ಬೆಂಗಳೂರು ವಾಹನ ಸವಾರರೇ ಗಮನಿಸಿ! ಈ ಪ್ರಮುಖ ಜಂಕ್ಷನ್ನಲ್ಲಿ ಸಂಚಾರ ಬದಲಾವಣೆ
ಬೆಂಗಳೂರು: ಹಲವು ಕ್ರಮಗಳನ್ನು ತೆಗೆದುಕೊಂಡ ಹೊರತಾಗಿ ಕೂಡ ಬೆಂಗಳೂರು ಸಂಚಾರ ದಟ್ಟಣೆ ಇನ್ನೂ ಪ್ರಮುಖ ಸಮಸ್ಯೆಯಾಗಿ ಉಳಿಸಿಕೊಂಡಿದೆ. ಅದರಲ್ಲೂ ಕೆಲವು ಜಂಕ್ಷನ್ಗಳಲ್ಲಿ ಟ್ರಾಫಿಕ್ ವಾಹನ ಸವಾರರನ್ನು ಹೈರಾಣಾಗಿಸಿದೆ. ಇಂತಹ ಜಂಕ್ಷನ್ಗಳಲ್ಲಿ ಟ್ರಾಫಿಕ್ ಕಡಿಮೆ ಮಾಡಲು ಸಂಚಾರ ಪೊಲೀಸರು ಹಲವು ಬದಲಾವಣೆಗಳು, ಪ್ರಯೋಗಗಳನ್ನು ಮಾಡುತ್ತಲೇ ಇದ್ದಾರೆ.
ಬೆಂಗಳೂರು ನಗರದಲ್ಲಿ ಹೆಚ್ಚು ಟ್ರಾಫಿಕ್ ಇರುವ ಜಂಕ್ಷನ್ಗಳಲ್ಲಿ ಒಂದಾದ ಟಿ ಸಿ ಪಾಳ್ಯ ಜಂಕ್ಷನ್ನಲ್ಲಿ ಸುಗಮ ಸಂಚಾರಕ್ಕಾಗಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಕೆಆರ್ ಪುರ ಸಂಚಾರ ಪೊಲೀಸರು ಪ್ರಾಯೋಗಿಕವಾಗಿ ಸಣ್ಣ ಪುಟ್ಟ ಹೊಂದಾಣಿಕೆಗಳನ್ನು ಮಾಡಿದ್ದಾರೆ.

ಟಿ.ಸಿ.ಪಾಳ್ಯ ಮೂಲಕ ನಗರದ ಕಡೆಗೆ ಸಾಗುವ ವಾಹನಗಳು ಭಟ್ಟರಹಳ್ಳಿ ಸಿಗ್ನಲ್ನಲ್ಲಿ ಯು-ಟರ್ನ್ ತೆಗೆದುಕೊಂಡು ಮುಂದೆ ಸಾಗುವ ಮೊದಲು ಹಳೆ ಮದ್ರಾಸ್ ರಸ್ತೆಯನ್ನು ತೆಗೆದುಕೊಳ್ಳುವಂತೆ ವಾಹನ ಸವಾರರಿಗೆ ಮನವಿ ಮಾಡಲಾಗಿದೆ.
ಹೊಸಕೋಟೆ ಕಡೆಯಿಂದ ಟಿ.ಸಿ.ಪಾಳ್ಯ ಕಡೆಗೆ ಹೋಗುವ ವಾಹನಗಳು ಕೆ.ಆರ್.ಪುರ ಸರಕಾರಿ ಕಾಲೇಜು ಬಳಿ ಯು-ಟರ್ನ್ ಪಡೆದು ಮುಂದೆ ಸಾಗುವಂತೆ ಸೂಚನೆ ನೀಡಲಾಗಿದೆ.
ಮೇಡಹಳ್ಳಿಯಿಂದ ಟಿಸಿ ಪಾಳ್ಯಕ್ಕೆ ಸರ್ವಿಸ್ ರಸ್ತೆಯಲ್ಲಿ ಸಾಗುವ ವಾಹನಗಳು ಟಿಸಿ ಪಾಳ್ಯ ಜಂಕ್ಷನ್ಗೆ ಮೊದಲು ಮೀಡಿಯನ್ ತೆರೆಯುವಿಕೆಯಿಂದ ಹಳೇ ಮದ್ರಾಸ್ ರಸ್ತೆಗೆ ಹೋಗಬೇಕು. ಟಿಸಿ ಪಾಳ್ಯದಿಂದ ಮೇಡಹಳ್ಳಿವರೆಗಿನ ಸರ್ವಿಸ್ ರಸ್ತೆಯಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ ಎಂದು ಸಂಚಾರ ಪೊಲೀಸರು ಸೂಚನೆ ನೀಡಿದ್ದಾರೆ.
ಸುಗಮ ಸಂಚಾರಕ್ಕಾಗಿ ಈ ಬದಲಾವಣೆಗಳನ್ನು ಮಾಡಲಾಗಿದ್ದು ವಾಹನ ಸವಾರರು ಸಹಕರಿಸಬೇಕು ಎಂದು ಮನವಿ ಮಾಡಲಾಗಿದೆ. ಈ ಪ್ರಯೋಗ ಯಶಸ್ವಿಯಾದರೆ ಟಿ ಸಿ ಪಾಳ್ಯ ಜಂಕ್ಷನ್ನಲ್ಲಿ ವಾಹನ ದಟ್ಟಣೆ ಕಡಿಮೆಯಾಗಬಹುದು ಎಂದು ನಿರೀಕ್ಷೆ ಮಾಡಲಾಗಿದೆ.
ಹಲವು ಜಂಕ್ಷನ್ಗಳಲ್ಲಿ ಪ್ರಯೋಗ
ಬೆಂಗಳೂರು ಸಂಚಾರ ಪೊಲೀಸರು ಹಲವು ಜಂಕ್ಷನ್ಗಳಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಈ ರೀತಿಯ ಪ್ರಯೋಗಗಳನ್ನು ಮಾಡಿದ್ದಾರೆ. ಗೊರಗುಂಟೆ ಪಾಳ್ಯ ಜಂಕ್ಷನ್ನಲ್ಲಿ ಕೂಡ ಈ ಮೊದಲು ಇದೇ ರೀತಿಯ ಪ್ರಯೋಗ ಮಾಡಲಾಗಿತ್ತು, ಮಾರ್ಗ ಬದಲಾವಣೆ ಮಾಡುವ ಮೂಲಕ ಟ್ರಾಫಿಕ್ ಕಡಿಮೆ ಮಾಡಲು ಪ್ರಯತ್ನಿಸಲಾಗಿತ್ತಾದರೂ ಅದು ಯಶಸ್ವಿಯಾಗಲಿಲ್ಲ.
ಈಗ ಟಿ ಸಿ ಪಾಳ್ಯ ಜಂಕ್ಷನ್ನಲ್ಲಿ ಸಂಚಾರ ಪೊಲೀಸರು ಪ್ರಯೋಗಕ್ಕೆ ಮುಂದಾಗಿದ್ದು, ಇದರಿಂದ ಸಂಚಾರ ದಟ್ಟಣೆ ಕಡಿಮೆಯಾಗುತ್ತಾ? ವಾಹನ ಸವಾರರ ಪ್ರತಿಕ್ರಿಯೆ ಹೇಗಿರುತ್ತೆ ಎನ್ನುವ ಪ್ರಶ್ನೆಗಳಿಗೆ ಕೆಲವು ದಿನಗಳಲ್ಲೇ ಉತ್ತರ ಸಿಗಲಿದೆ.
-
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications