ಕೋವಿಡ್ ಮಾರ್ಗಸೂಚಿ ಅಲ್ಟ್ರಾ ಡರ್ಬಿ ರೇಸ್ಗೆ ಅನ್ವಯಿಸುವುದಿಲ್ಲವೇ?; ಡಿಕೆಶಿ
ಬೆಂಗಳೂರು, ಜನವರಿ 27: ಬೆಂಗಳೂರು ರೇಸ್ಕೋರ್ಸ್ನಲ್ಲಿ ನಡೆಯುತ್ತಿರುವ ಈ ಡರ್ಬಿಯಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದಾರೆ. ಮಾಸ್ಕ್ ಧರಿಸಿಲ್ಲ, ಸಾಮಾಜಿಕ ಅಂತರ ಇಲ್ಲ. ಸರ್ಕಾರಕ್ಕೆ ಆದಾಯ ಬರುವ ಮೂಲಗಳಿಗೆ ಯಾವುದೇ ಕೋವಿಡ್ ರೂಲ್ಸ್ ಅನ್ವಯವಾಗುವುದಿಲ್ಲವೇ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.
ಈ ಕುರಿತು ಕೂ ಮಾಡಿರುವ ಅವರು, ಕೋವಿಡ್ ಮಾರ್ಗಸೂಚಿಗಳ ಅನ್ವಯ ಮದುವೆ ಹಾಗೂ ಮೊದಲಾದ ಕಾರ್ಯಕ್ರಮಗಳಲ್ಲಿ 500 ಮಂದಿಗೆ ಮಾತ್ರ ಪ್ರವೇಶ ನೀಡಲಾಗಿದೆ. ಪ್ರತಿಭಟನೆ, ಧರಣಿಗಳಿಗೆ ಅವಕಾಶ ಇಲ್ಲ. ಹೋಟೆಲ್ ಮೊದಲಾದ ಕಡೆ 50:50 ನಿಯಮ ಹೇರಲಾಗಿದೆ. ಆದರೆ, ಬುಧವಾರ ಗಣರಾಜ್ಯೋತ್ಸವದಂದು ಆರಂಭವಾದ 'ಅಲ್ಟ್ರಾ ಡರ್ಬಿ ಬೆಂಗಳೂರು' ರೇಸ್ಗೆ ಯಾವುದೇ ಕೋವಿಡ್ ನಿಯಮಗಳು ಅನ್ವಯವಾಗುವುದಿಲ್ಲವೇ? ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ನಾಡಿನ ಕುಡಿಯುವ ನೀರಿನ ಬವಣೆ ನೀಗಿಸಲು ಕಾಂಗ್ರೆಸ್ ಪಕ್ಷ ಕೈಗೊಂಡ ಮೇಕೆದಾಟು ಯೋಜನೆ ಪಾದಯಾತ್ರೆಗೆ ಬಿಜೆಪಿ ಪಕ್ಷ ಹಾಗೂ ಸರ್ಕಾರ ಏನೆಲ್ಲಾ ಕಳಂಕ ಹಚ್ಚಿತು. ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಆರೋಪದ ಮೇಲೆ ನನ್ನನ್ನೂ ಸೇರಿದಂತೆ ಕಾಂಗ್ರೆಸ್ ನಾಯಕರ ಮೇಲೆ ಪ್ರಕರಣ ದಾಖಲಾಗಿದೆ. ಕೋವಿಡ್ ಬಿಕ್ಕಟ್ಟಿನ ಮಧ್ಯೆಯೂ ಕುದುರೆ ರೇಸ್ ನಡೆಸಲು ಸರ್ಕಾರ ಅನುಮತಿ ನೀಡಿದ್ದು ಹೇಗೆ? ಎಂದು ಪ್ರಶ್ನೆ ಮಾಡಿದ್ದಾರೆ.

ದಿ ಕಿಂಗ್ಫಿಷರ್ ಅಲ್ಟ್ರಾ ಡರ್ಬಿ ರೇಸ್
ಬೆಂಗಳೂರು ನಗರದಲ್ಲಿ ಚಳಿಗಾಲದ ರೇಸ್ "ದಿ ಕಿಂಗ್ಫಿಷರ್ ಅಲ್ಟ್ರಾ ಡರ್ಬಿ ಬೆಂಗಳೂರು' ಬುಧವಾರ ಗಣರಾಜ್ಯೋತ್ಸವದ ದಿನ ಬೆಂಗಳೂರು ಟರ್ಫ್ ಕ್ಲಬ್ನಲ್ಲಿ ನಡೆಯಿತು.
ಯುನೈಟೆಡ್ ಬ್ರಿವರೀಸ್ ಡರ್ಬಿಯನ್ನು ಪ್ರಾಯೋಜಿಸುತ್ತಿದ್ದು, ಬೆಂಗಳೂರು ಟರ್ಫ್ ಕ್ಲಬ್ ಜೊತೆಗೂಡಿ ನಡೆಸುತ್ತಿರುವ ರೇಸ್ನ ಒಟ್ಟು ಮೊತ್ತ ಒಂದು ಕೋಟಿ ಮೂವತ್ತೊಂಬತ್ತು ಲಕ್ಷದ ಮೂವತ್ತೈದು ಸಾವಿರ (1.39 ಕೋಟಿ) ರೂಪಾಯಿ ಆಗಿದೆ.
Recommended Video
Koo Appನಾಡಿನ ಕುಡಿಯುವ ನೀರಿನ ಬವಣೆ ನೀಗಿಸಲು ಕಾಂಗ್ರೆಸ್ ಪಕ್ಷ ಕೈಗೊಂಡ ಮೇಕೆದಾಟು ಪಾದಯಾತ್ರೆಗೆ ಬಿಜೆಪಿ ಏನೆಲ್ಲಾ ಕಳಂಕ ಹಚ್ಚಿತು. ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಆರೋಪದ ಮೇಲೆ ನನ್ನನ್ನೂ ಸೇರಿದಂತೆ ಕಾಂಗ್ರೆಸ್ ನಾಯಕರ ಮೇಲೆ ಪ್ರಕರಣ ದಾಖಲಾಗಿದೆ. ಕೋವಿಡ್ ಬಿಕ್ಕಟ್ಟಿನ ಮಧ್ಯೆಯೂ ರೇಸ್ ನಡೆಸಲು ಸರ್ಕಾರ ಅನುಮತಿ ನೀಡಿದ್ದು ಹೇಗೆ? 3/3 - D K Shivakumar (@dkshivakumar_official) 26 Jan 2022
ಇದುವರೆಗಿನ ರೇಸ್ಗಳಲ್ಲಿ ಇದು ದಾಖಲೆಯ ಮೊತ್ತವಾಗಿದ್ದು, ಇದರಲ್ಲಿ ಗೆಲ್ಲುವ ಕುದುರೆಯು ತನ್ನ ಮಾಲೀಕನಿಗೆ ಸುಮಾರು ಲಕ್ಷ ಮೌಲ್ಯದ ಟ್ರೋಪಿಯೊಂದಿಗೆ 68.28 ಲಕ್ಷ ರೂ. ಗೆದ್ದುಕೊಡಲಿದೆ.
Koo App
ಕಿಂಗ್ಸ್ಟನ್ ಕೋರ್ಟ್ ಮತ್ತು ಸಿಟಾರೆ ಕಣದಿಂದ ಹಿಂದೆ ಸರಿದ ಕಾರಣ ಏಳು ಕುದುರೆಗಳು ಮಾತ್ರ ಕಣದಲ್ಲಿ ಉಳಿದಿವೆ. ಇವುಗಳಲ್ಲಿ ಐದು ಗಂಡು ಮತ್ತು ಎರಡು ಹೆಣ್ಣು ಕುದುರೆಗಳಿದ್ದವು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
IPL Free VIP Tickets: ಶಾಸಕರಿಗೆ ಐಪಿಎಲ್ ವಿಐಪಿ ಟಿಕೆಟ್ ಪಡೆಯುವ ಹಕ್ಕು ಇದೆ: ಡಿ.ಕೆ.ಶಿವಕುಮಾರ್ ಸಮರ್ಥನೆ -
Lockdown: ಭಾರತದಲ್ಲಿ ಲಾಕ್ಡೌನ್ ಇಲ್ಲ: ವದಂತಿಗಳಿಗೆ ಕೇಂದ್ರ ಸರ್ಕಾರ ಸ್ಪಷ್ಟನೆ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?









Click it and Unblock the Notifications