ಬೆಂಗಳೂರು ವಾಹನ ಸವಾರರೇ ಗಮನಿಸಿ! ಈ ಪ್ರಮುಖ ಜಂಕ್ಷನ್ನಲ್ಲಿ ಸಂಚಾರ ಬದಲಾವಣೆ
ಬೆಂಗಳೂರು: ಹಲವು ಕ್ರಮಗಳನ್ನು ತೆಗೆದುಕೊಂಡ ಹೊರತಾಗಿ ಕೂಡ ಬೆಂಗಳೂರು ಸಂಚಾರ ದಟ್ಟಣೆ ಇನ್ನೂ ಪ್ರಮುಖ ಸಮಸ್ಯೆಯಾಗಿ ಉಳಿಸಿಕೊಂಡಿದೆ. ಅದರಲ್ಲೂ ಕೆಲವು ಜಂಕ್ಷನ್ಗಳಲ್ಲಿ ಟ್ರಾಫಿಕ್ ವಾಹನ ಸವಾರರನ್ನು ಹೈರಾಣಾಗಿಸಿದೆ. ಇಂತಹ ಜಂಕ್ಷನ್ಗಳಲ್ಲಿ ಟ್ರಾಫಿಕ್ ಕಡಿಮೆ ಮಾಡಲು ಸಂಚಾರ ಪೊಲೀಸರು ಹಲವು ಬದಲಾವಣೆಗಳು, ಪ್ರಯೋಗಗಳನ್ನು ಮಾಡುತ್ತಲೇ ಇದ್ದಾರೆ.
ಬೆಂಗಳೂರು ನಗರದಲ್ಲಿ ಹೆಚ್ಚು ಟ್ರಾಫಿಕ್ ಇರುವ ಜಂಕ್ಷನ್ಗಳಲ್ಲಿ ಒಂದಾದ ಟಿ ಸಿ ಪಾಳ್ಯ ಜಂಕ್ಷನ್ನಲ್ಲಿ ಸುಗಮ ಸಂಚಾರಕ್ಕಾಗಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಕೆಆರ್ ಪುರ ಸಂಚಾರ ಪೊಲೀಸರು ಪ್ರಾಯೋಗಿಕವಾಗಿ ಸಣ್ಣ ಪುಟ್ಟ ಹೊಂದಾಣಿಕೆಗಳನ್ನು ಮಾಡಿದ್ದಾರೆ.

ಟಿ.ಸಿ.ಪಾಳ್ಯ ಮೂಲಕ ನಗರದ ಕಡೆಗೆ ಸಾಗುವ ವಾಹನಗಳು ಭಟ್ಟರಹಳ್ಳಿ ಸಿಗ್ನಲ್ನಲ್ಲಿ ಯು-ಟರ್ನ್ ತೆಗೆದುಕೊಂಡು ಮುಂದೆ ಸಾಗುವ ಮೊದಲು ಹಳೆ ಮದ್ರಾಸ್ ರಸ್ತೆಯನ್ನು ತೆಗೆದುಕೊಳ್ಳುವಂತೆ ವಾಹನ ಸವಾರರಿಗೆ ಮನವಿ ಮಾಡಲಾಗಿದೆ.
ಹೊಸಕೋಟೆ ಕಡೆಯಿಂದ ಟಿ.ಸಿ.ಪಾಳ್ಯ ಕಡೆಗೆ ಹೋಗುವ ವಾಹನಗಳು ಕೆ.ಆರ್.ಪುರ ಸರಕಾರಿ ಕಾಲೇಜು ಬಳಿ ಯು-ಟರ್ನ್ ಪಡೆದು ಮುಂದೆ ಸಾಗುವಂತೆ ಸೂಚನೆ ನೀಡಲಾಗಿದೆ.
ಮೇಡಹಳ್ಳಿಯಿಂದ ಟಿಸಿ ಪಾಳ್ಯಕ್ಕೆ ಸರ್ವಿಸ್ ರಸ್ತೆಯಲ್ಲಿ ಸಾಗುವ ವಾಹನಗಳು ಟಿಸಿ ಪಾಳ್ಯ ಜಂಕ್ಷನ್ಗೆ ಮೊದಲು ಮೀಡಿಯನ್ ತೆರೆಯುವಿಕೆಯಿಂದ ಹಳೇ ಮದ್ರಾಸ್ ರಸ್ತೆಗೆ ಹೋಗಬೇಕು. ಟಿಸಿ ಪಾಳ್ಯದಿಂದ ಮೇಡಹಳ್ಳಿವರೆಗಿನ ಸರ್ವಿಸ್ ರಸ್ತೆಯಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ ಎಂದು ಸಂಚಾರ ಪೊಲೀಸರು ಸೂಚನೆ ನೀಡಿದ್ದಾರೆ.
ಸುಗಮ ಸಂಚಾರಕ್ಕಾಗಿ ಈ ಬದಲಾವಣೆಗಳನ್ನು ಮಾಡಲಾಗಿದ್ದು ವಾಹನ ಸವಾರರು ಸಹಕರಿಸಬೇಕು ಎಂದು ಮನವಿ ಮಾಡಲಾಗಿದೆ. ಈ ಪ್ರಯೋಗ ಯಶಸ್ವಿಯಾದರೆ ಟಿ ಸಿ ಪಾಳ್ಯ ಜಂಕ್ಷನ್ನಲ್ಲಿ ವಾಹನ ದಟ್ಟಣೆ ಕಡಿಮೆಯಾಗಬಹುದು ಎಂದು ನಿರೀಕ್ಷೆ ಮಾಡಲಾಗಿದೆ.
ಹಲವು ಜಂಕ್ಷನ್ಗಳಲ್ಲಿ ಪ್ರಯೋಗ
ಬೆಂಗಳೂರು ಸಂಚಾರ ಪೊಲೀಸರು ಹಲವು ಜಂಕ್ಷನ್ಗಳಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಈ ರೀತಿಯ ಪ್ರಯೋಗಗಳನ್ನು ಮಾಡಿದ್ದಾರೆ. ಗೊರಗುಂಟೆ ಪಾಳ್ಯ ಜಂಕ್ಷನ್ನಲ್ಲಿ ಕೂಡ ಈ ಮೊದಲು ಇದೇ ರೀತಿಯ ಪ್ರಯೋಗ ಮಾಡಲಾಗಿತ್ತು, ಮಾರ್ಗ ಬದಲಾವಣೆ ಮಾಡುವ ಮೂಲಕ ಟ್ರಾಫಿಕ್ ಕಡಿಮೆ ಮಾಡಲು ಪ್ರಯತ್ನಿಸಲಾಗಿತ್ತಾದರೂ ಅದು ಯಶಸ್ವಿಯಾಗಲಿಲ್ಲ.
ಈಗ ಟಿ ಸಿ ಪಾಳ್ಯ ಜಂಕ್ಷನ್ನಲ್ಲಿ ಸಂಚಾರ ಪೊಲೀಸರು ಪ್ರಯೋಗಕ್ಕೆ ಮುಂದಾಗಿದ್ದು, ಇದರಿಂದ ಸಂಚಾರ ದಟ್ಟಣೆ ಕಡಿಮೆಯಾಗುತ್ತಾ? ವಾಹನ ಸವಾರರ ಪ್ರತಿಕ್ರಿಯೆ ಹೇಗಿರುತ್ತೆ ಎನ್ನುವ ಪ್ರಶ್ನೆಗಳಿಗೆ ಕೆಲವು ದಿನಗಳಲ್ಲೇ ಉತ್ತರ ಸಿಗಲಿದೆ.
-
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ









Click it and Unblock the Notifications