ಕರಕುಶಲಕರ್ಮಿಗಳ ಅಭಿವೃದ್ದಿಗೆ 200 ಕೋಟಿ ರು ಬೇಡಿಕೆ: ರಾಘವೇಂದ್ರ ಶೆಟ್ಟಿ

ಬೆಂಗಳೂರು ನವಂಬರ್‌ 26: ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ದಿ ನಿಗಮ ನಿಯಮಿತದ ನೂತನ ಅಧ್ಯಕ್ಷರಾಗಿ ಡಾ ಬೇಳೂರು ರಾಘವೇಂದ್ರ ಶೆಟ್ಟಿ ಅವರು ಗುರುವಾರ(ನ.26)ದಂದು ಅಧಿಕಾರ ಸ್ವೀಕರಿಸಿದರು.

ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿ, ''ಮುಂದಿನ 2 ವರ್ಷಗಳಲ್ಲಿ ಕರಕುಶಲ ಅಭಿವೃದ್ದಿ ನಿಗಮದ ಹೊಸ ಯೋಜನೆಗಳಿಗೆ 200 ಕೋಟಿ ರೂಪಾಯಿಗಳ ಅನುದಾನ ನೀಡುವಂತೆ ಕೇಂದ್ರದ ಜವಳಿ ಮಂತ್ರಾಲಯಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು''ಎಂದರು.

KSHDC President Raghavendra Shetty seeks Rs 200 Cr from Govt to improve Handicrafts

ಇಂದು ಬಿಜೆಪಿ ರಾಜ್ಯಉಪಾಧ್ಯಕ್ಷ ಬಿ ವೈ ವಿಜಯೇಂದ್ರ, ಮಹಾತ್ಮಗಾಂಧಿ ಸೇವಾಟ್ರಸ್ಟ್‌ ನ ಸಂಸ್ಥಾಪಕರು ವಿನಯ ಗುರೂಜಿ ಅವಧೂತರು ಹಾಗೂ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಮಾನಂದ ನಾಯ್ಕ್‌ ಅವರ ಉಪಸ್ಥಿತಿಯಲ್ಲಿ ಅಧಿಕಾರ ಸ್ವೀಕರಿಸಿದರು.

KSHDC President Raghavendra Shetty seeks Rs 200 Cr from Govt to improve Handicrafts

Recommended Video

      ಯಡಿಯೂರಪ್ಪಗೆ ತಲೆ ಕೆಟ್ಟಿದೆ!! | Oneindia Kannada

      ನಂತರ ಮಾತನಾಡಿದ ಅವರು, ರಾಜ್ಯದ ಕರಕುಶಲಕರ್ಮಿಗಳಿಗೆ ಆಧುನಿಕ ತಂತ್ರಜ್ಞಾನ ಅಳವಡಿಕೆ ಹಾಗೂ ಮಾರಾಟಕ್ಕೆ ಸೂಕ್ತ ವೇದಿಕೆಯನ್ನು ನಿರ್ಮಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಿಕೊಡಲಾಗಿದೆ. ಇದಕ್ಕೆ ಸೂಕ್ತವಾಗಿ ಸ್ಪಂದಿಸುವ ನಿರೀಕ್ಷೆಯಿದ್ದು ನಿಗಮದ ಅಭಿವೃದ್ದಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು. ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ತಾರಾ ಅನುರಾಧ ಮತ್ತು ಅನೇಕ ಗಣ್ಯರು ಶುಭ ಕೋರಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+