ಸೆ.1ರಿಂದ ಕೆ. ಆರ್. ಮಾರ್ಕೆಟ್ ಓಪನ್; ನಿಯಮ ಪಾಲನೆ ಕಡ್ಡಾಯ
ಬೆಂಗಳೂರು, ಆಗಸ್ಟ್ 30: ಬೆಂಗಳೂರು ನಗರದ ಪ್ರಮುಖ ವಾಣಿಜ್ಯ ಕೇಂದ್ರ ಕೆ. ಆರ್. ಮಾರುಕಟ್ಟೆಯನ್ನು ಸೆಪ್ಟೆಂಬರ್ 1ರಿಂದ ಆರಂಭಿಸಲು ಬಿಬಿಎಂಪಿ ತೀರ್ಮಾನಿಸಿದೆ. ಲಾಕ್ ಡೌನ್ ಘೋಷಣೆ ಮಾಡಿದ ದಿನದಿಂದ ಮಾರುಕಟ್ಟೆಯನ್ನು ಬಂದ್ ಮಾಡಲಾಗಿತ್ತು.
Recommended Video

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೆ. ಆರ್. ಮಾರುಕಟ್ಟೆ ತೆರೆಯಲು ಅನುಮತಿ ನೀಡಿದೆ. ಆದರೆ ಬಿಬಿಎಂಪಿ ಹಾಕಿರುವ ನಿಯಮಗಳನ್ನು ಪಾಲನೆ ಮಾಡುವುದು ಕಡ್ಡಾಯವಾಗಿದೆ. ನಿಯಮಗಳನ್ನು ಪಾಲನೆ ಮಾಡದಿದ್ದಲ್ಲಿ ಸ್ಥಳದಲ್ಲಿಯೇ ದಂಡ ಕಟ್ಟಬೇಕು.
ಮಾರುಕಟ್ಟೆ ತೆರೆದರೂ ಸಾಮಾಜಿಕ ಅಂತರ ಕಾಪಾಡುವುದು, ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಮಾರುಕಟ್ಟೆಗೆ ಬರುವ ಜನರು ಸಾಮಾಜಿಕ ಅಂತ ಕಾಪಾಡುವ ಬಗ್ಗೆ ನಿಗಾವಹಿಸಲು ಮಾರ್ಷಲ್ಗಳನ್ನು ನೇಮಕ ಮಾಡಲಾಗುತ್ತದೆ.
ಸೆಪ್ಟೆಂಬರ್ 1ರಿಂದ ಕೆ. ಆರ್. ಮಾರುಕಟ್ಟೆ ಓಪನ್?

ಜನರು ಮಾಸ್ಕ್ ಹಾಕಿಲ್ಲ, ಸಾಮಾಜಿಕ ಅಂತರ ಕಾಪಾಡಿಲ್ಲ ಎಂದರೆ ಮಾರ್ಷಲ್ಗಳು ಸ್ಥಳದಲ್ಲಿಯೇ ದಂಡವನ್ನು ಹಾಕಲಿದ್ದಾರೆ. ವ್ಯಾಪಾರಿಗಳಿಗೂ ಹಲವು ಸೂಚನೆಗಳನ್ನು ಬಿಬಿಎಂಪಿ ನೀಡಲಿದೆ.
ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಜೈನ್, ಬೆಂಗಳೂರು ಕೇಂದ್ರ ಕ್ಷೇತ್ರದ ಸಂಸದ ಪಿ. ಸಿ. ಮೋಹನ್ ಈಗಾಗಲೇ ಕೆ. ಆರ್. ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾರುಕಟ್ಟೆಯಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮದ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಹೆಚ್ಚು ಜನರು ಸೇರುತ್ತಾರೆ, ಸಾಮಾಜಿಕ ಅಂತರ ಕಾಪಾಡಲು ಕಷ್ಟವಾಗಲಿದೆ ಎಂಬ ಕಾರಣಕ್ಕೆ ಲಾಕ್ ಡೌನ್ ಘೋಷಣೆಯದಾಗ ಕೆ. ಆರ್. ಮಾರುಕಟ್ಟೆಯನ್ನು ಬಂದ್ ಮಾಡಲಾಗಿತ್ತು. ಕಲಾಸಿಪಾಳ್ಯ ಮಾರುಕಟ್ಟೆ ಓಪನ್ ಮಾಡುವ ಕುರಿತು ಇನ್ನೂ ತೀರ್ಮಾನ ಕೈಗೊಂಡಿಲ್ಲ.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ












Click it and Unblock the Notifications