ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ರಾಜ್ಯ ಕಾಂಗ್ರೆಸ್ ದೂರು
ಬೆಂಗಳೂರು, ಏಪ್ರಿಲ್ 10: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕರ್ನಾಟಕ ಕಾಂಗ್ರೆಸ್ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಸೈನಿಕರು ಪಾಕಿಸ್ತಾನದ ಮೇಳೆ ದಾಳಿ ನಡೆಸಿದ ವಿಷಯವನ್ನು ಚುನಾವಣಾ ಪ್ರಚಾರಕ್ಕೆ ಮೋದಿ ಬಳಸಿಕೊಂಡಿದ್ದಾರೆ ಎಂದು ಕೆಪಿಸಿಸಿ ಆರೋಪಿಸಿದೆ.
ಮಹಾರಾಷ್ಟ್ರದ ಲಾತೂರ್ ನಲ್ಲಿ ನಿನ್ನೆ ಆಯೋಜಿಸಲಾಗಿದ್ದ ಬೃಹತ್ ಸಮಾವೇಶದಲ್ಲಿ ಮೋದಿ ಅವರು ಸೈನಿಕರ ಸಾಧನೆಯನ್ನು ತಮ್ಮ ಸಾಧನೆಯೆಂಬಂತೆ ಬಿಂಬಿಸಿ ತಮ್ಮ ಪರ ಚುನಾವಣಾ ಪ್ರಚಾರ ಮಾಡಿಕೊಂಡಿದ್ದಾರೆ ಎಂದು ಕೆಪಿಸಿಸಿ ಆರೋಪಿಸಿದೆ.

ಸೈನಿಕರನ್ನು ಚುನಾವಣಾ ಪ್ರಚಾರ ವಸ್ತುವನ್ನಾಗಿ ಬಳಸಬಾರದು ಎಂದು ಚುನಾವಣಾ ಆಯೋಗವು ಈ ಮೊದಲೇ ಎಚ್ಚರಿಕೆ ನೀಡಿದೆ. ಹೀಗಾಗಿಯೇ ಕೆಪಿಸಿಸಿಯು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.











Click it and Unblock the Notifications