ಕೆಪಿಸಿಸಿ ಅಧ್ಯಕ್ಷ ಆಯ್ಕೆಗೆ ದಿನಾಂಕ ನಿಗದಿ
ಬೆಂಗಳೂರು, ಫೆಬ್ರವರಿ 24: ಕೆಪಿಸಿಸಿ ಅಧ್ಯಕ್ಷ ಯಾರಾಗಬೇಕು ಎಂಬ ಗೊಂದಲಕ್ಕೆ ತೆರೆ ಎಳೆಯಲು ಹೈಕಮಾಂಡ್ ನಿರ್ಧರಿಸಿದ್ದು, ಕೆಪಿಸಿಸಿ ಅಧ್ಯಕ್ಷ ಆಯ್ಕೆಗೆ ದಿನಾಂಕ ನಿಗದಿ ಮಾಡಲಾಗಿದೆ.
ಈ ಬಗ್ಗೆ ಕಾಂಗ್ರೆಸ್ನ ಹಿರಿಯ ನಾಯಕ ಕೆ.ಬಿ.ಕೋಳಿವಾಡ ಮಾಹಿತಿ ನೀಡಿದ್ದು, 'ಮಾರ್ಚ್ ಮೊದಲ ವಾರದಲ್ಲಿ ಕೆಪಿಸಿಸಿ ಅಧ್ಯಕ್ಷರ ನೇಮಕವಾಗುವ ಸಾಧ್ಯತೆ ಇದೆ' ಎಂದು ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷರ ನೇಮಕ ತಡವಾಗುತ್ತಿರುವುದಕ್ಕೆ ಅಸಮಾಧಾನವನ್ನೂ ವ್ಯಕ್ತಪಡಿಸಿರುವ ಕೋಳಿವಾಡ, 'ಆದಷ್ಟು ಶೀಘ್ರವಾಗಿ ಕೆಪಿಸಿಸಿ ಅಧ್ಯಕ್ಷರ ನೇಮಕ ಮಾಡದೇ ಇದ್ದರೆ, ಪಕ್ಷ ಇನ್ನಷ್ಟು ಸೊರಗುತ್ತದೆ' ಎಂದು ಹೇಳಿದ್ದಾರೆ.

ಕೆಪಿಸಿಸಿ ಪದಾಧಿಕಾರಿಗಳ ನೇಮಕ ಕೂಡ ಆಗಬೇಕಾಗಿದೆ. ಹೈಕಮಾಂಡ್ ಸ್ವತಃ ಗೊಂದಲವಿದೆ. ಎಐಸಿಸಿ ಅಧ್ಯಕ್ಷರು ಯಾರು ಆಗಬೇಕು ಎಂಬ ಗೊಂದಲವಿದೆ. ಒಂದು ಕಡೆ ರಾಹುಲ್ ಗಾಂಧಿ ಒಪ್ಪುತ್ತಿಲ್ಲ. ಸೋನಿಯಾಗಾಂಧಿ ಅವರ ಆರೋಗ್ಯ ಸರಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.
ವಿಧಾನಸಭೆ ಕಲಾಪಗಳಿಗೆ ಮಾಧ್ಯಮಗಳಿಗೆ ನಿಷೇಧ ಹೇರಿರುವ ಬಗ್ಗೆ ಮಾತನಾಡಿದ ಕೋಳಿವಾಡ, ''ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗಕ್ಕಿಂತ ಮಾಧ್ಯಮ ಹೆಚ್ಚು ಮುಖ್ಯವಾಗಿದೆ. ಇದಕ್ಕೆ ನಿರ್ಬಂಧ ಹೇರುವುದು ಸರಿಯಲ್ಲ. ನಾನು ಸ್ಪೀಕರ್ ಆಗಿದ್ದಾಗಲೂ ಎಡಿಟ್ ಮಾಡಿದ ವಿಡಿಯೋ ಮಾಧ್ಯಮಗಳಿಗೆ ಕೊಡೋಣ ಎನ್ನಲಾಗಿತ್ತು. ಆದರೆ ನಾನು ಇದಕ್ಕೆ ಒಪ್ಪಲಿಲ್ಲ'' ಎಂದರು.
ಈಗಿನ ಸ್ಪೀಕರ್ ವಿಶ್ವೇಶರ ಹೆಗಡೆ ಕಾಗೇರಿ ಏಕೆ ಮಾಧ್ಯಮಗಳಿಗೆ ನಿರ್ಬಂಧ ಹೇರಿದ್ದಾರೆ ಗೊತ್ತಿಲ್ಲ, ಯಾರದಾದರೂ ಒತ್ತಡಕ್ಕೆ ಮಣಿದಿದ್ದಾರೋ ಗೊತ್ತಿಲ್ಲ. ಸದನದಲ್ಲಿ ನಡೆಯುವುದು ಎಡಿಟ್ ಆಗಬಾರದು. ಏನು ನಡೆಯುತ್ತದೆಯೋ ಅದು ಜನರಿಗೆ ತಲುಪಬೇಕು. ಶಾಸಕರ ಭವನಕ್ಕೂ ಕೂಡ ಮಾಧ್ಯಮಗಳಿಗೆ ನಿರ್ಬಂಧ ಹೇರಿದ್ದಾರೆ. ಇದು ಸರಿಯಾದ ನಿರ್ಧಾರವಲ್ಲ. ಆದಷ್ಟು ಬೇಗ ಇದರ ಬಗ್ಗೆ ಗಮನಹರಿಸಬೇಕು ಎಂದು ಕೋಳಿವಾಡ ಹೇಳಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications