ಮಧ್ಯರಾತ್ರಿಯಿಂದ ಕೆ. ಆರ್. ಮಾರುಕಟ್ಟೆ ಓಪನ್; ಸಿದ್ಧತೆ ಹೇಗಿದೆ?
ಬೆಂಗಳೂರು, ಆಗಸ್ಟ್ 31: ಇಂದು ಮಧ್ಯರಾತ್ರಿಯಿಂದ ಬೆಂಗಳೂರು ನಗರದ ಕೆ. ಆರ್. ಮಾರುಕಟ್ಟೆ ಮತ್ತು ಕಲಾಸಿಪಾಳ್ಯ ಮಾರುಕಟ್ಟೆ ಬಾಗಿಲು ತೆರೆಯಲಿದೆ. ವ್ಯಾಪಾರಿಗಳು ಮತ್ತು ಜನರಿಗೆ ಕೆಲವು ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದ್ದು, ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಸೂಚಿಸಲಾಗಿದೆ.
Recommended Video
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೆ. ಆರ್. ಮಾರುಕಟ್ಟೆ ಮತ್ತು ಕಲಾಸಿಪಾಳ್ಯ ಮಾರುಕಟ್ಟೆಯನ್ನು ಆರಂಭಿಸಲು ಒಪ್ಪಿಗೆ ನೀಡಿದೆ. ಸೆಪ್ಟೆಂಬರ್ 1ರಿಂದ ಮಾರುಕಟ್ಟೆ ಆರಂಭವಾಗಲಿದೆ. ಕೋವಿಡ್ ಲಾಕ್ ಡೌನ್ ಘೋಷಣೆ ಮಾಡಿದ ಬಳಿಕ ಮಾರುಕಟ್ಟೆಯನ್ನು ಮುಚ್ಚಲಾಗಿತ್ತು.
ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ ಪ್ರಸಾದ್ ಮಾರುಕಟ್ಟೆ ಪ್ರಾರಂಭಿಸುವ ಹಿನ್ನೆಲೆಯಲ್ಲಿ ಚಿಕ್ಕಪೇಟೆ ಶಾಸಕ ಉದಯ ಗರುಡಾಚಾರ್ ಅವರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಾರುಕಟ್ಟೆಯಲ್ಲಿ ಮಾಡಿಕೊಂಡಿರುವ ಸಿದ್ಧತೆಗಳನ್ನು ವೀಕ್ಷಿಸಿದರು.
ಬೆಂಗಳೂರು ನಗರದಲ್ಲಿ ಭಾನುವಾರವೂ 2821 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿಯೇ ಅತಿ ಹೆಚ್ಚು ಸೋಂಕಿತರು ಇರುವ ನಗರ ಬೆಂಗಳೂರು. ನಗರದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 1,27,263.

ಜೀವ ಮತ್ತು ಜೀವನ
ಜುಲೈ ಮತ್ತು ಆಗಸ್ಟ್ ತಿಂಗಳನ್ನು ಹೋಲಿಕೆ ಮಾಡಿ ನೋಡಿದಾಗ ಜುಲೈನಲ್ಲಿ ಬೆಂಗಳೂರು ನಗರದಲ್ಲಿ ಮರಣ ಪ್ರಮಾಣ 1.85% ಇತ್ತು. ಅದು ಈಗ ಕಡಿಮೆ ಆಗಿ 1,53% ಆಗಿದೆ. ನಗರಲ್ಲಿ ಪಾಸಿಟಿವಿಟಿ ರೇಟ್ ಜುಲೈನಲ್ಲಿ ಶೇ 24% ಇತ್ತು, ಈಗ ಅದು 15% ಆಗಿದೆ. ಜೀವ ಬಹುಮುಖ್ಯವಾದುದು, ಜೀವನ ಕೂಡ ಅತ್ಯಮೂಲ್ಯವಾಗಿದೆ. ಆದ್ದರಿಂದ, ಮಾರುಕಟ್ಟೆ ಓಪನ್ ಮಾಡಲು ಬಿಬಿಎಂಪಿ ಒಪ್ಪಿಗೆ ನೀಡಿದೆ.

ಮಧ್ಯರಾತ್ರಿಯಿಂದ ಮಾರುಕಟ್ಟೆ ಓಪನ್
ಮಾರುಕಟ್ಟೆಯಲ್ಲಿ ಹೆಚ್ಚು ಜನ ಸೇರಿದರೆ ಸೋಂಕು ಹರಡಬಹುದೆಂದು ಬಂದ್ ಮಾಡಲಾಗಿತ್ತು. ಇಂದು ಮಧ್ಯರಾತ್ರಿಯಿಂದ ಮಾರುಕಟ್ಟೆ ಪುನಃ ಓಪನ್ ಆಗಲಿದೆ. ಬಿಬಿಎಂಪಿ ಅನೇಕ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ. ವ್ಯಾಪಾರಿಗಳು ಮತ್ತು ಗ್ರಾಹಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳ ಬೇಕು.

15 ಜನ ಮಾರ್ಷಲ್ ನಿಯೋಜನೆ
ಮಾರುಕಟ್ಟೆಯಲ್ಲಿ 15 ಜನ ಮಾರ್ಷಲ್ಗಳನ್ನು ನೇಮಿಸಲಾಗಿದೆ. ನಿಯಮ ಉಲ್ಲಂಘಿಸದಂತೆ ಅವರು ನೋಡಿಕೊಳ್ಳಲಿದ್ದಾರೆ. ನಿಯಮ ಉಲ್ಲಂಘಿಸಿದರೆ ದಂಡ ವಿಧಿಸುತ್ತಾರೆ. 3 ಕೋಟಿ ವೆಚ್ಚದಲ್ಲಿ ಕಟ್ಟಡಕ್ಕೆ ಅಗ್ನಿನಿರೋಧಕ ವ್ಯವಸ್ಥೆ ಮಾಡಲಾಗುವುದು. ಅಲ್ಲಿಯವರೆಗೆ ಅಗ್ನಿಶಾಮಕ ದಳ ಕಾರ್ಯ ನಿರ್ವಹಿಸಲಿದೆ.

ರೈತರು ಪ್ರತಿಭಟನೆ ಮಾಡಿದ್ದರು
ಕಳೆದ ವಾರ ರೈತರು ಕೆ. ಆರ್. ಮಾರುಕಟ್ಟೆಯಲ್ಲಿ ಪ್ರತಿಭಟನೆ ನಡೆಸಿದ್ದರು. ಮಾರುಕಟ್ಟೆಯನ್ನು ತೆರೆಯಲು ಬಿಬಿಎಂಪಿ ಅನುಮತಿ ನೀಡಬೇಕು ಎಂದು ಒತ್ತಾಯಿಸಿದ್ದರು.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ












Click it and Unblock the Notifications