ಸ್ವಪಕ್ಷೀಯರ ಮೇಲೆಯೇ ನಲಪಾಡ್ ಕಿರಿಕ್: ಡಿಕೆಶಿಗೆ ದೂರು?
ಬೆಂಗಳೂರು, ಜೂನ್ 7: ಕೆಪಿಸಿಸಿ ಯುವ ಘಟಕದ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರಿಂದ ಪಕ್ಷಕ್ಕೆ ಅನುಕೂಲವಾಗುವ ಬದಲು ಇಮೇಜಿಗೆ ಧಕ್ಕೆ ಬಂದ ಉದಾಹರಣೆಗಳೇ ಹೆಚ್ಚು. ಇದಕ್ಕೆ ಈಗ ಇನ್ನೊಂದು ಸೇರ್ಪಡೆಯಾಗಿದೆ.
ಸ್ವಪಕ್ಷೀಯ ಮುಖಂಡರೊಬ್ಬರು ನಲಪಾಡ್ ರೌಡಿಸಂ ವರ್ತನೆ ತೋರುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರಿಗೆ ದೂರು ಸಲ್ಲಿಸಿದ್ದಾರೆ. ಬೆಂಗಳೂರು ಶಿಕ್ಷಕರ ಕ್ಷೇತ್ರದ ಪರಾಜಿತ ಅಭ್ಯರ್ಥಿ ಪ್ರವೀಣ್ ಪೀಟರ್ ಅವರು ನಲಪಾಡ್ ವಿರುದ್ದ ದೂರು ನೀಡಿದ್ದಾರೆ.
ಕಾಂಗ್ರೆಸ್ ಶಾಸಕ ಮತ್ತು ಮಾಜಿ ಸಚಿವ ಕೃಷ್ಣ ಭೈರೇಗೌಡರ ನೇತೃತ್ವದಲ್ಲಿ ನವಸಂಕಲ್ಪ ಶಿಬಿರ ನಡೆಯುತ್ತಿತ್ತು. ಹೆಚ್ಚೆಚ್ಚು ಯುವಕರನ್ನು ಪಕ್ಷದತ್ತ ಸೆಳೆಯುವ ಕೆಲಸವು ನಡೆಯಬೇಕು ಎನ್ನುವ ಚರ್ಚೆ ನಡೆಯುತ್ತಿತ್ತು. ಆ ವೇಳೆ ಪ್ರವೀಣ್ ಪೀಟರ್, ಯುವ ಘಟಕದ ಅಧ್ಯಕ್ಷರಿಗೆ ಒಳ್ಳೆಯ ಇಮೇಜ್ ಇರಬೇಕು, ಹಾಗಿದ್ದರೆ, ಯುವಕರನ್ನು ಪಕ್ಷಕ್ಕೆ ಕರೆತರಲು ಸುಲಭವಾಗುತ್ತದೆ ಎನ್ನುವ ಅಭಿಪ್ರಾಯವನ್ನು ಮಂಡಿಸಿದರು ಎಂಬುದು ಸುದ್ದಿ.

ಪ್ರವೀಣ್ ಪೀಟರ್ ಹೇಳಿಕೆಯಿಂದ ಸಿಟ್ಟಾದ ನಲಪಾಡ್ ಇವರು ನನ್ನ ಬಗ್ಗೆಯೇ ಮಾತನಾಡುತ್ತಿದ್ದಾರೆಂದು ಆಕ್ರೋಶ ಹೊರಹಾಕಿದ್ದಾರೆ. ಈ ಸಭೆಯ ನಂತರ ನನಗೆ ಬೆದರಿಕೆ ಕರೆಗಳು ಬರುತ್ತಿವೆ, ಇದು ನಲಪಾಡ್ ಕಡೆಯವರದ್ದೇ ಎಂದು ಪ್ರವೀಣ್ ಪೀಟರ್ ಅನುಮಾನ ವ್ಯಕ್ತ ಪಡಿಸಿದ್ದಾರೆ.
ಈ ಬಗ್ಗೆ ಪೀಟರ್ ಅವರು ಕೆಪಿಸಿಸಿ ಅಧ್ಯಕ್ಷರಿಗೆ ದೂರು ನೀಡಿದ್ದಾರೆಂದು ತಿಳಿದು ಬಂದಿದೆ. ಈ ಸಂಬಂಧ ಮಾಧ್ಯಮದವರು ಪ್ರಶ್ನಿಸಿದಾಗ, "ನನಗೂ ಅದಕ್ಕೂ ಏನೂ ಸಂಬಂಧವಿಲ್ಲ, ಈ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ" ಎಂದು ನಲಪಾಡ್ ಪ್ರತಿಕ್ರಿಯೆ ನೀಡಿದ್ದಾರೆ.

ಕಾಂಗ್ರೆಸ್ ನಾಯಕ ಎಂ. ಬಿ. ಪಾಟೀಲ್ ಮತ್ತು ಸಚಿವ ಅಶ್ವಥ್ ನಾರಾಯಣ ಭೇಟಿಯಾಗಿದ್ದ ಸಂದರ್ಭದಲ್ಲಿ ರಮ್ಯಾ ಮಾಡಿದ್ದ ಟ್ವೀಟ್ ವ್ಯಾಪಕ ಪರವಿರೋಧ ಚರ್ಚೆಗೆ ಕಾರಣವಾಗಿತ್ತು. ಆ ಸಂದರ್ಭದಲ್ಲಿ "ಯಾವುದಾದರೂ ಒಂದು ಕುರ್ಚಿ ಮೇಲೆ ಟವಲ್ ಹಾಕಲು ರಮ್ಯಾ ಬಂದಿದ್ದಾರಾ?" ಎಂದು ನಲಪಾಡ್ ವ್ಯಂಗ್ಯವಾಡಿದ್ದರು. ಇದಕ್ಕೆ, "ಜಾಮೀನಿನ ಮೇಲೆ ಹೊರಗಿರುವ ಹುಡುಗ ನನ್ನ ಪ್ರಾಮಾಣಿಕತೆಯನ್ನು ಪ್ರಶ್ನಿಸುತ್ತಿದ್ದಾನೆ"ಎಂದು ರಮ್ಯಾ ತಿರುಗೇಟು ನೀಡಿದ್ದರು.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ












Click it and Unblock the Notifications