಂಗ ಶಾಸ್ತ್ರ : ನಿಶಾ ಅಬ್ದುಲ್ಲಾ
ರಂಗ ವಿನ್ಯಾಸ: ಶ್ರೀಧರ್ ಮೂರ್ತಿ
ಸಂಗೀತ ಸಂಯೋಜನೆ : ಉತ್ಥಾನ ಭಾರಿಘಾಟ್
ಬೆಳಕು ವಿನ್ಯಾಸ : ವಿನಯ್ ಚಂದ್ರ ಪಿ.
ನಿರ್ಮಾಣ ನಿರ್ವಹಣೆ: ಅರುಣ್ ಡಿ.ಟಿ, ಸುಷ್ಮ
ರಂಗದ ಮೇಲೆ: ವಿಜಯ್ ಕುಲ್ಕರ್ಣಿ, ರಾಗ್ ಅರಸ್, ಸುನಿಲ್ ಕುಮಾರ್ ವಿ.
ಭಿತ್ತಿಪತ್ರ ವಿನ್ಯಾಸ : ಸತೀಶ್ ಗಂಗಯ್ಯ
ಬೆಂಗಳೂರು ಥಿಯೇಟರ್ ಕಲೆಕ್ಟಿವ್ ಪ್ರಸ್ತುತಿ
ದಿನಾಂಕ: ಸೆಪ್ಟೆಂಬರ್ 5
ಸಮಯ: 3:30
ಟಿಕೆಟ್ ಗಳಿಗೆ ಸಂಪರ್ಕಿಸಿ: 9900182400
ಈ ನಾಟಕದ ಬಗ್ಗೆ ವೆಂಕಟೇಶ್ ಪ್ರಸಾದ್ ಹೀಗೆ ವಿವರಿಸಿದ್ದಾರೆ: 'ಇದು ಸ್ವಲ್ಪ ಗಂಭೀರವಾದ ನಾಟಕ. ಇದಕ್ಕೆ ಜನಪ್ರಿಯ ಮಾದರಿಯ ನಾಟಕಗಳಂತೆ ಪ್ರೇಕ್ಷಕರು ಬರುವುದು ಕಷ್ಟ. ಹಾಗಂತ ಜನಪ್ರಿಯಗೊಳಿಸಬೇಕು, ರಂಗಮಂದಿರ ತುಂಬಬೇಕು ಎಂಬ ಒಂದೇ ಕಾರಣಕ್ಕೆ ನಾಟಕದ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳಲು ನಮಗೆ ಇಷ್ಟವಿಲ್ಲ. ಹಾಗೆ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳದ ಹಾಗೆ ನಾಟಕಗಳನ್ನು ಮಾಡಬೇಕು ಎನ್ನುವುದೇ ನಮ್ಮ ತಂಡದ ಮೂಲ ಉದ್ದೇಶಗಳಲ್ಲಿ ಒಂದು'

ಬೆಂಗಳೂರು ಥಿಯೇಟರ್ ಕಲೆಕ್ಟಿವ್
2015 ರಲ್ಲಿ ಚೆರ್ರಿ ತೋಟ ನಾಟಕದೊಂದಿಗೆ ರೂಪುಗೊಂಡ ರಂಗ ತಂಡ 'ಬೆಂಗಳೂರು ಥಿಯೇಟರ್ ಕಲೆಕ್ಟಿವ್'.
ರಂಗ ಭೂಮಿಯಲ್ಲಿ ಹೊಸತನ್ನು ಹುಡುಕಿ ಹೋರಾಟ, ಸುಮಾರು 25 ವರ್ಷ ಗಳ ಒಟ್ಟು ಅನುಭವವುಳ್ಳ 3 ಗೆಳೆಯರ ಕನಸು, ಬೆಂಗಳೂರು ಥೀಯೇಟರ್ ಕಲೆಕ್ಟಿವ್, ರೂಪುಗೊಂಡಿದ್ದು ರಂಗ ಶಂಕರದ ಯುವ ನಾಟಕೋತ್ಸವದಲ್ಲಿ ವೆಂಕಟೇಶ್ ಪ್ರಸಾದ್ ರವರಿಗೆ ನಾಟಕ ನಿರ್ದೇಶಿಸಲು ಅವಕಾಶ ದೊರೆತಾಗ.ಜಾಗತಿಕ ರಂಗಭೂಮಿಯಲ್ಲಿ ನಡೆಯುತ್ತಿರುವ ಹೊಸ ಪ್ರಕಾರಗಳನ್ನು ಅಳವಡಿಸಿಕೊಳ್ಳುವ ಮತ್ತು ಕನ್ನಡದಲ್ಲಿ ಪ್ರಯೋಗಿಸುವ ಹಂಬಲದಿಂದ ಹುಟ್ಟಿದ ಬೆಂಗಳೂರು ಥೀಯೇಟರ್ ಕಲೆಕ್ಟಿವ್ ಗೆ ಈಗ 3 ವರ್ಷ ತುಂಬಿದೆ.
ಜನಪ್ರಿಯ ಮಾದರಿಯ ನಾಟಕಗಳು ಮತ್ತು ಮನರಂಜನೆ ಮಾತ್ರ ಕೇಂದ್ರ ವಾಗಿಟ್ಟುಕೊಂಡ ಪ್ರಯೋಗಗಳನ್ನು ಹೊರತುಪಡಿಸಿ, ಉತ್ತಮ ಗುಣಮಟ್ಟದ, ಸಮಾಜ ಮುಖಿಯಾದ ಗಂಭೀರ ವಿಷಯಗಳನ್ನೂ ಜನರಿಗೆ ತಲುಪಿಸುವ ಉದ್ದೇಶ ಬೆಂಗಳೂರು ಥೀಯೇಟರ್ ಕಲೆಕ್ಟಿವ್ ನದು. ಬೆಂಗಳೂರು ಥೀಯೇಟರ್ ಕಲೆಕ್ಟಿವ್ ನ ಮೊದಲ ಪ್ರಯೋಗ, ಚೆರ್ರಿ ತೋಟ 25 ಪ್ರದರ್ಶನಗಳನ್ನು ಕಂಡಿದ್ದು ಉತ್ತಮ ಪ್ರತಿಕ್ರಿಯೆ ಮತ್ತು ಜನಮನ್ನಣೆ ಪಡೆದಿದೆ. ವೆಂಕಟೇಶ್ ಪ್ರಸಾದ್ ರವರ ನಿರ್ದೇಶನದ ನಾಟಕ, ಮೈಸೂರು ರಂಗಾಯಣದ ಗ್ರೀಷ್ಮ ರಂಗೋತ್ಸವದಲ್ಲಿ, ಗುಲ್ಬರ್ಗಾ ರಂಗಾಯಣದ ರಾಷ್ಟ್ರೀಯ ನಾಟಕೋತ್ಸವದಲ್ಲಿ ಪ್ರದರ್ಶನಗೊಂಡಿದೆ.

ಪ್ರಕಾಶ್ ಬೆಳವಾಡಿಯವರ ನಿರ್ದೇಶನ ಬೆಕೆಟ್
ಪ್ರಕಾಶ್ ಬೆಳವಾಡಿಯವರ ನಿರ್ದೇಶನ ಬೆಕೆಟ್, ಬೆಂಗಳೂರು ಥೀಯೇಟರ್ ಕಲೆಕ್ಟಿವ್ ನ ಎರಡನೇ ಪ್ರಯತ್ನ. ಧರ್ಮ ಮತ್ತು ರಾಜಕಾರಣಗಳ ಒಳ ಸಂಬಂಧ ಮತ್ತು ಒಂದರಮೇಲೆ ಮತ್ತೊಂದು ಬೀರವ ಪರಿಣಾಮಗಳನ್ನು ಕುರಿತಾದ ನಾಟಕ. ಕನ್ನಡ ದಲ್ಲಿ ಬಹುತೇಕ ಪ್ರದರ್ಶನ ಗೊಳ್ಳದ 'ಬೆಕೆಟ್' ನಾಟಕದ ಪ್ರಯೋಗ ನಮ್ಮ ಹೆಮ್ಮೆಯಾಗಿದೆ.
ಮೂರನೇ ಪ್ರಯೋಗವಾಗಿ ಆಯ್ಕೆಮಾಡಿಕೊಂಡ 'ಒಂದು ಪ್ರೀತಿಯ ಕಥೆ' ನಾಟಕವು ಹೆಣ್ಣೊಬ್ಬಳ ಸಲಿಂಗ ಪ್ರೇಮದ ಕುರಿತಾದ ನಾಟಕ. ಮರಾಠಿ ಮೂಲದ ವಿಜಯ್ ತೆಂಡೂಲ್ಕರ್ ರ 'ಮಿತ್ರಾಚಿ ಗೋಷ್ಟ್' ನಾಟಕವನ್ನು ಕನ್ನಡಕ್ಕೆ ಅನುವಾದ ಮತ್ತು ನಿರ್ದೇಶನ ವೆಂಕಟೇಶ್ ಪ್ರಸಾದ್ ರವರು ಮಾಡಿದ್ದಾರೆ. ಈ ವಿಷಯದ ಕುರಿತಾದ ಮೊದಲ ಕನ್ನಡ ನಾಟಕವಾಗಿದ್ದು ಇದರ ಬಗ್ಗೆ ಹೆಮ್ಮೆ ಇದ್ದರೂ, ನಮ್ಮ ನಡುವಿನಲ್ಲೇ ಬದುಕುವ ಒಂದು ಸಮುದಾಯ ಬಗೆಗಿನ ನಾಟಕ ಇನ್ನೂ ಕನ್ನಡದಲ್ಲಿ ಪ್ರಯೋಗಗೊಳ್ಳದಿರುವುದು ವಿಷಾದನೀಯ ಕೂಡ.

ನಿರ್ದೇಶಕರ ಬಗ್ಗೆ
ಕಳೆದ 15 ವರ್ಷಗಳಿಂದ ರಂಗಭೂಮಿಯಲ್ಲಿ ತೊಡಗಿರುವ ವೆಂಕಟೇಶ್ ಪ್ರಸಾದ್, ನಟರಾಗಿ, ಸಂಘಟಕರಾಗಿ ಮತ್ತು ಇತ್ತೀಚಿಗೆ ನಿರ್ದೇಶಕರಾಗಿ ತಮ್ಮದೇ ಛಾಪನ್ನು ಮೂಡಿಸಿದ್ದಾರೆ. ಬಹುಪಾಲು ರಂಗಭೂಮಿಯ ಸಾಂಗತ್ಯವನ್ನು ಅಂದರೆ ಸುಮಾರು 11 ವರ್ಷಗಳ ಕಾಲ 'ಸಮುದಾಯ' ಸಂಘಟನೆ ಜೊತೆ ಗುರುತಿಸಿಕೊಂಡ ವೆಂಕಟೇಶ್ ಪ್ರಸಾದ್, ರಂಗಭೂಮಿಯ ಮತ್ತು ಸಂಘಟನೆಯ ಪಾಠಗಳನ್ನು ಕಲಿತಿದ್ದು ಸಮುದಾಯದಲ್ಲಿ. ಎಮ್.ಎಸ್.ಸತ್ಯು ಅವರ 'ಕುರಿ' ನಾಟಕದಲ್ಲಿ ಪಾತ್ರ ಮಾಡುವ ಮೂಲಕ ಸಮುದಾಯ ಪ್ರವೇಶಿಸಿದ ಇವರು, ನಂತರ ಸಮುದಾಯದ ಎಲ್ಲಾ ಚಟುವಟಿಕೆಗಳ ಭಾಗವಾದ ಇವರು, ಸಂಘಟನೆಯಲ್ಲೂ ಪ್ರಮುಖ ಪಾತ್ರ ವಹಿಸಿದ್ದಾರೆ.
Recommended Video

ಪಂಪ ಭಾರತ, ತುಘಲಕ್ ನಾಟಕದ ಮುಖ್ಯಭೂಮಿಕೆ
ಭಾರತದ ಪ್ರಮುಖ ನಿರ್ದೇಶಕರಾದ ಎಮ್.ಎಸ್.ಸತ್ಯು, ಪ್ರಕಾಶ್ ಬೆಳವಾಡಿ, ಶ್ರೀಪಾದ್ ಭಟ್, ಸ್ಯಾಮ್ ಕುಟ್ಟಿ ಪಟ್ಟಂಕರಿ, ಅಭಿಷೇಕ್ ಮಜುಮ್ದಾರ್, ಮೋಹಿತ್ ಟಕಾಲ್ಕರ್, ಸುರೇಂದ್ರನಾಥ್ ಮುಂತಾದ ಪ್ರಮುಖ ನಿರ್ದೇಶಕರ ಜೊತೆ ನಟರಾಗಿ, ಸಹನಿರ್ದೇಶಕರಾಗಿ ಕೆಲಸ ಮಾಡಿರುವ ಇವರು, ಸಮುದಾಯದ ಪ್ರಮುಖ ನಾಟಕಗಳಾದ 'ಕುರಿ', 'ಜುಗಾರಿ ಕ್ರಾಸ್'', 'ಪಂಪ ಭಾರತ', ಕತ್ತಲೆ ದಾರಿ ದೂರ', 'ಸುತ್ತಿ ಕೊಂಡರೆ ಸರ್ಪ', 'ಕಲ್ಯಾಣದ ಕೊನೆಯ ದಿನಗಳು', 'ನಮ್ಮ ರಾಬರ್ಟ್ ಕ್ಲೈವ್', 'ತುಘಲಕ್' ಹೀಗೆ ಹಲವು ಮಹತ್ವದ ನಾಟಕಗಳಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಇವರು ಅಭಿನಯಿಸಿರುವ 'ತುಘಲಕ್' ಕನ್ನಡ ರಂಗಭೂಮಿಯಲ್ಲೇ ವಿಶಿಷ್ಟವಾದ ಸಂಚಲನ ಮೂಡಿಸಿದ ನಾಟಕ. ಇವರ ತುಘಲಕ್ ಪಾತ್ರ ನಿರ್ವಹಣೆ ಪ್ರೇಕ್ಷಕರಿಂದಲೂ, ವಿಮರ್ಶಕರಿಂದಲೂ ಅಪಾರ ಮೆಚ್ಚುಗೆಗೆ ಪಾತ್ರವಾಗಿದೆ.
ನಟನೆ ಮತ್ತು ನಿರ್ದೇಶನಕ್ಕಷ್ಟೇ ಸೀಮಿತಗೊಳ್ಳದೇ, ವೆಂಕಟೇಶ್ ಪ್ರಸಾದ್ ರವರು, ಭಾಷಾಂತರ, ಪ್ರೊಡಕ್ಷನ್ ಮ್ಯಾನೇಜರ್, ಸ್ಟೇಜ್ ಮ್ಯಾನೇಜರ್ ಆಗಿ ರಂಗಭೂಮಿಯಲ್ಲಿ ವಿವಿಧ ಸಾಮಥ್ರ್ಯಗಳಲ್ಲಿ ಕೆಲಸ ಮಾಡಿದ್ದಾರೆ. ದಿ ಬ್ರಿಟಿಷ್ ಕೌನ್ಸಿಲ್ ನ ಮೂಲಕ ಎಡಿನ್ಬರ್ಗ್ ಇಂಟನ್ರ್ಯಾಷನಲ್ ಥಿಯೇಟರ್ ಫೆಸ್ಟಿವಲ್ -2015 ಕ್ಕೆ ಭಾರತವನ್ನು ಪ್ರತಿನಿಧಿಸುವ 4 ಪ್ರತಿನಿಧಿಗಳಲ್ಲಿ ಒಬ್ಬರಾಗಿದ್ದಾರೆ.-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications