ಕೆಪಿಎಎಸ್ ಸಿ ಪ್ರಶ್ನೆ ಪತ್ರಿಕೆ ಲೀಕ್: ಪೊಲೀಸ್ ಕಾನ್ಸ್ಟೇಬಲ್ ಸೆರೆ
ಬೆಂಗಳೂರು, ಜನವರಿ 27: ಕರ್ನಾಟಕ ಲೋಕ ಸೇವಾ ಆಯೋಗದ ಪ್ರಥಮ ದರ್ಜೆ ಸಹಾಯಕ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಶಾಮೀಲಾಗಿರುವ ಪೊಲೀಸ್ ಪೇದೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಹಾವೇರಿ ತಾಲೂಕಿನ ಅಗಡಿ ಗ್ರಾಮದ ಪೇದೆ ಬೆಂಗಳೂರಿನ ಜಿಲ್ಲಾ ಶಸಸ್ತ್ರ ಮೀಸಲು ಪಡೆಯಲ್ಲಿ ಕಾನ್ಸ್ಟೇಬಲ್ ಬಂಧಿತ ಆರೋಪಿ. ಮಂಗಳವಾರ ಬೆಳಗ್ಗೆ ಹಾವೇರಿ ತಾಲೂಕಿನಲ್ಲಿ ಆರೋಪಿ ಪೇದೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಬಂಧನಕ್ಕೆ ಒಳಗಾಗಿದ್ದ ಕೆಪಿಎಸ್ ಶಿ ಶೀಘ್ರ ಲಿಪಗಾರ್ತಿ ಸನಾ ಬೇಡಿ ವಾಟ್ಸಪ್ ಮೂಲಕ ಪ್ರಶ್ನೆ ಪತ್ರಿಕೆಯನ್ನು ಕಳುಹಿಸಿದ್ದಳು. ಪ್ರಶ್ನೆ ಪತ್ರಿಕೆ ಕುರಿತು ಬೇಡಿ ಜತೆ ಪೇದೆ ಚಾಟ್ ಮಾಡಿದ್ದ. ಸನಾ ಬೇಡಿಯ ವಾಟ್ಸಪ್ ಸಂದೇಶ ಮಾಹಿತಿ ಆಧರಿಸಿ ಪೇದೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಕೆಪಿಎಸ್ ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ಈವರೆಗೂ ಹದಿನೈದು ಆರೋಪಿಗಳನ್ನು ಬಂಧಿಸಿದ್ದು, 82 ಲಕ್ಷ ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ. ಈ ಮೊದಲು ಪ್ರಶ್ನೆ ಪತ್ರಿಕೆಯು ಪರೀಕ್ಷಾ ಕೇಂದ್ರಗಳ ಭದ್ರತಾ ಕೊಠಡಿಗಳಲ್ಲಿ ಲೀಕ್ ಆಗಿತ್ತು. ಇದೀಗ ಕೆಪಿಎಸ್ ಸಿ ಕೇಂದ್ರ ಕಚೇರಿಯಿಂದಲೇ ಸೋರಿಕೆಯಾಗಿರುವುದು ಕೆಪಿಎಸ್ ಸಿ ಗೆ ನುಂಗುಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ.

ಬಂಧಿತ ಪ್ರಮುಖ ಆರೋಪಿಗಳಾದ ಚಂದ್ರು, ರಾಚಪ್ಪ ಹಾಗೂ ಸನಾ ಬೇಡಿಯ ಕರೆ ಮಾಹಿತಿ ಆಧರಿಸಿ ಬಂಧನ ಕಾರ್ಯಾಚರಣೆ ಮುಂದುವರೆದಿದ್ದು, ಮತ್ತಷ್ಟು ಆರೋಪಿಗಳು ಸಿಕ್ಕಿ ಬೀಳಲಿದ್ದಾರೆ. ಕೆಲ ದಿನಗಳ ಹಿಂದೆಯೇ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದು, ಸಾಕಷ್ಟು ಅಭ್ಯರ್ಥಿಗಳನ್ನು ಸಂಪರ್ಕಿಸಿ ಹಣ ಪಡೆಯಲಾಗಿದೆ. ಹಣ ನೀಡಿ ಪ್ರಶ್ನೆ ಪತ್ರಿಕೆ ಪಡೆದವರಿಗೂ ಸಿಸಿಬಿ ಕಂಟಕ ಎದುರಾಗಿದೆ. ಇನ್ನು ಕೆಪಿಎಸ್ ಸಿ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Recommended Video
-
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್












Click it and Unblock the Notifications