ಈಶ್ವರಪ್ಪ ಪಿಎ ಕಿಡ್ನಾಪ್ ಯತ್ನ: ಮತ್ತೊಬ್ಬ ಆರೋಪಿ ಬಂಧನ
ಬೆಂಗಳೂರು, ಆಗಸ್ಟ್ 20: ವಿಧಾನ ಪರಿಷತ್ನ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆಪ್ತ ಸಹಾಯಕ ವಿನಯ್ ಅಪಹರಣ ಯತ್ನ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಭಾನುವಾರ ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ.
ಉಮಾಕಾಂತ್ ಎನ್ನುವರನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ. ರೌಡಿಶೀಟರ್ ಪ್ರಶಾಂತ್ನ ಬಂಟ ಉಮಾಕಾಂತ್, ಯಡಿಯೂರಪ್ಪ ಪಿಎ ಸಂತೋಷ ಜತೆ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಮೇ 11ರಂದು ಮಹಾಲಕ್ಷ್ಮಿ ಲೇ ಔಟ್ ಬಳಿ ತೆರಳುತ್ತಿದ್ದಾಗ ವಿನಯ್ ಅಪಹರಣ ಯತ್ನ ನಡೆದಿತ್ತು

ಉಮಾಕಾಂತ್ ನನ್ನು ಕೋರಮಂಗಲ ಪೊಲೀಸರು ವಿಚಾರಣೆ ನಡೆಸಿದಾಗ ಎರಡು ಬಾರಿ ಯಡಿಯೂರಪ್ಪನವರ ಡಾಲರ್ಸ್ ಕಾಲೋನಿ ಮನೆಯಲ್ಲಿ ಸಂತೋಷ್ ನನ್ನು ಭೇಟಿಯಾಗಿರುವ ಬಗ್ಗೆ ಬಾಯ್ಬಿಟ್ಟಿದ್ದಾನೆ. ಹೆಚ್ಚಿನ ವಿಚಾರಣೆಗೆ ಠಾಣೆಗೆ ಕರೆದೊಯ್ದಿದ್ದಾರೆ.












Click it and Unblock the Notifications