ಶ್ರೀಮಂತರಿಗೆ ಕೊಟ್ರೆ ಆರ್ಥಿಕ ಚೇತರಿಕೆ, ಬಡವರಿಗೆ ಕೊಟ್ರೆ ಪುಕ್ಸಟ್ಟೆಯಾ..? : ವಿಪಕ್ಷಗಳ ವಿರುದ್ಧ ಕೃಷ್ಣಭೈರೇಗೌಡ ಕಿಡಿ
ಬೆಂಗಳೂರು, ಜುಲೈ 12: ಶ್ರೀಮಂತರ ತೆರಿಗೆ ಕಡಿತ ಮಾಡಿದರೆ, ಕಾರ್ಪೊರೇಟ್ ಸಾಲ ಮನ್ನಾ ಮಾಡಿದರೆ ಆರ್ಥಿಕ ಅಭಿವೃದ್ಧಿ. ಅದೇ ಬಡವರಿಗೆ ಕೊಟ್ಟರೆ ಪುಕ್ಸಟ್ಟೆಯಾ..? ಹೊಟ್ಟೆ ತುಂಬಿದ ಜನ ಬಡವರ ಬಗ್ಗೆ ಹೀಗೆ ಅವಹೇಳನ ಮಾಡುವುದು ಹೊಸದಲ್ಲ ಬಿಡಿ ಎಂದು ಬಿಜೆಪಿ ನಾಯಕರ "ಪುಕ್ಸಟ್ಟೆ" ಪದ ಪ್ರಯೋಗಕ್ಕೆ ಕಂದಾಯ ಸಚಿವ ಕೃಷ್ಣಭೈರೇಗೌಡ ಅಸಮಾಧಾನ ಹೊರಹಾಕಿದ್ದಾರೆ.
ವಿಧಾನ ಪರಿಷತ್ ಕಲಾಪದಲ್ಲಿ ರಾಜ್ಯಪಾಲರ ಭಾಷಣದ ಮೇಲೆ ವಿಪಕ್ಷ ಸದಸ್ಯರು ಸರ್ಕಾರದ ಶಕ್ತಿ ಯೋಜನೆ ಬಗ್ಗೆ ಚರ್ಚೆಗೆ ಮುಂದಾದರು. ಈ ವೇಳೆ ಸಚಿವ ಕೃಷ್ಣಭೈರೇಗೌಡ ಸದಸ್ಯರ ಪ್ರಶ್ನೆಗೆ ಉತ್ತರಿಸುತ್ತಾ ಶಕ್ತಿ ಯೋಜನೆಯಿಂದ ಸಾರಿಗೆ ನಿಗಮಗಳು ಹೇಗೆ ಲಾಭದಾಯಕವಾಗಿವೆ..? ಎಂದು ವಿವರಿಸಲು ಮುಂದಾದರು. ನಂತರ ಮಧ್ಯ ಪ್ರವೇಶಿಸಿದ ಸದಸ್ಯೆ ಭಾರತಿ ಶೆಟ್ಟಿ ಇದೊಂದು ಪುಕ್ಸಟ್ಟೆ ಭಾಗ್ಯ. ಪುಕ್ಸಟ್ಟೆ ಇದೆ ಎಂದು ಜನ ಈಗ ಬಸ್ಗಳಲ್ಲಿ ಓಡಾಡಲು ಮುಗಿಬಿದ್ದಿದ್ದಾರೆ. ಆದರೆ, ಪರಿಸ್ಥಿತಿ ಯಾವಾಗಲೂ ಹೀಗೆ ಇರಲ್ಲ ಎಂದು ಹೀಯಾಳಿಸಿದ್ದಾರೆ.

ಭಾರತಿ ಶೆಟ್ಟಿ ಅವರ ಮಾತಿಗೆ ತೀವ್ರ ಅಸಮಾಧಾನ ಹೊರಹಾಕಿದ ಸಚಿವ ಕೃಷ್ಣಭೈರೇಗೌಡ, "ಕೇಂದ್ರ ಬಿಜೆಪಿ ಸರ್ಕಾರ ಕಳೆದ ವರ್ಷ 2 ಲಕ್ಷ ಕೋಟಿ ಕಾರ್ಪೊರೇಟ್ ಸಾಲ ಮನ್ನಾ ಮಾಡಿದೆ. ಶ್ರೀಮಂತ ತೆರಿಗೆಯನ್ನು ಶೇ.30 ರಿಂದ ಶೇ.22ಕ್ಕೆ ಇಳಿಸಲಾಗಿದೆ. ನಿಮ್ಮ ಪ್ರಕಾರ ಶ್ರೀಮಂತರಿಗೆ ಕೊಟ್ಟರೆ ಆರ್ಥಿಕ ಅಭಿವೃದ್ಧಿ, ಬಡವರಿಗೆ ಕೊಟ್ಟರೆ ಪುಕ್ಸಟ್ಟೆ ಎಂದು ಹೀಯಾಳಿಸುತ್ತೀರ..? ಶ್ರೀಮಂತರ ಬಗ್ಗೆ ಇರುವ ಬಿಜೆಪಿ ನಾಯಕರ ಮಮಕಾರ ಬಡವರ ಮೇಲೆ ಏಕಿಲ್ಲ..? ಬಡವರೆಂದರೆ ನಿಮಗೆ ಏಕಿಷ್ಟು ಅಸಡ್ಡೆ..?" ಎಂದು ಕಿಡಿಕಾರಿದ್ದಾರೆ.
ಈ ವೇಳೆ ಮದ್ಯಪ್ರವೇಶಿಸಿದ ಸಭಾಪತಿ ತೇಜಸ್ವಿನಿ ಗೌಡ ಜನಪರ ಕಾರ್ಯಕ್ರಮದ ಬಗ್ಗೆ ಹೀಗೆ ಹೀಯಾಳಿಸುವುದು ಸರಿಯಲ್ಲ. ಸದನದಲ್ಲಿ ಸದಸ್ಯರು ಪುಕ್ಸಟ್ಟೆ ಪದ ಪ್ರಯೋಗ ಮಾಡುವ ಅಗತ್ಯ ಇಲ್ಲ ಎಂದು ವಿಪಕ್ಷ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.
ಶಕ್ತಿ ಯೋಜನೆಯಿಂದ ಮೌನಕ್ರಾಂತಿ
ಸರ್ಕಾರದ ಶಕ್ತಿ ಯೋಜನೆಯಿಂದ ಸಾರಿಗೆ ನಿಯಮಗಳಲ್ಲಿ ಮೌನಕ್ರಾಂತಿ ನಡೆಯುತ್ತಿದೆ ಎಂದು ಸಚಿವ ಕೃಷ್ಣಭೈರೇಗೌಡ ಅಭಿಪ್ರಾಯಪಟ್ಟಿದ್ದಾರೆ. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡ ಬಿಜೆಪಿ ಸದಸ್ಯ ಡಿಎಸ್ ಅರುಣ್ ಸರ್ಕಾರದ ಶಕ್ತಿ ಯೋಜನೆಯ ಬಗ್ಗೆ ಪ್ರಶ್ನಿಸಿದ್ದಾರೆ. ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆಗಳು ಮತ್ತಷ್ಟು ನಷ್ಟ ಎದುರಿಸಲಿವೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಡಿಎಸ್ ಅರುಣ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣಭೈರೇಗೌಡ, "ಶಕ್ತಿ ಯೋಜನೆಯಿಂದ ಸಾರಿಗೆ ನಿಗಮಗಳು ಲಾಭದ ಕಡೆಗೆ ಮುಖ ಮಾಡಿವೆ. ಇಷ್ಟು ದಿನಗಳಿಂದ ನಷ್ಟದಲ್ಲಿದ್ದ ನಿಗಮಗಳು ಈಗ ಸರ್ಕಾರದ ಅನುದಾನಕ್ಕೆ ಕಾಯದೆ ಸ್ವಂತ ಬಲದ ಮೇಲೆ ನಿಲ್ಲುವಂತಾಗಿದೆ. ಶಕ್ತಿ ಯೋಜನೆ ಆರಂಭವಾದ ನಂತರ ಪ್ರಯಾಣಿಕರ ಸಂಖ್ಯೆ ಶೇ.35 ರಷ್ಟು ಹೆಚ್ಚಾಗಿದೆ. ಈ ಪೈಕಿ ಶೇ.15 ರಷ್ಟು ಪುರುಷರಿದ್ದಾರೆ" ಎಂದಿದ್ದಾರೆ.
"ಈ ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ವೃದ್ದಿಯಾಗಿದೆ. ಉದ್ಯೋಗ ಸೃಷ್ಟಿಯಾಗಿದ್ದು ಆರ್ಥಿಕ ಅಭಿವೃದ್ಧಿಗೂ ಕಾರಣವಾಗಿದೆ. ಈ ಬಗ್ಗೆ ಹಲವಾರು ಪತ್ರಿಕೆಗಳು ದಾಖಲೆ ಸಮೇತ ವರದಿ ಮಾಡಿವೆ. ಈ ಯೋಜನೆಯಿಂದ ಎಲ್ಲ ಸಾರಿಗೆ ನಿಗಮಗಳೂ ಲಾಭದಲ್ಲಿವೆ. ನಿಗಮಗಳು ಹೊಸ ಬಸ್ ಖರೀದಿಗೆ ಮುಂದಾಗಿವೆ. ಹೀಗಾಗಿ ಸರ್ಕಾರಿ ಸಾರಿಗೆ ಜಾಲ ಮತ್ತಷ್ಟು ಹಳ್ಳಿಗಳಿಗೆ ವಿಸ್ತರಿಸಲಿದೆ" ಎಂದು ತಿಳಿಸಿದ್ದಾರೆ.
" ಈ ಯೋಜನೆಯಿಂದ ಹೆಚ್ಚಿನ ಸಂಖ್ಯೆಯ ಬಡವರು ಮತ್ತು ಶ್ರಮಿಕ ವರ್ಗ ಇದರ ಉಪಯೋಗ ಪಡೆಯಲಿವೆ. ನಗರದಲ್ಲಿ ಹೆಚ್ಚುತ್ತಿರುವ ಸಾರಿಗೆ ದಟ್ಟಣೆಯ ನಿಯಂತ್ರಣಕ್ಕೂ ಸಾರ್ವಜನಿಕ ಸಾರಿಗೆಯ ಅಭಿವೃದ್ಧಿಯೊಂದೇ ಪರಿಹಾರ" ಎಂದು ಸರ್ಕಾರದ ಯೋಜನೆಯನ್ನು ಕಂದಾಯ ಸಚಿವ ಕೃಷ್ಣಭೈರೇಗೌಡ ಸಮರ್ಥಿಸಿಕೊಂಡಿದ್ದಾರೆ.
-
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ












Click it and Unblock the Notifications