ಕೆಪಿಸಿಸಿ ವಕ್ತಾರೆ ಭವ್ಯಾ ನರಸಿಂಹಮೂರ್ತಿಗೆ 50ಕ್ಕೂ ಹೆಚ್ಚು ಬೆದರಿಕೆ ಕರೆ
ಬೆಂಗಳೂರು, ಜೂನ್ 12: ಕೆಪಿಸಿಸಿ ವಕ್ತಾರೆ ಭವ್ಯಾ ನರಸಿಂಹಮೂರ್ತಿಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಪುಷ್ಪಾ ಅಮರನಾಥ್ ತಿಳಿಸಿದ್ದಾರೆ.
ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಮಹಿಳಾ ನಾಯಕರಿಯರು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. 'ಭವ್ಯಾ ಅವರಿಗೆ ತೇಜೋವಧೆ ಮಾಡುವ 50ಕ್ಕೂ ಹೆಚ್ಚು ಕರೆಗಳು ಬಂದಿವೆ, ಈ ಬಗ್ಗೆ ಪೊಲೀಸರಿಗೆ ದೂರು ಕೊಡಲಾಗಿದೆ, ಇದು ಒಬ್ಬ ಮಹಿಳೆ ಅಲ್ಲದೇಶದ ಮಹಿಳೆಯರ ಪ್ರಶ್ನೆ' ಎಂದರು.
ಬಿಂದು ಗೌಡ ಅವರ ವಿರುದ್ಧವೂ ತೇಜೋವಧೆ ಮಾಡುತ್ತಿದ್ದಾರೆ, ನಮ್ಮ ನಾಯಕಿ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಅವರನ್ನೂ ಅವಹೇಳನ ಮಾಡುತ್ತಿದ್ದಾರೆ ಎಂದು ದೂರಿದರು.

ನಕಲಿ ಖಾತೆ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ತೇಜೋವಧೆ ಮಾಡಲಾಗುತ್ತಿದೆ, ಇದರ ಹಿಂದಿರುವವರು ಯಾರು, ಅವರನ್ನು ಪತ್ತೆ ಮಾಡಲು ಪೊಲೀಸರಿಂದ ಸಾಧ್ಯವಾಗುತ್ತಿಲ್ಲವೇ?, ಇವರಿಗೆ ತೊಂದರೆ ಕೊಡುತ್ತಿರುವವರು ಯಾರು ಎಂಬುದು ಬಹಿರಂಗವಾಗಬೇಕು ಎಂದು ಒತ್ತಾಯಿಸಿದರು.
'ಧೈರ್ಯವಿದ್ದರೆ ಚರ್ಚೆಗೆ ಬನ್ನಿ, ಅದನ್ನು ಬಿಟ್ಟು ತೇಜೋವಧೆ ಮಾಡಬೇಡಿ, ಇದರ ಹಿಂದೆ ಯುವ ರಾಜಕಾರಣಿಗಳು ಇರುವುದು ತಿಳಿದುಬಂದಿದೆ, ಶೋಭಾ, ಶಶಿಕಲಾ ಜೊಲ್ಲೆ ಇಲ್ವಾ ಯಾಕೆ ಅವರ ಬಗ್ಗೆ ಯಾರೂ ಮಾತನಾಡುವುದಿಲ್ಲ ಎಂದು ಪ್ರಶ್ನಿಸಿದರು.
ಶಾಸಕಿ ಸೌಮ್ಯಾ ರೆಡ್ಡಿ ಮಾತನಾಡಿ, 'ದೇಶದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆ ಇಲ್ಲದಂತಾಗಿದೆ, ಮಹಿಳೆಯರನ್ನು ಲಕ್ಷ್ಮೀ, ಸರಸ್ವತಿ ಎಂದು ಪೂಜೆ ಮಾಡುತ್ತೇವೆ, ನಮಗೆ ಪೂಜೆ ಬೇಡ ಮರ್ಯಾದಿ ಕೊಟ್ಟರು ಸಾಕು' ಎಂದು ಹೇಳಿದರು.
Recommended Video
ಸಾಮಾಜಿಕ ಜಾಲತಾಣ ಸುರಕ್ಷಿತವಾಗಿಲ್ಲ, ಮಹಿಳೆಯರಿಗೆ ಇಷ್ಟೊಂದು ಬೆದರಿಕೆ ಕರೆ ಬರುತ್ತಿದೆ ಎಂದರೆ ಹೇಗೆ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು, ಬಿಜೆಪಿಯಲ್ಲೂ ಮಹಿಳೆಯರಿದ್ದಾರೆ, ಅವರ ಬಗ್ಗೆಯೂ ಈ ರೀತಿ ಕರೆ ಬಂದರೆ ಹೇಗೆ, ಆ ರೀತಿ ಮಹಿಳೆಯರನ್ನು ಹೆದರಿಸುವುದು ಸರಿಯಲ್ಲ, ಸದಸನದಲ್ಲೂ ಇದನ್ನು ಗಮನಕ್ಕೆ ತರುತ್ತೇನೆ ಎಂದರು ಹೇಳಿದರು.
-
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ












Click it and Unblock the Notifications