ಯಾವ ಬಿಜೆಪಿ ನಾಯಕರೂ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿಲ್ಲ: ಕೃಷ್ಣಬೈರೇಗೌಡ
Recommended Video

ಬೆಂಗಳೂರು, ಏಪ್ರಿಲ್ 12: ಕೇಂದ್ರದ ಬಿಜೆಪಿ ಸರಕಾರದ ಐದು ವರ್ಷಗಳ ಅವಧಿಯಲ್ಲಿ ದೇಶದ ಶ್ರೀಮಂತರು ಮತ್ತಷ್ಟು ಶ್ರೀಮಂತರಾಗಿದ್ದಾರೆ. ಆದರೆ ಬಡವರು ಮತ್ತು ದುಡಿಯುವ ವರ್ಗದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಇಂತಹ ಆರ್ಥಿಕ ಅಸಮತೋಲನ ಬೆಳವಣಿಗೆ ದೇಶಕ್ಕೆ ಒಟ್ಟಾರೆ ಅಭಿವೃದ್ಧಿಗೆ ಮಾರಕ ಎಂದು ಕೃಷ್ಣ ಬೈರೇಗೌಡ ಅಭಿಪ್ರಾಯಪಟ್ಟರು.
ಗುರುವಾರ ಮಹಾಲಕ್ಷ್ಮಿ ಲೇಔಟ್ ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಕೆಬಿಜಿ ಅವರು, ಕೇಂದ್ರದ ಬಿಜೆಪಿ ಸರಕಾರ ದೇಶದ ಸರ್ವತೋಮುಖ ಅಭಿವೃದ್ಧಿಯನ್ನು ನಿರ್ಲಕ್ಷ್ಯ ಮಾಡಿದೆ. ಬದಲಿಗೆ ಶ್ರೀಮಂತರ ಪರವಾಗಿ ಕೆಲಸ ಮಾಡಿದೆ. ಈ ಅವಧಿಯಲ್ಲಿ ದೇಶದ ಶ್ರೀಮಂತರು ಮತ್ತಷ್ಟು ಧನಿಕರಾಗಿದ್ದಾರೆ. ಆದರೆ ದುಡಿಯುವ ವರ್ಗ ಮತ್ತು ಬಡವರ ಆರ್ಥಿಕ ಪರಿಸ್ಥಿತಿಗಳಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಇಂತಹ ಆರ್ಥಿಕ ಬೆಳವಣಿಗೆ ಭವಿಷ್ಯದ ದೃಷ್ಟಿಯಿಂದ ಅಪಾಯಕಾರಿ. ಈ ಪರಿಸ್ಥಿತಿಗೆ ಕೇಂದ್ರದ ಬಿಜೆಪಿ ಸರಕಾರವೇ ಕಾರಣ ಎಂದರು.
ಬೆಲೆ ನಿಯಂತ್ರಣ ಮಾಡುವಲ್ಲಿ ಕೇಂದ್ರ ಸರಕಾರ ಸಂಪೂರ್ಣ ವಿಫಲವಾಗಿದೆ. ಬೆಲೆ ನಿಯಂತ್ರಣ ಮಾಡುವಲ್ಲಿ ಸೋತಿದೆ. ಇದರ ಪರಿಣಾಮ ನೇರವಾಗಿ ಬಡವರ ಬದುಕನ್ನು ಶೋಚನೀಯ ಸ್ಥಿತಿಗೆ ತಳ್ಳಿದೆ. ಶ್ರೀಮಂತರ ಮೂರೂವರೆ ಲಕ್ಷ ಕೋಟಿ ಸಾಲ ಮನ್ನಾ ಮಾಡಿರುವ ಕೇಂದ್ರ ಸರಕಾರ ರೈತರ ಸಾಲ ಮನ್ನಾ ವಿಚಾರಕ್ಕೆ ಬಂದರೆ ಅದೊಂದು ಅಶಿಸ್ತಿನ ಕ್ರಮ ಎನ್ನುತ್ತದೆ. ಇದರಿಂದಲೇ ಅವರು ಯಾರ ಪರ ಕೆಲಸ ಮಾಡುತ್ತಾರೆ ಎಂಬುದು ತಿಳಿಯುತ್ತದೆ ಎಂದರು.

'ಬಿಜೆಪಿ ನಾಯಕರು ದೇಶಕ್ಕಾಗಿ ಏನು ತ್ಯಾಗ ಮಾಡಿದ್ದಾರೆ'
ಸದಾ ದೇಶಪ್ರೇಮ, ದೇಶದ ಭದ್ರತೆ ಬಗ್ಗೆ ಮಾತನಾಡುವ ಬಿಜೆಪಿ ಪಕ್ಷದವರು ನಮ್ಮನ್ನು ದೇಶದ್ರೋಹಿಗಳಂತೆ ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇವರಷ್ಟೇ ದೇಶಪ್ರೇಮಿಗಳಾ? ಕಾಂಗ್ರೆಸ್ ಸರ್ಕಾರ ಇದ್ದ ಕಾಲದಲ್ಲಿ ದೇಶಕ್ಕೆ ಭದ್ರತೆ ಇರಲಿಲ್ಲವೇ? ನಾವು ಮಾಡಿರುವ ದೇಶ ದ್ರೋಹವಾದರೂ ಏನು? ಇಂದಿರಾಗಾಂಧಿ ಹಾಗೂ ರಾಜೀವ್ ಗಾಂಧಿ ಅವರು ದೇಶಕ್ಕಾಗಿ ಪ್ರಾಣವನ್ನೇ ಕೊಟ್ಟರು. ಬಿಜೆಪಿ ನಾಯಕರು ಯಾರು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ? ಇವರಿಂದ ನಾವು ದೇಶಪ್ರೇಮ ಕಲಿಯಬೇಕೇ?ಅಣ್ಣ ತಮ್ಮಂದಿರ ನಡುವೆ ದ್ವೇಷ ತಂದಿಡುವ ಇವರು ದೇಶ ಕಟ್ಟುತ್ತಾರಾ? ಕಪ್ಪು ಹಣ ತಂದು ತಲಾ ಹದಿನೈದು ಲಕ್ಷ ಹಂಚುತ್ತೇವೆ ಎಂದು ಹಸಿ ಸುಳ್ಳು ಹೇಳಿಕೊಂಡೇ ಬಡವರನ್ನು ಶೋಷಿಸಿದ ಇವರ ನಿಜ ಬಣ್ಣ ಏನೆಂದು ತಡವಾಗಿ ಆದರೂ ದೇಶದ ಜನಕ್ಕೆ ಅರ್ಥವಾಗುತ್ತಿದೆ ಎಂದರು.

ಗೋಪಾಲಯ್ಯ ಮನೆಯಲ್ಲಿ ಮುಖಂಡರೊಂದಿಗೆ ಸಭೆ
ಗೋಪಾಲಯ್ಯ ಮನೆಯಲ್ಲಿ ಮುಖಂಡರೊಂದಿಗೆ ಸಭೆ
ಮಹಾಲಕ್ಷ್ಮಿ ಲೇಔಟ್ ಶಾಸಕ ಕೆ.ಗೋಪಾಲಯ್ಯ ಅವರ ಮನೆಯಲ್ಲಿ ನೇಕಾರರ ಜೊತೆ ಸಭೆ ನಡೆಸಿ, ನೋಟ್ ಬ್ಯಾನ್ ನಿಂದಾಗಿ ಸಣ್ಣಪುಟ್ಟ ಉದ್ಯಮಗಳು ಮುಚ್ಚಿ ಹೋದವು. ಅದರ ಪರಿಣಾಮ ನಿಮ್ಮ ಮೇಲೆ ಕೂಡ ಅಗಿದೆ. ಸದಾನಂದಗೌಡರು ಕ್ಷೇತ್ರದಿಂದ ಗೆದ್ದು ಸಚಿವರಾದ ಬಳಿಕ ಇಲ್ಲಿನ ಜನರಿಗಾಗಿ ಮಾಡಿದ ಕೆಲಸವಾದರೂ ಏನು ಎಂಬುದನ್ನು ನೀವು ವಿವೇಚನೆ ಮಾಡಿ. ಆಮೇಲೆ ಯಾರಿಗೆ ಮತ ನೀಡಬೇಕು ಎಂಬುದನ್ನು ನಿರ್ಧರಿಸಿ ಎಂದು ಮತದಾರರಿಗೆ ಮನವಿ ಮಾಡಿದರು.

ಉದ್ಯಾನಗಳಿಗೆ ತೆರಳಿ ಮತ ಯಾಚನೆ
ಇದಕ್ಕೂ ಮುನ್ನ ಬೆಳಗ್ಗೆ ಆರೂವರೆಗೆ ಶಂಕರಮಠ ರಸ್ತೆಯ ವಿವೇಕಾನಂದ ಉದ್ಯಾನ ಹಾಗೂ ನಂದಿನಿ ಲೇಔಟ್ ನ ಸರ್ಕ್ಯುಲರ್ ಉದ್ಯಾನಗಳಿಗೆ ತೆರಳಿ ವಾಯು ವಿಹಾರಕ್ಕೆ ಆಗಮಿಸಿದ್ದ ಸಾರ್ವಜನಿಕರಿಗೆ ಮತ ನೀಡುವಂತೆ ಮನವಿ ಮಾಡಿದರು. ಬಳಿಕ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿ ವ್ಯಾಪಾರಿಗಳ ಕುಂದು ಕೊರತೆಗಳನ್ನು ಆಲಿಸಿ ಮತಯಾಚನೆ ಮಾಡಿದರು. ನಂತರ, ಕಮಲಾನಗರ ಮಾರ್ಕೆಟ್ ಮತ್ತು ಗೆಳೆಯರ ಬಳಗ ವೃತ್ತದಲ್ಲಿ ಸಾರ್ವಜನಿಕ ಸಭೆ ನಡೆಸಿ ಮತಯಾಚಿಸಿದರು.

ಹಲವು ಕಡೆ ಪ್ರಚಾರ ಸಭೆ ನಡೆಸಿದ ಕೃಷ್ಣಬೈರೇಗೌಡ
ಮಧ್ಯಾಹ್ನದ ಬಳಿಕ ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ತೆರಳಿ ಚುನಾವಣಾ ಪ್ರಚಾರ ನಡೆಸಿದರು. ಈ ವೇಳೆ ಸ್ಥಳೀಯ ಶಾಸಕ ಸೋಮಶೇಖರ್ ಗೌಡ ಹಾಗೂ ಜೆಡಿಎಸ್ ಮುಖಂಡ ಜವರೇಗೌಡ ಅವರು ಕೆಬಿಜಿ ಅವರೊಂದಿಗೆ ಭರ್ಜರಿ ಪ್ರಚಾರ ನಡೆಸಿದರು. ಯಶವಂತಪುರ ವಿಧಾನಸಭಾ ಕ್ಷೇತ್ರದ ನೆಲಗುಳಿ, ಸೋಮನಹಳ್ಳಿ, ತಟ್ಟುಗುಪ್ಪೆ, ಕಗ್ಗಲಿಪುರ, ತಾತಗುನಿ, ಕೆ. ಗೊಲ್ಲಹಳ್ಳಿ ಮತ್ತಿತರ ಪ್ರದೇಶಗಳಿಗೆ ತೆರಳಿ ಪ್ರಚಾರ ಮಾಡಿದರು. ಈ ವೇಳೆ ಇಬ್ಬರೂ ನಾಯಕರು ಮಾತನಾಡಿ ನಮ್ಮ ನಡುವೆ ಹಿಂದಿನಿಂದಲೂ ಸ್ಪರ್ಧೆ ಇರುವುದು ನಿಜ. ಆದರೆ ಕೃಷ್ಣ ಬೈರೇಗೌಡ ಅವರಂತ ಮುತ್ಸದ್ದಿ ನಾಯಕರಿಗೆ ಬೆಂಬಲ ನೀಡಲು ಒಟ್ಟಿಗೆ ಬಂದಿದ್ದೇವೆ. ಕಾರ್ಯಕರ್ತರು ಕೂಡ ಕೃಷ್ಣ ಬೈರೇಗೌಡ ಅವರ ಗೆಲುವಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications