ಕೆಪಿಸಿಸಿ ಅಧ್ಯಕ್ಷರೇ ಆರೋಪಿಯನ್ನು ರಕ್ಷಿಸುತ್ತಿದ್ದಾರಾ? ಭಾರೀ ವಿವಾದಕ್ಕೆ ಕಾರಣವಾದ ಡಿಕೆಶಿ ನಡೆ
ಬೆಂಗಳೂರು, ಮಾರ್ಚ್ 21: ಪ್ರವಾದಿ ಪೈಗಂಬರ್ ಬಗ್ಗೆ ಸಾಮಾಜಿಕ ತಾಣದಲ್ಲಿ ಹಾಕಲಾದ ಪೋಸ್ಟ್ ಒಂದು ರಾಜಧಾನಿಯ ಎರಡು ಪ್ರದೇಶವನ್ನು ಹೇಗೆ ಹೊತ್ತಿ ಉರಿಸಿತ್ತು ಎನ್ನುವುದು ಗೊತ್ತಿರುವ ವಿಚಾರ.
ಕೆ.ಜಿ ಹಳ್ಳಿ ಮತ್ತು ಡಿ.ಜೆ.ಹಳ್ಳಿಯಲ್ಲಿ ನಡೆದ ಗಲಭೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರೇ ಶಾಮೀಲಾಗಿ, ಆರೋಪಿ ಸ್ಥಾನದಲ್ಲಿ ಇರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ, ಈ ವಿಚಾರದಲ್ಲಿ ಕರ್ನಾಟಕ ಕಾಂಗ್ರೆಸ್ ನಡೆದುಕೊಂಡ ರೀತಿಯ ಬಗ್ಗೆ ಪಕ್ಷದಲ್ಲೇ ಚರ್ಚೆ ನಡೆದಿತ್ತು.
ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮತ್ತು ಮಾಜಿ ಮೇಯರ್ ಸಂಪತ್ ರಾಜ್ ನಡುವಿನ ವೈಮನಸ್ಸಿನಿಂದ, ಶಾಸಕರ ಮನೆ ಬೆಂಕಿಗೆ ಆಹುತಿಯಾಗಿತ್ತು. ಈ ವಿಚಾರದಲ್ಲಿ ಸಂಪತ್ ರಾಜ್ ಜೈಲು ಶಿಕ್ಷೆಯನ್ನೂ ಅನುಭವಿಸಿ ಬಂದಿದ್ದಾರೆ.
ಅಖಂಡ ಶ್ರೀನಿವಾಸಮೂರ್ತಿಯವರು ರಾಜ್ಯ ಮತ್ತು ಕೇಂದ್ರದ ಕಾಂಗ್ರೆಸ್ ಮುಖಂಡರ ಬಳಿ ತಮ್ಮ ನೋವನ್ನು ತೋಡಿಕೊಂಡಿದ್ದರು. ಆದರೆ, ಆರೋಪಿ ಸ್ಥಾನದಲ್ಲಿರುವವರ ಜೊತೆಗೆ, ಡಿ.ಕೆ.ಶಿವಕುಮಾರ್ ನಡೆದುಕೊಂಡ ರೀತಿ, ಈಗ ಪಕ್ಷದಲ್ಲೇ ಭಾರೀ ವಿವಾದಕ್ಕೆ ಗುರಿಯಾಗಿದೆ.

ಶ್ರೀನಿವಾಸಮೂರ್ತಿ ಮನೆ ಬೆಂಕಿಯಿಟ್ಟ ಪ್ರಕರಣ
ಶ್ರೀನಿವಾಸಮೂರ್ತಿ ಮನೆಗೆ ಬೆಂಕಿಯಿಟ್ಟ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿ ಒಬ್ಬರಾಗಿರುವ ಮಾಜಿ ಕಾರ್ಪೋರೇಟರ್ ಎ.ಆರ್. ಜಾಕೀರ್ ಕೂಡಾ ಒಬ್ಬರು. ಇವರನ್ನು ಕಳೆದ ಡಿಸೆಂಬರ್ ತಿಂಗಳಲ್ಲಿ ಬಂಧಿಸಲಾಗಿತ್ತು. ಇವರ ಅಣ್ಣನ ಮಗಳ ಮದುವೆ, ಶುಕ್ರವಾರ (ಮಾ 19) ನಡೆದಿತ್ತು.

ಜಾಕೀರ್ ಅಣ್ಣನ ಮಗಳ ಮದುವೆ ಕಾರ್ಯಕ್ರಮವಲ್ಲಿ ಡಿ.ಕೆ.ಶಿವಕುಮಾರ್
ಅರಮನೆ ಮೈದಾನದಲ್ಲಿ ನಡೆದ ಈ ಮದುವೆ ಕಾರ್ಯಕ್ರಮವಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡಾ ಭಾಗವಹಿಸಿದ್ದರು. ಅಲ್ಲದೇ, ಜಾಕೀರ್ ಜೊತೆಗೆ ಭೋಜನ ಸವಿದಿದ್ದರು. ಈ ಸಂದರ್ಭದಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಕೂಡಾ ಹಾಜರಿದ್ದರು.

ಫೋಟೋ ಕಾಂಗ್ರೆಸ್ ವಲಯದಲ್ಲಿ ಈಗ ಚರ್ಚೆಗೆ ಗ್ರಾಸ
ಈ ಫೋಟೋ ಕಾಂಗ್ರೆಸ್ ವಲಯದಲ್ಲಿ ಈಗ ಚರ್ಚೆಗೆ ಗ್ರಾಸವಾಗಿದೆ. ಅಖಂಡ ಶ್ರೀನಿವಾಸಮೂರ್ತಿಗೆ ತೊಂದರೆಯಾಗಿದ್ದರೂ, ಕಾಂಗ್ರೆಸ್ ಅಧ್ಯಕ್ಷರು ಅವರನ್ನು ರಕ್ಷಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎನ್ನುವ ಆರೋಪಕ್ಕೆ ಈ ವಿದ್ಯಮಾನ ಮತ್ತಷ್ಟು ಇಂಬು ನೀಡುವಂತಿದೆ.
Recommended Video

ಶಿಸ್ತು ಸಮಿತಿ ನನಗೆ ನೋಟಿಸ್ ನೀಡುತ್ತಿದೆ
ಅಖಂಡ ಶ್ರೀನಿವಾಸಮೂರ್ತಿಯವರು ಹಲವು ಬಾರಿ ಈ ವಿಚಾರದಲ್ಲಿ ಬೇಸರವನ್ನು ವ್ಯಕ್ತ ಪಡಿಸಿದ್ದರು. ಬಹಿರಂಗ ಹೇಳಿಕೆಯನ್ನು ನೀಡಬಾರದು ಎಂದು ಕೆಪಿಸಿಸಿ ಇವರಿಗೆ ಎಚ್ಚರಿಕೆಯನ್ನೂ ನೀಡಿತ್ತು. "ಶಿಸ್ತು ಸಮಿತಿ ನನಗೆ ನೋಟಿಸ್ ನೀಡುತ್ತಿದೆ ಎನ್ನುವ ವಿಚಾರ ತಿಳಿಯಿತು. ಕಮಿಟಿಯ ಮುಂದೆ ಎಲ್ಲಾ ವಿಚಾರವನ್ನು ಮತ್ತೊಮ್ಮೆ ಹೇಳುತ್ತೇನೆ"ಎಂದು ಅಖಂಡ ಶ್ರೀನಿವಾಸಮೂರ್ತಿ ಹೇಳಿದ್ದಾರೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು?












Click it and Unblock the Notifications