ಬಿಎಸ್ವೈ, ಶ್ರೀರಾಮುಲು ವಿರುದ್ಧ ಎಸಿಬಿಗೆ ದೂರು ನೀಡಿದ ಕಾಂಗ್ರೆಸ್
ಬೆಂಗಳೂರು, ಮೇ 24: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ಶಾಸಕ ಶ್ರೀರಾಮುಲು, ಜನಾರ್ದನ ರೆಡ್ಡಿ, ಮುರಳಿಧರ ರಾವ್, ವಿಜಯೇಂದ್ರ ಅವರುಗಳ ವಿರುದ್ಧ ಕರ್ನಾಟಕ ಕಾಂಗ್ರೆಸ್ನ ಕಾನೂನು ವಿಭಾಗ ಎಸಿಬಿಗೆ ದೂರು ನೀಡಿದೆ.
ಚುನಾವಣಾ ಫಲಿತಾಂಶದ ಬಳಿಕ ಬಹುಮತ ಸಾಬೀತು ಪಡಿಸಿ ಅಧಿಕಾರ ಹಿಡಿಯಲು ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯ ಈ ಎಲ್ಲ ಮುಖಂಡರು ಕೋಟ್ಯಂತರ ಹಣದ ಆಮೀಷ ಒಡ್ಡಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.
ದೂರಿನ ಜೊತೆಗೆ ಬಿಜೆಪಿ ಮುಖಂಡರು ಆಮೀಷ ಒಡ್ಡಿದ ಆಡಿಯೋ ಕ್ಲಿಪ್ಗಳನ್ನು ಎನ್ನಲಾದ ಧ್ವನಿ ನಮೂನೆಗಳನ್ನು ದೂರಿನೊಂದಿಗೆ ಎಸಿಬಿಗೆ ಕಾಂಗ್ರೆಸ್ ಕಾನೂನು ವಿಭಾಗ ನೀಡಿದೆ.

ಬಿಜೆಪಿಯು ಅಧಿಕಾರ ಹಿಡಿಯಲು ಅಡ್ಡದಾರಿಯನ್ನು ತುಳಿದಿದ್ದು, ಕುದುರೆ ವ್ಯಾಪಾರಕ್ಕೆ ಇಳಿದಿತ್ತು, ಅದರ ದಾಖಲೆ ಸಹ ಇದ್ದು ಇದನ್ನು ಪರಿಗಣಿಸಿ ಬಿಜೆಪಿಯ ಯಡಿಯೂರಪ್ಪ ಹಾಗೂ ಶಾಸಕ ಶ್ರೀರಾಮುಲು, ಜನಾರ್ದನ ರೆಡ್ಡಿ, ಮುರಳಿಧರ ರಾವ್, ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರ ವಿರುದ್ಧ ಎಫ್ಐಆರ್ ದಾಖಲಿಸಬೇಕು ಎಂದು ಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದ ರಾಜ್ ಹೇಳಿದ್ದಾರೆ.
ಬಿಜೆಪಿ ವಿಶ್ವಾಸಮತ ಯಾಚನಗೆ ಕೆಲವು ದಿನಗಳಿದ್ದಂತೆ ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಅವರು ಯಡಿಯೂರಪ್ಪ ಅವರು ಬಿ.ಸಿ.ಪಾಟೀಲ್ ಅವರೊಂದಿಗೆ ಮಾತನಾಡಿದ ಆಡಿಯೋ ಕ್ಲಿಪ್, ಜನಾರ್ದನ ರೆಡ್ಡಿ ಅವರು ಕಾಂಗ್ರೆಸ್ ಶಾಸಕರೊಂದಿಗೆ ಮಾತನಾಡಿದ ಆಡಿಯೋ ಕ್ಲಿಪ್, ಶ್ರೀರಾಮುಲು ಹಾಗೂ ಮುರಳಿಧರ ರಾವ್ ಬಿ.ಸಿ.ಪಾಟೀಲ್ ಅವರೊಂದಿಗೆ ಮಾತನಾಡಿದ ಆಡಿಯೋ ಕ್ಲಿಪ್ ಬಿಡುಗಡೆ ಮಾಡಿದ್ದರು.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು











Click it and Unblock the Notifications