ಬಸವನಗುಡಿಯ ಶ್ರೀಪುತ್ತಿಗೆ ಮಠದಲ್ಲಿ ವೈಭವದ ಶ್ರೀಕೃಷ್ಣ ಲೀಲೋತ್ಸವ
ಬೆಂಗಳೂರು, ಆಗಸ್ಟ್ 23 : ಅಸುರಾರಿ, ಬಾಲಮುಕುಂದನ ಜನ್ಮದಿನ ಗೋಕುಲಾಷ್ಟಮಿ ಪ್ರಯುಕ್ತ ಬಸವನಗುಡಿಯ ಉಡುಪಿ ಶ್ರೀಪುತ್ತಿಗೆ ಮಠದ ಗೋವರ್ಧನಗಿರಿ ಕ್ಷೇತ್ರದಲ್ಲಿ ಆಗಸ್ಟ್ 26ರಂದು ವೈಭವದ 'ಶ್ರೀಕೃಷ್ಣ ಜಯಂತೀ ಮತ್ತು ಶ್ರೀಕೃಷ್ಣ ಲೀಲೋತ್ಸವ' ನೆರವೇರಲಿದೆ.
ಇದಕ್ಕೆ ಪೂರ್ವಭಾವಿಯಾಗಿ ಆಗಸ್ಟ್ 19ರಿಂದಲೇ 'ಅಷ್ಟಮಾವತಾರಿಗೆ ಅಷ್ಟೋತ್ಸವ' ನಡೆಯುತ್ತಿದ್ದು, ಆಗಸ್ಟ್ 24ರ ಸಂಜೆ 6ರಿಂದ 7 ಗಂಟೆಯವರೆಗೆ ನಡೆಯುವ ಜ್ಞಾನೋತ್ಸವದಲ್ಲಿ ಡಾ.ಎನ್. ವೆಂಕಟೇಶಾಚಾರ್ಯ ಅವರಿಂದ 'ಕುರುಕ್ಷೇತ್ರದಲ್ಲಿ ಶ್ರೀಕೃಷ್ಣ' ವಿಷಯದ ಕುರಿತು ಉಪನ್ಯಾಸ ಆಯೋಜಿಸಲಾಗಿದೆ. ಬಳಿಕ ರಾತ್ರಿ 7ರಿಂದ 8.30ರವರೆಗೆ ಕುಮಾರಿ ತುಷಾರಾ ಎಲ್.ಆಚಾರ್ಯ ಮತ್ತು ತಂಡದಿಂದ 'ಶ್ರೀನಿವಾಸ ಕಲ್ಯಾಣ' ಹರಿಕಥಾ ಕಾಲಕ್ಷೇಪ ನಡೆಯಲಿದೆ.

ಆ.25ರ ಅಷ್ಟೋತ್ಸವದಲ್ಲಿ..
ಆಗಸ್ಟ್ 25ರಂದು ಬೆಳಗ್ಗೆ 7ರಿಂದ ಆರಂಭಗೊಳ್ಳುವ ಕೀರ್ತನೋತ್ಸವದೊಂದಿಗೆ ಶ್ರೀಕೃಷ್ಣ ಜಯಂತಿ ಆರಂಭಗೊಳ್ಳಲಿದೆ. ಇದರಂಗವಾಗಿ ಮಧ್ಯಾಹ್ನ 3ರಿಂದ ರಾತ್ರಿ 11 ಗಂಟೆವರೆಗೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿವೆ.

ಇದೇ ದಿನ ಸಂಜೆ 4.30ರಿಂದ 5.30ರವರೆಗೆ 'ಶ್ರೀಕೃಷ್ಣ ಮತ್ತು ಭಾರತೀಯ ಸಂಸ್ಕೃತಿ' ಎಂಬ ವಿಚಾರದ ಕುರಿತು ಖ್ಯಾತ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರು ತಮ್ಮ ಮನೋಜ್ಞ ಚಿಂತನಾ ಲಹರಿ ಹರಿಸಲಿದ್ದಾರೆ. ಬಳಿಕ ಪುತ್ತಿಗೆ ಶ್ರೀಗಳಿಂದ ಶ್ರೀಕೃಷ್ಣನಿಗೆ ತುಳಸಿಯ ಅರ್ಚನೆ, ಮಹಾಪೂಜೆ ನೆರವೇರಲಿದ್ದು, ರಾತ್ರಿ 11.58ಕ್ಕೆ ಶ್ರೀಗಳು, ಶ್ರೀಕೃಷ್ಣನಿಗೆ ಅರ್ಘ್ಯಪ್ರದಾನ ಮಾಡುವ ಮೂಲಕ ಶ್ರೀಕೃಷ್ಣ ಜಯಂತ್ಯುತ್ಸವ ಸಮಾಪನಗೊಳ್ಳಲಿದೆ.

ಆ.26ಕ್ಕೆ ಶ್ರೀಕೃಷ್ಣ ಲೀಲೋತ್ಸವ.. ಗೋವರ್ಧನಗಿರಿಧಾರಿಗೆ ರಜತ ರಥ ಸಮರ್ಪಣೆ
ಶ್ರೀಕೃಷ್ಣಾಷ್ಟಮಿಯ ಪ್ರಯುಕ್ತ ಬಸವನಗುಡಿಯ ಶ್ರೀಗೋವರ್ಧನಗಿರಿಯಲ್ಲಿ ಅದ್ದೂರಿ ಶ್ರೀಕೃಷ್ಣಲೀಲೋತ್ಸವ ನಡೆಯಲಿದೆ. ಮಧ್ಯಾಹ್ನ 12ರಿಂದ ಸಂಜೆ 4 ಗಂಟೆವರೆಗೆ ಶ್ರೀಪುತ್ತಿಗೆಮಠದಲ್ಲಿ ಮೊಸರು ಕುಡಿಕೆ ಸ್ಪರ್ಧೆ, ಚಿಣ್ಣರಿಗಾಗಿ ಮುದ್ದುಕೃಷ್ಣರ ಸ್ಪರ್ಧೆ ನಡೆಯಲಿದೆ. ಸಂಜೆ 5ಕ್ಕೆ ಪುತ್ತಿಗೆ ಶ್ರೀಗಳು ಶ್ರೀಗೋವರ್ಧನ ಗಿರಿಧಾರಿಗೆ ರಜತ ರಥ ಸಮರ್ಪಿಸಲಿದ್ದಾರೆ. ನಂತರ ವೈಭವೋಪೇತ ವಿಟ್ಲಪಿಂಡಿ ಮತ್ತು ಮೊಸರು ಕುಡಿಕೆ ಉತ್ಸವ ನೆರವೇರಲಿದೆ.
ಮಾಹಿತಿಗೆ ಸಂಪರ್ಕಿಸಿ: 9845820775
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications