ಪೂರ್ಣಚಂದ್ರ ತೇಜಸ್ವಿಯ ಕರ್ವಾಲೋ ಇ ಬುಕ್ ಲೋಕಾರ್ಪಣೆ
ಬೆಂಗಳೂರು, ಜುಲೈ 21: ಕನ್ನಡದ ಎರಡು ತಲೆಮಾರಿನ ಓದುಗರನ್ನು ಇನ್ನಿಲ್ಲದಂತೆ ಪ್ರಭಾವಿಸಿದ ಬರಹಗಾರ ಕೆ.ಪಿ ಪೂರ್ಣಚಂದ್ರ ತೇಜಸ್ವಿ ಅವರ ಪುಸ್ತಕಗಳು ಮೊದಲ ಬಾರಿಗೆ ಅಧಿಕೃತವಾಗಿ ಡಿಜಿಟಲ್ ಅಂಗಳಕ್ಕೆ ಕಾಲಿಡುತ್ತಿವೆ. ಇದೇ ಮೊದಲ ಬಾರಿಗೆ ತೇಜಸ್ವಿ ಕೃತಿಯೊಂದು ಮೈಲ್ಯಾಂಗ್ ಮೊಬೈಲ್ ಆಪ್ ಅಲ್ಲಿ ಬಿಡುಗಡೆಯಾಗುತ್ತಿದೆ. ಮೊದಲ ಹಂತದಲ್ಲಿ ಅವರ ಅತ್ಯಂತ ಜನಪ್ರಿಯ ಕಾದಂಬರಿ ಕರ್ವಾಲೊ ಇಂದು ಮೈಲ್ಯಾಂಗ್ ಆಪ್ ಅಲ್ಲಿ ಬಿಡುಗಡೆಯಾಗಿದೆ.
ಕನ್ನಡ ಪುಸ್ತಕ ಓದುವ ಯಾವ ಯುವಕ/ಯುವತಿಯರನ್ನು "ನಿಮ್ಮ ಮೆಚ್ಚಿನ ಲೇಖಕ ಯಾರು" ಅನ್ನುವ ಪ್ರಶ್ನೆ ಕೇಳಿದರೆ ಅವರು ಕೊಡುವ ಮೊದಲ ಉತ್ತರ "ತೇಜಸ್ವಿ". ಅಂತಹದೊಂದು ಮಾಂತ್ರಿಕ ಸ್ಪರ್ಷ ಅವರ ಬರವಣಿಗೆಗೆ ಇದೆ. ಅವು ಎರಡು ತಲೆಮಾರಿನಿಂದಲೂ ಕನ್ನಡದ ಓದುಗರನ್ನು ಬಿಟ್ಟು ಬಿಡದೇ ಪ್ರಭಾವಿಸಿವೆ.
ತೇಜಸ್ವಿ ತಮ್ಮ ಬರವಣಿಗೆಯ ಆಚೆ, ತಮ್ಮ ಖಾಸಗಿ ಮತ್ತು ಸಾರ್ವಜನಿಕ ಜೀವನದಲ್ಲೂ ತೋರಿದ ಘನತೆಯ ನಿಲುವುಗಳಿಂದಾಗಿ ಅವರ ಅಭಿಮಾನಿ ವಲಯ ಹತ್ತು ದಿಕ್ಕುಗಳಿಗೂ ಚಾಚಿದೆ. ಕನ್ನಡದ ಬಗ್ಗೆ ಸದಾ ಒಂದು ಹೆಜ್ಜೆ ಮುಂದೆ ಹೋಗಿ ಯೋಚಿಸುತ್ತಿದ್ದ ಅವರು ಇಪ್ಪತ್ತೊಂದನೇ ಶತಮಾನದಲ್ಲಿ ಬರುವ ತಂತ್ರಜ್ಞಾನದ ಬಿರುಗಾಳಿಗೆ ಎದೆ ಕೊಟ್ಟು ನಿಲ್ಲಲು ಕನ್ನಡ ಸಜ್ಜಾಗಬೇಕಾದ ರೀತಿಯ ಬಗ್ಗೆ ತುಂಬಾ ಹಿಂದೆಯೇ ಯೋಚಿಸಿ, ಚಿಂತಿಸಿ ತಮ್ಮ ಮಿತಿಯಲ್ಲಿ ಅನೇಕ ಕೆಲಸಗಳಿಗೂ ಚಾಲನೆ ಕೊಟ್ಟಿದ್ದರು.

ಡಿಜಿಟಲ್ ಮಾಧ್ಯಮ ಇಂದು ಇಷ್ಟು ವ್ಯಾಪಕವಾಗಿ ಹರಡಿದ್ದಾಗಲೂ ಅವರ ಪುಸ್ತಕಗಳು ಮುದ್ರಿತ ಆವೃತ್ತಿಯೊಂದಕ್ಕೇ ನಿಂತು ಹೋಗಿತ್ತು. ಇದೇ ಮೊದಲ ಬಾರಿಗೆ ಅಧಿಕೃತವಾಗಿ ತೇಜಸ್ವಿ ಅವರ ಪುಸ್ತಕಗಳು ಇಬುಕ್ ರೂಪದಲ್ಲಿ ಡಿಜಿಟಲ್ ಪ್ರಪಂಚಕ್ಕೆ ಪ್ರವೇಶ ನೀಡುತ್ತಿದ್ದು, ಮೈಲ್ಯಾಂಗ್ ಮೊಬೈಲ್ ಆಪ್ ಅಲ್ಲಿ ಬಿಡುಗಡೆಯಾಗಲಿವೆ. ಆಸಕ್ತ ಕನ್ನಡದ ಓದುಗರು ಪ್ರಪಂಚದ ಯಾವುದೇ ಮೂಲೆಯಿಂದ ತಮ್ಮ ಮೊಬೈಲ್/ಐಪ್ಯಾಡ್ ಬಳಸಿ ಕೂತಲ್ಲಿಯೇ ಕ್ಷಣದಲ್ಲೇ ಕರ್ವಾಲೊ ಕೃತಿಯನ್ನು ಕೊಂಡು, ಒಳ್ಳೆಯ ಓದುವ ಅನುಭವದ ಜೊತೆ ಸವಿಯುವ ಅವಕಾಶವನ್ನು ಮೈಲ್ಯಾಂಗ್ ಕಲ್ಪಿಸಿದೆ.
ಹೆಚ್ಚಿನ ವಿವರಗಳಿಗೆ:
ಭಾರತದಲ್ಲಿ: www.mylang.in
ಹೊರ ದೇಶದಲ್ಲಿ: www.mylangbooks.com ಸಂಪರ್ಕಿಸಲು ಕೋರಲಾಗಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications