ಅವರು ಕೇಳಿದ ದಾಖಲೆ ಕೊಟ್ಟರೂ, ಮತ್ತೆ ಪರಿಶೀಲನೆಗೆ ಬಂದಿದ್ದಾರೆ; ಡಿಕೆ ಶಿವಕುಮಾರ್

ಬೆಂಗಳೂರು, ಸೆ.28: ಬುಧವಾರ ಕೇಂದ್ರ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಕನಕಪುರದಲ್ಲಿರುವ ಮನೆ ಮತ್ತು ಇತರ ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ.

ದಾಳಿಯ ಕುರಿತು ಮಾತನಾಡಿರುವ ಡಿಕೆ ಶಿವಕುಮಾರ್, "ಸಿಬಿಐ ಅಧಿಕಾರಿಗಳು ಕನಕಪುರದ ತಹಶೀಲ್ದಾರ್ ಅವರನ್ನು ಕರೆದುಕೊಂಡು ಹೋಗಿ ಊರಿನಲ್ಲಿರುವ ನನ್ನ ಆಸ್ತಿಗಳನ್ನು ಪರಿಶೀಲನೆ ಮಾಡಿದ್ದಾರೆ ಎಂದು ನನ್ನ ಸಿಬ್ಬಂದಿ ದೂರವಾಣಿ ಮೂಲಕ ತಿಳಿಸಿದ್ದಾರೆ. ನಾನು ಈಗಾಗಲೇ ಅವರು ಕೇಳಿದ ದಾಖಲೆಗಳನ್ನು ಕೊಟ್ಟಿದ್ದೆ. ಆದರೂ ಕನಕಪುರ, ದೊಡ್ಡಆಲಹಳ್ಳಿ, ಕೋಡಿಹಳ್ಳಿ ಮನೆ ಹಾಗೂ ಜಮೀನಿನ ಪರಿಶೀಲನೆ ಮಾಡಿದ್ದಾರೆ" ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

"ನಾನು ಕಾನೂನಿಗೆ ಗೌರವ ನೀಡುತ್ತೇನೆ. ಬೇರೆಯವರ ವಿರುದ್ಧ ಅಕ್ರಮ ಆಸ್ತಿ ಆರೋಪ ಇದ್ದರೂ ಕೇವಲ ನನ್ನ ಪ್ರಕರಣಕ್ಕೆ ಮಾತ್ರ ಸಿಬಿಐ ತನಿಖೆಗೆ ಅನುಮತಿ ನೀಡಿದ್ದಾರೆ. ಅವರ ಪ್ರಕರಣದ ಬಗ್ಗೆ ಎಸಿಬಿ ತನಿಖೆ ಮಾಡಿದರೆ ನನಗೆ ಸಿಬಿಐ ತನಿಖೆ. ನಾನು ನಿಮ್ಮ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ, ಈಗ ಚುನಾವಣಾ ಸಮಯದಲ್ಲಿ ನಾನು ಸ್ವಲ್ಪ ಬ್ಯುಸಿ ಇದ್ದೇನೆ ಎಂದು ಬೆಂಗಳೂರು ಹಾಗೂ ದೆಹಲಿ ಕಚೇರಿಗೆ ಪತ್ರ ಬರೆದಿದ್ದೆ. ಆದರೆ ಅವರು ಬಹಳ ತರಾತುರಿಯಲ್ಲಿ ಇದ್ದಾರೆ. ನನಗೆ ಮಾನಸಿಕವಾಗಿ ಕಿರಿಕಿರಿ ಆಗುತ್ತಿದೆ" ಎಂದು ತಮ್ಮ ತಮಗಾಗುತ್ತಿರುವ ಮಾನಸಿಕ ಕಿರಿಕಿರಿಯನ್ನು ತಿಳಿಸಿದ್ದಾರೆ.

KPCC president DK Shivakumar Reaction On CBI raids

"ನಾನು ದಿನ ಬೆಳಗಾಗುವುದರಲ್ಲಿ ಮ್ಯಾಜಿಕ್ ಮಾಡಲು ಆಗುವುದಿಲ್ಲ. ಮೊದಲಿನಿಂದಲೂ ನನ್ನ ಆಸ್ತಿ ಊರಿನಲ್ಲಿ ಇದೆ. ಚುನಾವಣಾ ಆಯೋಗ, ಆದಾಯ ತೆರಿಗೆ, ಜಾರಿ ನಿರ್ದೇಶನಾಲಯ ಸೇರಿದಂತೆ ಎಲ್ಲ ಇಲಾಖೆಗಳಿಗೆ ಮಾಹಿತಿ ನೀಡಿದ್ದೇನೆ. ಆದರೂ ಈಗ ಈ ರೀತಿ ಪರಿಶೀಲನೆ ಯಾಕೆ ಎಂದು ಗೊತ್ತಿಲ್ಲ" ಎಂದಿದ್ದಾರೆ.

ನಿಮ್ಮನ್ನು ಗುರಿ ಮಾಡಲಾಗುತ್ತಿದೆಯೇ ಎಂದು ಕೇಳಿದಾಗ, ' ಇದು ಹಣೆಬರಹ, ಏನು ಮಾಡಲು ಸಾಧ್ಯ. ಅವರು ಟಾರ್ಗೆಟ್ ಮಾಡುತ್ತಿದ್ದಾರೆ ಎಂಬುದಕ್ಕಿಂತ ಪ್ರೀತಿ ಮಾಡುತ್ತಿದ್ದಾರೆ' ಎಂದು ವ್ಯಂಗ್ಯವಾಡಿದ್ದಾರೆ.

ನಿಮ್ಮ ಧೈರ್ಯ ಕೆಡಿಸುವ ಹುನ್ನಾರವೇ ಎಂಬ ಪತ್ರಕರ್ತರ ಪ್ರಶ್ನೆಗೆ, 'ಕೇವಲ ನನ್ನ ವಿರುದ್ಧ ಮಾತ್ರ ಸಿಬಿಐ ತನಿಖೆ ಯಾಕೆ..? ಲೋಕಾಯುಕ್ತ ಇಲಾಖೆ, ಚುನಾವಣಾ ಆಯೋಗ ನನ್ನ ಆಸ್ತಿ ಬಗ್ಗೆ ಪ್ರಶ್ನೆ ಮಾಡಿದ್ದರೆ ಬೇರೆ ವಿಚಾರ. ನನ್ನ ವಿಚಾರದಲ್ಲಿ ವಿಶೇಷವಾಗಿ ಸಿಬಿಐ ವಿಚಾರಣೆ ಯಾಕೆ..?' ಎಂದು ಮರುಪ್ರಶ್ನೆ ಮಾಡಿದ್ದಾರೆ.

KPCC president DK Shivakumar Reaction On CBI raids

ಮುಂದುವರಿದು, "ಇಡಿ ಅಧಿಕಾರಿಗಳು ನನ್ನನ್ನು ವಿಚಾರಣೆಗೆ ಕರೆದಿದ್ದಾರೆ. ನನಗೆ ಬೇರೆಯದೇ ಮಾಹಿತಿ ಇದೆ. ಈ ಬಗ್ಗೆ ಆನಂತರ ಮಾತನಾಡುತ್ತೇನೆ" ಎಂದು ಕುತೂಹಲ ಹುಟ್ಟುಹಾಕಿದ್ದಾರೆ.

ಬುಧವಾರ ಸಂಜೆ ಕೇಂದ್ರ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಕನಕಪುರ, ದೊಡ್ಡಆಲಹಳ್ಳಿ, ಸಂತೆ ಕೋಡಿಹಳ್ಳಿ ಮನೆ, ಜಮೀನು ಮತ್ತಿತರರ ಸ್ಥಳಗಳ ಮೇಲೆ ದಾಳಿ ನಡೆಸಿದ್ದರು. ಸಿಬಿಐ , ಡಿಕೆ ಶಿವಕುಮಾರ್ ವಿರುದ್ಧ ಇರುವ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆ ನಡೆಸುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+