Krishna Janmashtami: ಬೆಂಗಳೂರಿನಲ್ಲಿ ಇಸ್ಕಾನ್ ಟೆಂಪಲ್ ರಸ್ತೆ ಮಾರ್ಗ ಬದಲಾವಣೆ, ಪರ್ಯಾಯ ಮಾರ್ಗಗಳ ಬಗ್ಗೆ ತಿಳಿಯಿರಿ...
ಬೆಂಗಳೂರು ಸೆಪ್ಟೆಂಬರ್ 6: ಬೆಂಗಳೂರಿನ ಇಸ್ಕಾನ್ ದೇವಸ್ಥಾನದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಯ ಸಡಗರ ಸಂಭ್ರಮ ಮುಗಿಲು ಮುಟ್ಟಿದೆ. ಬೆಳಿಗ್ಗೆಯಿಂದಲೇ ಭಕ್ತ ಸಾಗರ ದೇವಸ್ಥಾನಕ್ಕೆ ಹರಿದು ಬರುತ್ತಿದೆ. ಇಂದು(ಸೆಪ್ಟೆಂಬರ್ 6) ಮತ್ತು ನಾಳೆ (ಸೆಪ್ಟೆಂಬರ್ 7) ಕೃಷ್ಣಜನ್ಮಾಷ್ಟಮಿ ಆಚರಿಸಲಾಗುತ್ತಿದೆ. ಇದರ ಪ್ರಯುಕ್ತ ದೇವರ ದರ್ಶನ ಪಡೆಯಲು ಭಕ್ತಾಧಿಗಳು ದೇವಸ್ಥಾನಕ್ಕೆ ಬರುತ್ತಿದ್ದಾರೆ. ಹೀಗಾಗಿ ಇಸ್ಕಾನ್ ಟೆಂಪಲ್ ಮಾರ್ಗದಲ್ಲಿ ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದ್ದು ಈ ಮಾರ್ಗ ಬದಲಾವಣೆ ಮಾಡಲಾಗಿದೆ.
ಈ ಬಗ್ಗೆ ಸಂಚಾರಿ ಪೊಲೀಸರು ಪ್ರಕಟಣೆಯನ್ನು ಹೊರಡಿಸಿದ್ದಾರೆ. ಹಾಗಾದರೆ ಪ್ರಕಟಣೆಯಲ್ಲಿ ಏನಿದೆ? ಶ್ರೀಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ಮಲ್ಲೇಶ್ವರಂ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿರುವ ಇಸ್ಕಾನ್ ದೇವಸ್ಥಾನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು, ಗಣ್ಯ ವ್ಯಕ್ತಿಗಳು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವುದರಿಂದ ಇಂದು (ಸೆಪ್ಟೆಂಬರ್ 6) ಮತ್ತು ನಾಳೆ (ಸೆಪ್ಟೆಂಬರ್ 7) ಡಾ.ರಾಜ್ಕುಮಾರ್ ರಸ್ತೆ ಮತ್ತು ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ಸಂಚರಿಸುವ ಮಾರ್ಗ ಬದಲಾವಣೆ ಮಾಡಲಾಗಿದೆ. ಈ ಮಾರ್ಗ ಬದಲಾವಣೆಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಕೋರಿದ್ದಾರೆ.

ಎಲ್ಲೆಲ್ಲಿ ಮಾರ್ಗ ಬದಲಾವಣೆ:-
ಯಶವಂತಪುರ ಕಡೆಯಿಂದ-ಓರಾಯನ್ ಮಾಲ್-ಡಾ ರಾಜ್ ಕುಮಾರ್ ರಸ್ತೆಯ ಮಾರ್ಗವಾಗಿ ಮೆಜೆಸ್ಟಿಕ್ ಕಡೆಗೆ ಸಂಚರಿಸುವ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಹಾಗೂ ವಾಹನಗಳಿಗೆ ಪಾರ್ಯಾಯ ಮಾರ್ಗ ಸೂಚಿಸಿಲಾಗಿದೆ.
ಮಾರಪ್ಪನಪಾಳ್ಯ-ಯಶವಂತಪುರ ಫ್ಲೈಓವರ್ ಮಾರ್ಗವಾಗಿ-ಬಿಹೆಚ್.ಇ.ಎಲ್(ಕೆ-8) ಅಂಡರ್ ಪಾಸ್ ಮೂಲಕ -ಸರ್ಕಲ್ ಮಾರಮ್ಮ ಬಳಿ ಬಲ ತಿರುವುದು ಪಡೆದು- ಮಾರ್ಗೋಸ ರಸ್ತೆ ಮಲ್ಲೇಶ್ವರಂ ಮಾರ್ಗವಾಗಿ- ಕೆ.ಸೊ ಜನರಲ್ ಆಸ್ಪತ್ರೆ ಜಂಕ್ಷನ್ನಲ್ಲಿ ಎಡ ತಿರುವು ಪಡೆದು- ಮಲ್ಲೇಶ್ವರಂ ಬ್ರಿಡ್ಕ್ ಅಂಡರ್ ಪಾಸ್ ಮೂಲಕ-ಲಿಂಕ್ ರಸ್ತೆಯಲ್ಲಿ ಸಂಚರಿಸಿ- ಶೇಷಾದ್ರಿಪುರಂ ಮಾರ್ಗವಾಗಿ ಕೆಂಪೇಗೌಡ ಬಸ್ ನಿಲ್ದಾಣ (ಮೆಜೆಸ್ಟಿಕ್) ಕಡೆ ಸಂಚಸಿಸುವುದು.
ಯಶವಂತಪುರ ಕಡೆಯಿಂದ-ವೆಸ್ಟ್ ಆಫ್ ಕಾರ್ಡ್ ರಸ್ತೆ- ಇಸ್ಕಾನ್ ದೇವಸ್ಥಾನ- ಮಹಾಲಕ್ಷ್ಮೀ ಲೇಔಟ್ ಎಂಟ್ರೇನ್ಸ್ ಮಾರ್ಗವಾಗಿ ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ಮಾಗಡಿ ರಸ್ತೆ, ವಿಜಯನಗರ ಕಡೆಗೆ ಸಂಚರಿಸುವ ಬಿಎಂಟಿಸಿ ಬಸ್ಸುಗಳು ಮತ್ತು ವಾಹನಗಳಿಗೆ ಪಾರ್ಯಾಯ ಮಾರ್ಗ ಸೂಚಿಸಿಲಾಗಿದೆ.

ಯಶವಂತಪುರ ಕಡೆಯಿಂದ ಬಂದ ಬಿಎಂಟಿಸಿ ಬಸ್ಸುಗಳು ಮತ್ತು ವಾಹನ ಸವಾರರು- ಜಿಎಸ್.ಎಫ್ ಸರ್ಕಲ್- ಓರಾಯನ್ ಮಾಲ್ ಮುಂಭಾಗ- ಡಾ.ರಾಜ್ ಕುಮಾರ್ ರಸ್ತೆಯ ಮೂಲಕ -ಡಾ.ರಾಜ್ ಕುಮಾರ್ ರಸ್ತೆ ಹತ್ತನೇ ಕ್ರಾಸ್ ಜಂಕ್ಷನ್ನಲ್ಲಿ ಬಲ ತಿರುವು ಪಡೆದು-ಡಯಕಾನ್ ಜಂಕ್ಷನ್ ಮಾರ್ಗವಾಗಿ- ರಾಜಾಜಿನಗರ ಒಂದನೇ ಬ್ಲಾಕ್ ಜಂಕ್ಷನ್ನಲ್ಲಿ ಎಡ ತಿರುವು ಪಡೆದು- ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ಸಂಚರಿಸಿ ಮಾಗಡಿ ರಸ್ತೆ, ವಿಜಯನಗರ ಕಡೆಗೆ ಸಂಚರಿಸುವುದು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?












Click it and Unblock the Notifications