Get Updates
Get notified of breaking news, exclusive insights, and must-see stories!

ಕೆಎಸ್ಒಯು ಮಾನ್ಯತೆ ರದ್ದು: ಪ್ರಧಾನಿಗೆ ಮುಖ್ಯಮಂತ್ರಿ ಪತ್ರ

ಯುಜಿಸಿಯಿಂದ ಕೆಎಸ್ ಒಯು ಅಮಾನ್ಯತೆ. ಪ್ರಧಾನಿಗೆ ಪತ್ರ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯ. ಯುಜಿಸಿಗೆ ಸಕಾರಾತ್ಮಕ ನಿರ್ಧಾರ ಕೈಗೊಳ್ಳಲು ಸೂಚಿಸುವಂತೆ ಮನವಿ.

ಬೆಂಗಳೂರು, ಆಗಸ್ಟ್ 22: ವಿಶ್ವವಿದ್ಯಾಲಯ ಆಯೋಗವು (ಯುಜಿಸಿ) ಮೈಸೂರಿನ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ (ಕೆಎಸ್ಒಯು) ಮಾನ್ಯತೆಯನ್ನು ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಸಮಸ್ಯೆ ಪರಿಹರಿಸುವಂತೆ ಕೋರಿದ್ದಾರೆ.

ಯುಜಿಸಿಯ ನಿರ್ಧಾರದಿಂದ ಲಕ್ಷಾಂತರ ವಿದ್ಯಾರ್ಥಿಗಳ ಕನಸು ಭಗ್ನಗೊಂಡಿದ್ದು, ಈ ಬಗ್ಗೆ ತಾವೇ (ಪ್ರಧಾನಿ) ಖುದ್ದಾಗಿ ಈ ವಿಚಾರದಲ್ಲಿ ಮಧ್ಯ ಪ್ರವೇಶಿಸಿ, ಯುಜಿಸಿಗೆ ಸಕಾರಾತ್ಮಕ ನಿರ್ಧಾರ ಕೈಗೊಳ್ಳುವಂತೆ ಸೂಚಿಸಬೇಕೆಂದು ಅವರು ಮನವಿ ಮಾಡಿದ್ದಾರೆ,

KSOU De-recognition: CM Siddaramaiah writes to PM Modi in intervene

ಕೆಎಸ್ಒಯುನಲ್ಲಿ ಓದುತ್ತಿರುವ ವಿದ್ಯಾರ್ಥಿಗಳಲ್ಲಿ ಬಹುಪಾಲು ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಾಗಿದ್ದು, ಯುಜಿಸಿಯ ನಿರ್ಧಾರದಿಂದಾಗಿ, ಈ ವಿದ್ಯಾರ್ಥಿಗಳು ತಮ್ಮ ಜೀವನದ ಮಹತ್ವದ ಘಟ್ಟದಲ್ಲಿ ಉನ್ನತ ವಿದ್ಯಾಭ್ಯಾಸವನ್ನು ಪಡೆಯುವ ಅವಕಾಶದಿಂದ ವಂಚಿತರಾಗಿದ್ದಾರೆ. ಈ ಆತಂಕದಿಂದ ಆ ವಿದ್ಯಾರ್ಥಿಗಳನ್ನು ಪಾರು ಮಾಡಬೇಕಿದೆ ಎಂದು ಅವರು ವಿವರಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+