ಗುರುವಿನ ಆರೋಗ್ಯ ವಿಚಾರಿಸಿದ ಶಿಷ್ಯ- ಎಸ್ಎಂಕೆಗೆ ವಿಶ್ರಾಂತಿ ಅಗತ್ಯವೆಂದ ಡಿಕೆಶಿ
ಬೆಂಗಳೂರು, ಸೆಪ್ಟೆಂಬರ್ 26: ಶ್ವಾಸಕೋಶ ಸೋಂಕಿನಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಮಾಜಿ ಸಿಎಂ ಎಸ್ಎಂ ಕೃಷ್ಣ ಅವರು ಡಿಕೆಶಿವಕುಮಾರ್ ಅವರಿಗೆ ರಾಜಕೀಯ ಗುರು ಎನ್ನಬಹುದು. ಸದ್ಯ ಎಸ್ಎಂ ಕೃಷ್ಣ ಬಿಜೆಪಿ ಪಕ್ಷದಲ್ಲಿದಲ್ಲಿದ್ದರೂ ಡಿಕೆ ಶಿವಕುಮಾರ್ ತಮ್ಮ ಗುರುವನ್ನು ಭೇಟಿಯಾಗುತ್ತಾರೆ. ಇದರ ಜೊತೆಗೆ ಎಸ್ಎಂ ಕೃಷ್ಣ ಮೊಮ್ಮಗನನ್ನೇ ಡಿಕೆಶಿವಕುಮಾರ್ ಮಗಳು ವರಿಸಿದ್ದಾಳೆ. ಇದರಿಂದ ಗುರು ಶಿಷ್ಯರು ಸಂಬಂಧಿಕಾದರು. ಗುರು ಎಸ್ಎಂ ಕೃಷ್ಣರ ಕೃಪಾಶೀರ್ವಾದದಿಂದಲೇ ಡಿ.ಕೆ ಶಿವಕುಮಾರ್ ರಾಜಕೀಯದಲ್ಲಿ ಸಾಕಷ್ಟು ಏಳಿಗೆಯನ್ನು ಹೊಂದಿದ್ದಾರೆ. ಇದರಿಂದ ತಮ್ಮ ಗುರುವನ್ನು ಡಿಕೆ ಶಿವಕುಮಾರ್ ಭೇಟಿಯಾಗಿ ಆರೋಗ್ಯವನ್ನು ವಿಚಾರಿಸಿದ್ದಾರೆ.
ಮೈಸೂರಿಗೆ ತೆರಳಲು ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಹೋಗುವ ಮಾರ್ಗಮಧ್ಯದಲ್ಲಿ ಮಣಿಪಾಲ ಆಸ್ಪತ್ರೆಗೆ ಬೆಳಗ್ಗೆ ಭೇಟಿ ನೀಡಿದ ಶಿವಕುಮಾರ್ ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಸ್.ಎಂ. ಕೃಷ್ಣ ಅವರ ಆರೋಗ್ಯದ ಬಗ್ಗೆ ವೈದ್ಯರೊಂದಿಗೆ ಚರ್ಚೆ ನಡೆಸಿದರು. ವೈದ್ಯರು ಎಸ್ಎಂ ಕೃಷ್ಣರವವರಿಗೆ ವಿಶ್ರಾಂತಿಯನ್ನು ಪಡೆದುಕೊಳ್ಳಲು ಸೂಚನೆಯನ್ನು ನೀಡಿದ್ದಾರೆ. ಇದರಿಂದಾಗಿ ಎಸ್ಎಂಕೆ ಬಳಿಯಲ್ಲಿ ಡಿಕೆಶಿಯು ಹೆಚ್ಚು ಮಾತನಾಡಲು ಸಾಧ್ಯವಾಗಲಿಲ್ಲ.

ಎಸ್ಎಂಕೆ ಪರವಾಗಿ ಡಿಕೆಶಿ ಮನವಿ
"ಎಸ್.ಎಂ ಕೃಷ್ಣ ಸೋಂಕಿನಿಂದ ಚೇತರಿಸಿಕೊಳ್ಳುತ್ತಿದ್ದು, ಅವರಿಗೆ ಹೆಚ್ಚಿನ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ. ಹೀಗಾಗಿ ಅವರ ವಿಶ್ರಾಂತಿಗೆ ಧಕ್ಕೆಯಾಗದಂತೆ ಸದ್ಯ ಯಾರೂ ಅವರ ಭೇಟಿಗೆ ಬರಬಾರದು" ಎಂದು ಶಿವಕುಮಾರ್ ಕೃಷ್ಣ ಅವರ ಪರವಾಗಿ ಮನವಿ ಮಾಡಿದ್ದಾರೆ.

ಸರ್ಕಾರದಲ್ಲಿ ಆಡಳಿತ ನಡೆಸುತ್ತಿಲ್ಲ
ಬಿಜೆಪಿ ಸರ್ಕಾರದಲ್ಲಿ ರೋಗಿಗಳು, ರೈತರು, ಕಾರ್ಮಿಕರಿಗೆ ರಕ್ಷಣೆ ಇಲ್ಲವಾಗಿದೆ. ರಾಜ್ಯದಲ್ಲಿ ಸರ್ಕಾರವೇ ಇಲ್ಲ ಎಂಬಂತೆ ಅದು ವಿಫಲವಾಗಿದೆ. ಕಾನೂನು ಸಚಿವರೇ ಹೇಳಿದ್ದಾರೆ, ನಾವು ಸರ್ಕಾರದಲ್ಲಿ ಆಡಳಿತ ನಡೆಸುತ್ತಿಲ್ಲ, ಕೇವಲ ಸರ್ಕಾರವನ್ನು ತಳ್ಳುತಿದ್ದೇವೆ ಎಂದು. ಹೀಗಾಗಿ ಈ ಸರ್ಕಾರದಿಂದ ಜನರ ರಕ್ಷಣೆ ಅಸಾಧ್ಯವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿನ್ನೆಯ ಆಂಬುಲೆನ್ಸ್ ಸೇವೆ ಸ್ಥಗಿತ ವಿಚಾರವಾಗಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಸಿಎಂ ಆದವರು ಸರ್ಕಾರದ ಮುಖ್ಯಸ್ಥ
ಕಾಂಗ್ರೆಸ್ ಲಿಂಗಾಯತ ಸಿಎಂ ಟಾರ್ಗೆಟ್ ಮಾಡುತ್ತಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, "ಮುಖ್ಯಮಂತ್ರಿ ಬೊಮ್ಮಾಯಿ ಕೇವಲ ಲಿಂಗಾಯತ ಜಾತಿ ಮೇಲೆ ಸಿಎಂ ಆಗಿದ್ದಾರಾ? ಸಂವಿಧಾನದ ಪ್ರಕಾರ ಸಿಎಂ ಆಗಿದ್ದಾರೆ. ನಾವು ಸರ್ಕಾರವನ್ನು ಟಾರ್ಗೆಟ್ ಮಾಡುತ್ತಿದ್ದೇವೆ. ಸಿಎಂ ಆದವರು ಸರ್ಕಾರದ ಮುಖ್ಯಸ್ಥರಾಗಿದ್ದಾರೆ. ಹೀಗಾಗಿ ಸರ್ಕಾರದ ವೈಫಲ್ಯಗಳನ್ನು ಇಟ್ಟುಕೊಂಡಷ್ಟೇ ಅವರನ್ನು ಗುರಿ ಮಾಡುತ್ತಿದ್ದೇವೆ. ಇದರಲ್ಲಿ ಜಾತಿ ಪ್ರಶ್ನೆಯೇ ಇಲ್ಲ" ಎಂದು ಡಿಕೆಶಿ ತಿರುಗೇಟು ನೀಡಿದರು.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications