ಕೆಪಿಎಸ್ಸಿಯ ಎಸ್ಡಿಎ, ಎಫ್ಡಿಎ ಪರೀಕ್ಷೆಗಳು ಮುಂದೂಡಿಕೆ
ಬೆಂಗಳೂರು, ಫೆಬ್ರವರಿ 3: ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್ಸಿ) ಫೆ. 04 ರಂದು ನಡೆಸಲು ಉದ್ದೇಶಿಸಿದ್ದ ಪ್ರಥಮ ದರ್ಜೆ ಸಹಾಯಕ (ಎಫ್ಡಿಎ) ಮತ್ತು ದ್ವಿತೀಯ ದರ್ಜೆ ಸಹಾಯಕ (ಎಸ್ಡಿಎ) ಹುದ್ದೆಗಳ ಪರೀಕ್ಷೆಯನ್ನು ಮುಂದೂಡಿದೆ.
ಈ ಸಂಬಂಧ ತನ್ನ ವೆಬ್ ಸೈಟ್ ನಲ್ಲಿ ಅಧಿಕೃತ ಪ್ರಕಟಣೆ ನೀಡಿರುವ ಕೆ.ಪಿ.ಎಸ್ಸಿ, ಫೆ.04 ರಂದು ನಡೆಸಲು ನಿಗಧಿಯಾಗಿದ್ದ ಎಫ್.ಡಿ.ಎ ಪರೀಕ್ಷೆಗಳನ್ನು ಪೋಸ್ಟ್ ಪೋನ್ ಮಾಡಿರುವುದಾಗಿ ಸ್ಪಷ್ಟಪಡಿಸಿದೆ. ಈ ಮಾಹಿತಿ ಆಧಾರಿಸಿ ಜಸ್ಟ್ ಕನ್ನಡ ಡಾಟ್ ಇನ್, ಕೆ.ಪಿ.ಎಸ್ಸಿ ಮೂಲವನ್ನು ಸಂಪರ್ಕಿಸಿದಾಗ, ಫೆ.04 ರಂದು ಬಂದ್ ನಡೆಸಲು ಕೆಲ ಸಂಘಟನೆಗಳು ಕರೆ ನೀಡಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಹಿತದೃಷ್ಠಿ ಗಮನದಲ್ಲಿಟ್ಟುಕೊಂಡು ಪರೀಕ್ಷೆಗಳನ್ನು ಮುಂದೂಡುವುದು ಅನಿವಾರ್ಯ ಎಂದರು.
ಎಫ್ ಡಿಎ, ಎಸ್ ಡಿಎ ಲಿಖಿತ ಪರೀಕ್ಷೆ ವೇಳಾಪಟ್ಟಿ ಪ್ರಕಟಗೊಂಡ ಕೆಲ ದಿನಗಳ ಬಳಿಕವೇ ಈ ಪರೀಕ್ಷೆಗಳನ್ನು ಮುಂದೂಡಲಾಗುತ್ತದೆ ಎಂಬ ವದಂತಿ ಕೆಲವೆಡೆ ಹಬ್ಬಿತ್ತು. ಆದರೆ ಆಗ ಈ ವಿಷಯ ತಳ್ಳಿಹಾಕಿದ್ದ ಕೆಪಿಎಸ್ಸಿ ಈಗಾಗಲೇ ಪ್ರಕಟಿಸಿರುವ ತಾತ್ಕಾಲಿಕ ವೇಳಾಪಟ್ಟಿ ಪ್ರಕಾರವೇ ಲಿಖಿತ ಪರೀಕ್ಷೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದ್ದರು. ಆದರಂತೆ ವೇಳಾಪಟ್ಟಿ ಯಂತೆ ಎಫ್ಡಿಎ ಹುದ್ದೆಗಳಿಗೆ ಫೆಬ್ರವರಿ 4 ರಂದು ಹಾಗೂ ಎಸ್ಡಿಎ ಹುದ್ದೆಗಳಿಗೆ ಫೆಬ್ರವರಿ 11 ರಂದು ಲಿಖಿತ ಪರೀಕ್ಷೆ ನಡೆಸಲು ದಿನಾಂಕ ನಿಗಧಿಯಾಗಿತ್ತು.

ಲಿಖಿತ ಪರೀಕ್ಷೆ ನಡೆಸಲು ಪೂರಕವಾಗಿ ಜನವರಿ 26ರ ಒಳಗೆ ಪರೀಕ್ಷೆಯ ಪ್ರವೇಶ ಪತ್ರವನ್ನು ಅಭ್ಯರ್ಥಿಗಳಿಗೆ ವೆಬ್ ಮೂಲಕ ಒದಗಿಸಲಾಗಿತ್ತು. ಪರೀಕ್ಷಾ ಕೇಂದ್ರಗಳಿಗೆ ಅಭ್ಯರ್ಥಿಗಳ ಹಂಚಿಕೆ ಮತ್ತಿತರ ಕೆಲಸಗಳು ಕೂಡ ಪೂರ್ಣಗೊಂಡಿತ್ತು.
ಒಟ್ಟು 1, 812 ಹುದ್ದೆಗಳಿಗೆ ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆಯೇ ನೇಮಕಾತಿ ನಡೆಯಲಿದ್ದು, ಪ್ರಥಮ ದರ್ಜೆ ಸಹಾಯಕರು ಒಟ್ಟು 961 ಹುದ್ದೆ ಹಾಗೂ ದ್ವಿತೀಯ ದರ್ಜೆ ಸಹಾಯಕರು ಒಟ್ಟು 851 ಹುದ್ದೆಗಳ ನೇಮಕಾತಿಗೆ ಸೆಪ್ಟಂಬರ್ ನಲ್ಲಿ ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆ ಹೊರಡಿಸಿತ್ತು ಎಂಬುದನ್ನು ಸ್ಮರಿಸಿಕೊಳ್ಳಬಹುದು.
ಆದರೆ ಇದೀಗ ಕೆಲ ಸಂಘಟನೆಗಳು ಫೆ.04 ರಂದು ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಗೆ ತೊಂದರೆಯಾಗದಂತೆ ಪರೀಕ್ಷೆ ಮುಂದೂಡಲಾಗಿದೆ.
-
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ












Click it and Unblock the Notifications