ಕೆಪಿಎಸ್ಸಿಯ ಎಸ್ಡಿಎ, ಎಫ್ಡಿಎ ಪರೀಕ್ಷೆಗಳು ಮುಂದೂಡಿಕೆ
ಬೆಂಗಳೂರು, ಫೆಬ್ರವರಿ 3: ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್ಸಿ) ಫೆ. 04 ರಂದು ನಡೆಸಲು ಉದ್ದೇಶಿಸಿದ್ದ ಪ್ರಥಮ ದರ್ಜೆ ಸಹಾಯಕ (ಎಫ್ಡಿಎ) ಮತ್ತು ದ್ವಿತೀಯ ದರ್ಜೆ ಸಹಾಯಕ (ಎಸ್ಡಿಎ) ಹುದ್ದೆಗಳ ಪರೀಕ್ಷೆಯನ್ನು ಮುಂದೂಡಿದೆ.
ಈ ಸಂಬಂಧ ತನ್ನ ವೆಬ್ ಸೈಟ್ ನಲ್ಲಿ ಅಧಿಕೃತ ಪ್ರಕಟಣೆ ನೀಡಿರುವ ಕೆ.ಪಿ.ಎಸ್ಸಿ, ಫೆ.04 ರಂದು ನಡೆಸಲು ನಿಗಧಿಯಾಗಿದ್ದ ಎಫ್.ಡಿ.ಎ ಪರೀಕ್ಷೆಗಳನ್ನು ಪೋಸ್ಟ್ ಪೋನ್ ಮಾಡಿರುವುದಾಗಿ ಸ್ಪಷ್ಟಪಡಿಸಿದೆ. ಈ ಮಾಹಿತಿ ಆಧಾರಿಸಿ ಜಸ್ಟ್ ಕನ್ನಡ ಡಾಟ್ ಇನ್, ಕೆ.ಪಿ.ಎಸ್ಸಿ ಮೂಲವನ್ನು ಸಂಪರ್ಕಿಸಿದಾಗ, ಫೆ.04 ರಂದು ಬಂದ್ ನಡೆಸಲು ಕೆಲ ಸಂಘಟನೆಗಳು ಕರೆ ನೀಡಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಹಿತದೃಷ್ಠಿ ಗಮನದಲ್ಲಿಟ್ಟುಕೊಂಡು ಪರೀಕ್ಷೆಗಳನ್ನು ಮುಂದೂಡುವುದು ಅನಿವಾರ್ಯ ಎಂದರು.
ಎಫ್ ಡಿಎ, ಎಸ್ ಡಿಎ ಲಿಖಿತ ಪರೀಕ್ಷೆ ವೇಳಾಪಟ್ಟಿ ಪ್ರಕಟಗೊಂಡ ಕೆಲ ದಿನಗಳ ಬಳಿಕವೇ ಈ ಪರೀಕ್ಷೆಗಳನ್ನು ಮುಂದೂಡಲಾಗುತ್ತದೆ ಎಂಬ ವದಂತಿ ಕೆಲವೆಡೆ ಹಬ್ಬಿತ್ತು. ಆದರೆ ಆಗ ಈ ವಿಷಯ ತಳ್ಳಿಹಾಕಿದ್ದ ಕೆಪಿಎಸ್ಸಿ ಈಗಾಗಲೇ ಪ್ರಕಟಿಸಿರುವ ತಾತ್ಕಾಲಿಕ ವೇಳಾಪಟ್ಟಿ ಪ್ರಕಾರವೇ ಲಿಖಿತ ಪರೀಕ್ಷೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದ್ದರು. ಆದರಂತೆ ವೇಳಾಪಟ್ಟಿ ಯಂತೆ ಎಫ್ಡಿಎ ಹುದ್ದೆಗಳಿಗೆ ಫೆಬ್ರವರಿ 4 ರಂದು ಹಾಗೂ ಎಸ್ಡಿಎ ಹುದ್ದೆಗಳಿಗೆ ಫೆಬ್ರವರಿ 11 ರಂದು ಲಿಖಿತ ಪರೀಕ್ಷೆ ನಡೆಸಲು ದಿನಾಂಕ ನಿಗಧಿಯಾಗಿತ್ತು.

ಲಿಖಿತ ಪರೀಕ್ಷೆ ನಡೆಸಲು ಪೂರಕವಾಗಿ ಜನವರಿ 26ರ ಒಳಗೆ ಪರೀಕ್ಷೆಯ ಪ್ರವೇಶ ಪತ್ರವನ್ನು ಅಭ್ಯರ್ಥಿಗಳಿಗೆ ವೆಬ್ ಮೂಲಕ ಒದಗಿಸಲಾಗಿತ್ತು. ಪರೀಕ್ಷಾ ಕೇಂದ್ರಗಳಿಗೆ ಅಭ್ಯರ್ಥಿಗಳ ಹಂಚಿಕೆ ಮತ್ತಿತರ ಕೆಲಸಗಳು ಕೂಡ ಪೂರ್ಣಗೊಂಡಿತ್ತು.
ಒಟ್ಟು 1, 812 ಹುದ್ದೆಗಳಿಗೆ ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆಯೇ ನೇಮಕಾತಿ ನಡೆಯಲಿದ್ದು, ಪ್ರಥಮ ದರ್ಜೆ ಸಹಾಯಕರು ಒಟ್ಟು 961 ಹುದ್ದೆ ಹಾಗೂ ದ್ವಿತೀಯ ದರ್ಜೆ ಸಹಾಯಕರು ಒಟ್ಟು 851 ಹುದ್ದೆಗಳ ನೇಮಕಾತಿಗೆ ಸೆಪ್ಟಂಬರ್ ನಲ್ಲಿ ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆ ಹೊರಡಿಸಿತ್ತು ಎಂಬುದನ್ನು ಸ್ಮರಿಸಿಕೊಳ್ಳಬಹುದು.
ಆದರೆ ಇದೀಗ ಕೆಲ ಸಂಘಟನೆಗಳು ಫೆ.04 ರಂದು ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಗೆ ತೊಂದರೆಯಾಗದಂತೆ ಪರೀಕ್ಷೆ ಮುಂದೂಡಲಾಗಿದೆ.
-
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು?












Click it and Unblock the Notifications