ಕೆ.ಆರ್. ಮಾರ್ಕೆಟ್ ಠಾಣೆ ಕಾನ್ ಸ್ಟೇಬಲ್ ಬಲಿ ಪಡೆದ ಬಿಎಂಟಿಸಿ

ಬೆಂಗಳೂರು, ಮಾರ್ಚ್‌ 04: ಕಿಲ್ಲರ್ ಬಿಎಂಟಿಸಿ ಪೊಲೀಸ್ ಕಾನ್‌ಸ್ಟೇಬಲ್ ನನ್ನು ಬಲಿ ಪಡೆದಿದೆ. ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಬ್ಯಾಡರಹಳ್ಳಿ ಸಮೀಪ ಅಪಘಾತ ಸಂಭವಿಸಿದ್ದು, ಕೆ.ಆರ್. ಮಾರ್ಕೆಟ್ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಸಾವನ್ನಪ್ಪಿದ್ದಾರೆ.

ರಾಮಾಚಾರಿ (47) ಸಾವನ್ನಪ್ಪಿದ ಕಾನ್‌ಸ್ಟೇಬಲ್. ಕೆ.ಆರ್. ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ರಾಮಚಾರಿ ಕಾರ್ಯ ನಿರ್ವಹಿಸುತ್ತಿದ್ದರು. ಇಂದು ಮಧ್ಯಾಹ್ನ 1.45 ರ ಸುಮಾರಿಗೆ ಬ್ಯಾಡರಹಳ್ಳಿ ಪೊಲೀಸ್ ಠಾಣೆ ಸಮೀಪ ಬೈಕ್ ನಲ್ಲಿ ಚಲಿಸುತ್ತಿದ್ದ ರಾಮಚಾರಿಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಅವರ ತಲೆಗೆ ತೀವ್ರತರ ಪೆಟ್ಟಾಗಿದೆ. ಗಾಯಾಳು ಪೊಲೀಸ್ ಪೇದೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಷ್ಟರಲ್ಲಿ ಪ್ರಾಣ ಪಕ್ಷಿ ಹಾರಿ ಹೋಗಿತ್ತು.

KR Market station Constable dies in road accident at Byadarahalli

Recommended Video

      'ಸದನದಲ್ಲಿ ಒನ್ ನೇಷನ್ ಒನ್ ಎಲೆಕ್ಷನ್ ಬಗ್ಗೆ ಚರ್ಚೆಗೆ ಯಾರು ಅವಕಾಶ ಕೊಟ್ಟಿದ್ದು?-ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಡಿಕೆಶಿ ಆಕ್ರೋಶ | Oneindia Kannada

      ಬಿಎಂಟಿಸಿ ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಬ್ಯಾಡರಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ರಾಮಚಾರಿ ಅವರ ಸಾವಿಗೆ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ ಎಂ. ಪಾಟೀಲ ಸಂತಾಪ ಸೂಚಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+