ಶಾಸಕ ಹರತಾಳು ಹಾಲಪ್ಪ ಪ್ರತಿಭಟನೆಯಿಂದ ಎಚ್ಚೆತ್ತ ಕೆಪಿಎಲ್ಸಿ
ಬೆಂಗಳೂರು, ನವೆಂಬರ್ 15: ಬಿಜೆಪಿ ಶಾಸಕ ಹರತಾಳು ಹಾಲಪ್ಪ ಅವರು ಇಂದು ನಡೆಸಿದ ಪ್ರತಿಭಟನೆಯಿಂದ ಕೂಡಲೇ ಎಚ್ಚೆತ್ತ ಕೆಪಿಎಲ್ಸಿ (ಕರ್ನಾಟಕ ಸಾರ್ವಜನಿಕ ಭೂ ನಿಗಮ) ಹಾಲಪ್ಪ ಅವರ ಆಗ್ರಹಕ್ಕೆ ಶೀಘ್ರ ಪ್ರತಿಕ್ರಿಯೆ ನೀಡಿದೆ.
ಸಾಗರ ಶಾಸಕ ಹರತಾಳು ಹಾಲಪ್ಪ ಅವರು ಸಿಗಂದೂರು ಸೇತುವೆ ನಿರ್ಮಾಣದ ಕುರಿತು ಕರ್ನಾಟಕ ವಿದ್ಯುತ್ ನಿರಪೇಕ್ಷಣಾ ಪತ್ರ ನೀಡುವಲ್ಲಿ ಅನುಸರಿಸುತ್ತಿರುವ ವಿಳಂಬ ನೀತಿ ವಿರುದ್ಧ ಪ್ರತಿಭಟನೆ ಮಾಡಿದ್ದರು.
ನಗರದ ಶಕ್ತಿಸೌಧದ ವಿರುದ್ಧ ಹಾಲಪ್ಪ ಮಾಡಿದ ಒಂಟಿ ಪ್ರತಿಭಟನೆಗೆ ಹೆದರಿದ ಕೆಪಿಎಲ್ಸಿ ಸಂಜೆ ವೇಳೆಗೆ ಸಿಗಂದೂರು ಸೇತುವೆ ನಿರ್ಮಾಣ ಕುರಿತ ಎನ್ಒಸಿ (ನಿರಪೇಕ್ಷಣಾ ಪತ್ರ)ವನ್ನು ನೀಡಿದೆ.

ಕೆಪಿಎಲ್ಸಿ ನೀಡಿರುವ ನಿರಪೇಕ್ಷಣಾ ಪತ್ರವನ್ನು ತನ್ನ ಫೇಸ್ಬುಕ್ ಖಾತೆಯಲ್ಲಿ ಪ್ರಕಟಿಸಿರುವ ಶಾಸಕ, ಎನ್ಓಸಿ ನೀಡಲು 45 ದಿನಗಳಿಂದ ಮೀನಾಮೇಷ ಎಣಿಸುತ್ತಿದ್ದ ಅಧಿಕಾರಿಗಳು , KPCL ಕಚೇರಿ ಎದುರು ಧರಣಿ ಕೂತ ವಿಷಯ ಮಾಧ್ಯಮದಲ್ಲಿ ಬಿತ್ತರವಾಗುತ್ತಿದ್ದಂತೆ , ಕೆಲವೇ ಗಂಟೆಗಳಲ್ಲಿ N.O.C ನೀಡಿದ್ದಾರೆ' ಎಂದು ಬರೆದುಕೊಂಡಿದ್ದಾರೆ.
ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಸಿಗಂದೂರಿಗೆ ಸಂಪರ್ಕ ಕಲ್ಪಿಸುವ ಸೇತುವೆ ಕಾಮಗಾರಿಗೆ ಕೇಂದ್ರ ಭೂ ಸಾರಿಗೆ ಸಚಿವ ನಿತೀನ್ ಗಡ್ಕರಿ ಚಾಲನೆ ನೀಡಿದ್ದರು. ಈ ಸೇತುವೆ ನಿರ್ಮಾಣಕ್ಕೆ 7 ಸಾವಿರ ಕೋಟಿ ವೆಚ್ಚವಾಗುತ್ತದೆ.ಸೇತುವೆ ಹೇಗಿರುತ್ತದೆ, ಪ್ಲಾನಿಂಗ್ ಏನು: ಅಂಬಾರಗೋಡ್ಲು-ಕಳಸವಳ್ಳಿ ಮಧ್ಯೆ 2.16 ಕಿ,ಮೀ ಉದ್ದದ ಸೇತುವೆ ನಿರ್ಮಾಣವಾಗಲಿದೆ. ಆದರೆ ಇದಕ್ಕೆ ಕೆಪಿಎಲ್ಸಿ ನಿರಪೇಕ್ಷಣಾ ಪತ್ರ ನೀಡಿಲ್ಲ ಎಂದು ಅವರು ಆಕ್ರೋಶಗೊಂಡಿದ್ದರು.
ತಮ್ಮ ಪ್ರತಿಭಟನೆಯ ಸುದ್ದಿಯನ್ನು ಬಿತ್ತರ ಮಾಡಿದ ಸುದ್ದಿ ಮಾಧ್ಯಮಗಳಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications