ಕೇಂದ್ರ ಸರ್ಕಾರ ಬೆಂಗಳೂರನ್ನು ಕಡೆಗಣಿಸುತ್ತಿದೆ : ಕೃಷ್ಣ ಬೈರೇಗೌಡ
ಬೆಂಗಳೂರು, ಏಪ್ರಿಲ್ 10 : 'ಬೆಂಗಳೂರು ನಗರದಿಂದ ಸಾಫ್ಟ್ ವೇರ್ ರಫ್ತು ಒಂದರಿಂದಲೇ ದೇಶಕ್ಕೆ 80 ಸಾವಿರ ಕೋಟಿ ಆದಾಯ ಬರುತ್ತಿದೆ. ಆದರೆ ಕೇಂದ್ರ ಸರಕಾರ ಬೆಂಗಳೂರು ವಿಷಯದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ' ಎಂದು ಕೃಷ್ಣ ಬೈರೇಗೌಡ ಆರೋಪ ಮಾಡಿದರು.
ಬುಧವಾರ ಬೆಳಗ್ಗೆ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಗೆದ್ದಲಹಳ್ಳಿ ಪಾರ್ಕ್ನಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಕೃಷ್ಣ ಬೈರೇಗೌಡ ಅವರು ಮತಯಾಚನೆ ಮಾಡಿದರು. ವಾಕಿಂಗ್ಗೆ ಆಗಮಿಸಿದ್ದ ಜನರೊಂದಿಗೆ ಸಭೆ ನಡೆಸಿದರು.
ಬೆಂಗಳೂರು ನಗರದ ಸಂಚಾರ ದಟ್ಟಣೆ ಸಮಸ್ಯೆ ಕುರಿತು ಮಾತನಾಡಿದ ಅವರು, 'ಬೆಂಗಳೂರು ನಗರದ ಸಾಫ್ಟ್ವೇರ್ ರಫ್ತು ಒಂದರಿಂದಲೇ ದೇಶಕ್ಕೆ 80 ಸಾವಿರ ಕೋಟಿ ಆದಾಯ ಬರುತ್ತಿದೆ. ಆದರೆ ಕೇಂದ್ರ ನಗರದ ವಿಷಯದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ' ಎಂದು ಆರೋಪಿಸಿದರು.

'ಫೆರಿಫೆರಲ್ ರಿಂಗ್ ರೋಡ್ ನಿರ್ಮಾಣಕ್ಕೆ ಸಹಕಾರ ನೀಡಲು ಮೀನಮೇಷ ಎಣಿಸುತ್ತಿದೆ. ಭೂಸ್ವಾಧೀನ ಪ್ರಕ್ರಿಯೆಗೆ ಹಣ ಕೊಟ್ಟಿಲ್ಲ. ರಸ್ತೆ ನಿರ್ಮಾಣ ಯೋಜನೆಗೂ ಹಣ ಬಿಡುಗಡೆ ಮಾಡಿಲ್ಲ' ಎಂದು ದೂರಿದರು.
'ರಾಜ್ಯದ ಬರ ನಿರ್ವಹಣೆಗೆ ಸಹಾಯ ಕೇಳಿದಾಗಲೂ ಕೇಂದ್ರ ಸೂಕ್ತ ನೆರವು ನೀಡಲಿಲ್ಲ. ಮಹಾರಾಷ್ಟ್ರ ರಾಜ್ಯಕ್ಕೆ 4 ಸಾವಿರ ಕೋಟಿ ನೆರವು ಕೊಟ್ಟ ಕೇಂದ್ರದ ಬಿಜೆಪಿ ಸರಕಾರ ಕರ್ನಾಟಕ ರಾಜ್ಯಕ್ಕೆ ಬರೀ 940 ಕೋಟಿ ಕೊಟ್ಟಿದೆ' ಎಂದು ಹೇಳಿದರು.

'ನಮ್ಮ ರಾಜ್ಯದಿಂದ ಹೆಚ್ಚು ಬಿಜೆಪಿ ಸಂಸದರು ಆಯ್ಕೆಯಾಗಿದ್ದಾರೆ. ಆದರೆ, ನಮ್ಮ ಪರ ಅವರು ಕೇಂದ್ರದಲ್ಲಿ ಧ್ವನಿ ಎತ್ತುತ್ತಿಲ್ಲ. ಮಾತನಾಡುವುದಕ್ಕೇ ಭಯ ಪಡುತ್ತಾರೆ' ಎಂದು ಕೃಷ್ಣ ಬೈರೇಗೌಡ ಅವರು ಆರೋಪ ಮಾಡಿದರು.
-
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications