Namma Metro: 'ಕೆಆರ್ ಪುರಂ' ಮೆಟ್ರೊ ನಿಲ್ದಾಣದ ಹೆಸರು ಬದಲಾವಣೆ
ಸದಾ ಜನದಟ್ಟಣೆಯಿಂದ ಕೂಡಿರುವ ಬೆಂಗಳೂರಿನ ಹೊರ ವಲಯದಲ್ಲಿರುವ ಕೆ.ಆರ್.ಪುರಂ ಮೆಟ್ರೊ ನಿಲ್ದಾಣದ ಹೆಸರನ್ನು ಬದಲಾಯಿಸಲಾಗಿದೆ ಎಂಬ ಅಧಿಕೃತ ಮಾಹಿತಿ ದೊರೆತಿದೆ.
ಬೆಂಗಳೂರು, ಮಾರ್ಚ್ 16: ಸದಾ ಜನದಟ್ಟಣೆಯಿಂದ ಕೂಡಿರುವ ಬೆಂಗಳೂರಿನ ಹೊರ ವಲಯದಲ್ಲಿರುವ ಕೆ.ಆರ್.ಪುರಂ ಮೆಟ್ರೊ ನಿಲ್ದಾಣದ ಹೆಸರನ್ನು ಬದಲಾಯಿಸಲಾಗಿದೆ ಎಂಬ ಅಧಿಕೃತ ಮಾಹಿತಿ ದೊರೆತಿದೆ.
ಇನ್ನೇನು ಕೆಲವೇ ದಿನಗಳಲ್ಲಿ ವೈಟ್ಫಿಲ್ಡ್ನಿಂದ ಕೆ.ಆರ್.ಪುರಂ ವರೆಗೆ ಮೆಟ್ರೋ ಮಾರ್ಗ ಸಾರ್ವಜನಿಕ ಬಳಕೆಗೆಂದು ಲೋಕಾರ್ಪಣೆಗೊಳ್ಳಲಿದೆ. ಈ ನಡುವೆ ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಷನ್ ಲಿಮಿಟೆಡ್ (BMRCL) ಕೆ.ಆರ್ ಪುರಂ ಮೆಟ್ರೋ ನಿಲ್ದಾಣದ ಹೆಸರು ಬದಲಾಯಿಸಿರುವುದಾಗಿ ತಿಳಿಸಿದ್ದಾರೆ.

ಕೃಷ್ಣರಾಜಪುರ ಮೆಟ್ರೋ ನಿಲ್ದಾಣವನ್ನು ವಾಡಿಕೆಯಂತೆ ಈ ಮೊದಲು 'ಕೆ.ಆರ್. ಪುರಂ' (K.R.Puram) ಎಂದು ನಾಮಕರಣ ಮಾಡಲಾಗಿತ್ತು. ಇದೀಗ ಆ ನಿಲ್ದಾಣವನ್ನು 'ಕೆ.ಆರ್.ಪುರ' (K.R.Pura) ಎಂದು ಬದಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೆ.ಆರ್.ಪುರಂ ಇದೊಂದು ಬೆಂಗಳೂರು ನಗರ ಜಿಲ್ಲೆಯ ತಾಲೂಕು ಕೇಂದ್ರವೂ ಆಗಿದೆ. ಇದು ಹಳೆ ಮದ್ರಾಸ್ ರಸ್ತೆಗೆ ಸಮೀಪವಿದ್ದು, ರಿಂಗ್ ರಸ್ತೆಯ ಜಂಕ್ಷನ್, ರೈಲು ನಿಲ್ದಾಣ ಇಲ್ಲಿದೆ. ಬೆಂಗಳೂರಿನಿಂದ ಹೊಸ ಕೋಟೆ ಗೆ ಇದೇ ಮಾರ್ಗವಾಗಿ ಹೋಗಬೇಕು. ಈ ಪ್ರದೇಶದಲ್ಲಿ ಸಾಕಷ್ಟು ವ್ಯಾಪಾರ ವಹೀವಾಟು ನಡೆಯುತ್ತಿದೆ. ಇಲ್ಲಿ ಮೆಟ್ರೋ ಸಂಚಾರದ ಅವಶ್ಯಕತೆ ಇತ್ತು.
ಅದರಂತೆ ವೈಟ್ ಫಿಲ್ಡ್ನಿಂದ ಕೆ.ಆರ್.ಪುರಂ ವರೆಗಿನ 13 ಕಿಲೋ ಮೀಟರ್ ನೂತನ ಮೆಟ್ರೋ ಮಾರ್ಗ ಪೂರ್ಣಗೊಂಡಿದೆ. ಇಲ್ಲಿ ಪ್ರತಿ ಗಂಟೆಗೆ 80 ಕಿಲೋ ಮೀಟರ್ ವೇಗದಲ್ಲಿ ಪ್ರಾಯೋಗಿಕ ಸಂಚಾರ ಸೇರಿ ಗುಣಮಟ್ಟ, ಸುರಕ್ಷತೆ ಪರಿಶೀಲನೆ ಮುಗಿದಿದೆ. ಇದೇ ಮಾರ್ಚ್ 25ರಂದು ಈ ಮಾರ್ಗ ಲೋಕಾರ್ಪಣೆಗೊಳ್ಳಲಿದೆ ಎಂದು ಬಿಎಂಆರ್ಸಿಎಲ್ ಮೂಲಗಳು ತಿಳಿಸಿವೆ.
-
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ












Click it and Unblock the Notifications