KR Pura to Byappanahalli Metro: ಮುಗಿಯುವ ಹಂತದಲ್ಲಿ ಕಾಮಗಾರಿ : ವಿಡಿಯೋ ನೋಡಿ
ಬೆಂಗಳೂರು, ಮೇ 24: ಬಹು ನಿರೀಕ್ಷಿತ ಬೈಯಪ್ಪನಹಳ್ಳಿ-ಕೆಆರ್ ಪುರ ನಡುವಿನ ಮೆಟ್ರೋ ಕಾಮಗಾರಿ ಮುಕ್ತಾಯದ ಹಂತಕ್ಕೆ ಬಂದಿದೆ. ಜುಲೈ 15 ರಂದು ಕಾರ್ಯಾಚರಣೆ ಆರಂಭಿಸಲು ಬಿಎಂಆರ್ ಸಿಎಲ್ ಸಜ್ಜಾಗಿದೆ.
ಕಾಮಗಾರಿ ನಡೆಯುತ್ತಿರುವ ವಿಡಿಯೋವನ್ನು ಟ್ವಿಟರ್ ನಲ್ಲಿ ಹಂಚಿಕೊಳ್ಳಲಾಗಿದೆ. ಬಿರುಸಿನಿಂದ ಕಾಮಗಾರಿ ನಡೆಯುತ್ತಿದ್ದು ನಿಗದಿತ ಸಮಯಕ್ಕೆ ಮೆಟ್ರೋ ಸಂಚಾರ ಆರಂಭಿಸಲು ಬಿಎಂಆರ್ ಸಿಎಲ್ ಪಣತೊಟ್ಟಿದೆ. ಇದರ ವಿಡಿಯೋ ಹಂಚಿಕೊಂಡಿದ್ದು, ಕಾಮಗಾರಿ ನಡೆಯುತ್ತಿರುವುದನ್ನು ನೋಡಬಹುದಾಗಿದೆ.

ವೈಟ್ಫೀಲ್ಡ್ಗೆ ನೇರ ಮೆಟ್ರೋ ಸಂಚಾರಕ್ಕೆ ತೊಡಕಾಗಿರುವ ಬೈಯಪ್ಪನಹಳ್ಳಿ-ಕೆಆರ್ ಪುರ ನಡುವಿನ ಮೆಟ್ರೋ ಕಾರ್ಯಾಚರಣೆ ಜುಲೈ 15 ರಂದು ಆರಂಭವಾಗಲಿದೆ. ಈ 2 ಕಿಮೀ ಉದ್ದದ ಮೆಟ್ರೋ ರೈಲು ಮಾರ್ಗ ವಿಸ್ತರಣೆಯು ನೇರಳೆ ಮಾರ್ಗದ ಬೈಯಪ್ಪನಹಳ್ಳಿ ಟರ್ಮಿನಲ್ನಿಂದ ಹಸಿರು ಮಾರ್ಗದ ಕೆಆರ್ ಪುರಂ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುತ್ತದೆ. ಇದರಿಂದಾಗಿ ಹೊರವರ್ತುಲ ರಸ್ತೆಯಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲಿದೆ.
ಕೆಂಗೇರಿ-ಬೈಯಪ್ಪನಹಳ್ಳಿ ಕಾರಿಡಾರ್ ಅನ್ನು ಇತ್ತೀಚೆಗೆ ನಿರ್ಮಿಸಲಾಗಿರುವ ವೈಟ್ಫೀಲ್ಡ್-ಕೆಆರ್ ಪುರಂ ಮೆಟ್ರೋ ವಿಭಾಗಕ್ಕೆ ಸಂಪರ್ಕ ಕಲ್ಪಿಸುತ್ತದೆ. ಈ ಮಾರ್ಗದಲ್ಲಿ ಮೆಟ್ರೋ ಕಾರ್ಯಾಚರಣೆ ಆರಂಭವಾದರೆ, ಪ್ರಯಾಣಿಕರು ಇನ್ನು ಮುಂದೆ ಬೈಯಪ್ಪನಹಳ್ಳಿ ಮತ್ತು ಕೆಆರ್ ಪುರ ನಡುವಿನ ಫೀಡರ್ ಬಸ್ಗಳನ್ನು ಅವಲಂಬಿಸುವ ಅಗತ್ಯ ಇರುವುದಿಲ್ಲ.
2 ಕಿಮೀ ಮೆಟ್ರೋ ಸಮಚಾರ ವಿಸ್ತರಣೆ ಮುಗಿದರೆ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳವಾಗಲಿದೆ. ಈ ಮಾರ್ಗವೊಂದರಲ್ಲೆ ಪ್ರತಿನಿತ್ಯ ಒಂದು ಲಕ್ಷಕ್ಕೂ ಅಧಿಕ ಪ್ರಯಾಣಿಕರು ಓಡಾಡಲಿದ್ದಾರೆ. ಬೈಯಪ್ಪನಹಳ್ಳಿ-ಕೆಆರ್ ಪುರ ಭಾಗವು ವಿಶೇಷವಾಗಿ ವೈಟ್ಫೀಲ್ಡ್/ಐಟಿಪಿಬಿ ಟೆಕ್ ಕಾರಿಡಾರ್ಗೆ ಪ್ರಯಾಣಿಸುವ ಟೆಕ್ಕಿಗಳಿಗೆ ಸಹಾಯ ಮಾಡುತ್ತದೆ.
ಟ್ರಾಫಿಕ್ ಸಮಸ್ಯೆಗೆ ಮುಕ್ತಿ
ಬೈಯಪ್ಪನಹಳ್ಳಿ-ಕೆಆರ್ ಪುರ ಮೆಟ್ರೋ ವಿಭಾಗವು ನಮ್ಮ ಮೆಟ್ರೋ ಅಭಿವೃದ್ಧಿಯಲ್ಲಿ ಪ್ರಮುಖ ಮೈಲಿಗಲ್ಲು ಎಂದು ಪರಿಗಣಿಸಲಾಗಿದೆ. ಪ್ರತಿನಿತ್ಯ ಒಂದು ಲಕ್ಷ ಜನ ಮೆಟ್ರೋದಲ್ಲಿ ಓಡಾಡುವುದರಿಂದ ಈ ಭಾಗದಲ್ಲಿ ಟ್ರಾಫಿಕ್ ಸಮಸ್ಯೆಗೆ ಪ್ರಮುಖ ಪರಿಹಾರ ಸಿಕ್ಕಂತಾಗುತ್ತದೆ. ಬೆಂಗಳೂರಿಗೆ ವಿಶ್ವದರ್ಜೆಯ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಕಲ್ಪಿಸುವ ಯೋಜನೆಗೆ ಮತ್ತಷ್ಟು ಬಲ ಬಂದಂತಾಗುತ್ತದೆ. ಟ್ರಾಫಿಕ್ನಲ್ಲಿ ಗಂಟೆಗಟ್ಟಲೆ ಕಾಯುವ ಕಿರಿಕಿರಿ ತಪ್ಪುವುದರಿಂದ ಈ ಯೋಜನೆ ಬಗ್ಗೆ ಸಾಕಷ್ಟು ನಿರೀಕ್ಷೆ ಹೊಂದಲಾಗಿದೆ.
ಈ ಯೋಜನೆಗಾಗಿ ಒಟ್ಟು 1000 ಕೋಟಿ ರುಪಾಯಿ ವ್ಯಯಿಸಲಾಗಿದೆ. ಬೈಯಪ್ಪನಹಳ್ಳಿ-ಕೆಆರ್ ಪುರ ಮೆಟ್ರೋ ವಿಭಾಗ, ನಮ್ಮ ಮೆಟ್ರೋದ 2 ನೇ ಹಂತದ ವಿಸ್ತರಣೆಯ ಭಾಗವಾಗಿದೆ, ಬೈಯಪ್ಪನಹಳ್ಳಿ, ಹೂಡಿ, ಮಹದೇವಪುರ, ಕೆಆರ್ ಪುರಂ ಮತ್ತು ಕೆಆರ್ ಪುರಂ ಬಸ್ ನಿಲ್ದಾಣ ಸೇರಿದಂತೆ ಆರು ನಿಲ್ದಾಣಗಳನ್ನು ಹೊಂದಿದೆ. ನಿಲ್ದಾಣಗಳನ್ನು ಕಲಾತ್ಮಕವಾಗಿ ವಿನ್ಯಾಸಗೊಳಿಸಲಾಗಿದೆ.
-
IPL 2026: ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಐಪಿಎಲ್ ಟಿಕೆಟ್ ಇದ್ದರೆ 'ನಮ್ಮ ಮೆಟ್ರೋ' ಪ್ರಯಾಣ ಉಚಿತ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications