ಕರಾಮುವಿ 2019-20ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭ
ಬೆಂಗಳೂರು, ಜುಲೈ 10: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಸಕ್ತ 2019-20ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭವಾಗಿದ್ದು, ಸ್ನಾತಕ/ ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ/ಬಿ.ಕಾಂ, ಎಂ.ಎ/ಎಂ.ಸಿ.ಜೆ/ಎಂ.ಕಾಂ., ಬಿ.ಎಲ್.ಐ.ಎಸ್ಸಿ, ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ., ಪಿ.ಜಿ. ಡಿಪ್ಲೋಮಾ ಪ್ರೋಗ್ರಾಂ, ಡಿಪ್ಲೋಮಾ ಪ್ರೋಗ್ರಾಂ, ಸರ್ಟಿಫಿಕೇಟ್ ಪ್ರೋಗ್ರಾಂಗಳಿಗೆ ಪ್ರವೇಶಾತಿ ಆರಂಭಗೊಂಡಿದೆ.
ಎಂ.ಬಿ.ಎ.ಗೆ ಸಿ.ಇ.ಟಿ ಮುಖಾಂತರ ಪ್ರವೇಶಾತಿ ಇದ್ದು, ಮೇಲ್ಕಂಡ ಕೋರ್ಸ್ ಗಳ ಪ್ರಥಮ ವರ್ಷದ ಪ್ರವೇಶಾತಿಗೆ ದಂಡ ಶುಲ್ಕವಿಲ್ಲದೆ ಅರ್ಜಿ ಸಲ್ಲಿಸಲು ಜುಲೈ 25 ಕಡೆಯ ದಿನವಾಗಿದೆ.
ಬೆಂಗಳೂರಿನ ಮಲ್ಲೇಶ್ವರಂ, ಚಾಮರಾಜಪೇಟೆ ಮತ್ತು ಹೆಬ್ಬಾಳದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಮೂರು ಕೇಂದ್ರಗಳಿದ್ದು, ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಿ ಪ್ರವೇಶಾತಿ ಪಡೆಯಬಹುದು. ವಿದ್ಯಾರ್ಥಿಗಳು ಪ್ರಾದೇಶಿಕ ಕೇಂದ್ರಗಳಲ್ಲದೆ ಬೇರೆ ಯಾವುದೇ ಅನಧಿಕೃತ ಅಧ್ಯಯನ ಕೇಂದ್ರಗಳಲ್ಲಿ ಅರ್ಜಿ ಖರೀದಿಸಿ ವಂಚನೆಗೊಳಗಾಗಬಾರದೆಂದು ಪ್ರಾದೇಶಿಕ ನಿರ್ದೇಶಕರಾದ ಡಾ. ಲೋಕೇಶ್ ಆರ್ ಮಾಹಿತಿ ನೀಡಿದ್ದಾರೆ.

ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಒದಗಿಸಿದಲ್ಲಿ ಪ್ರವೇಶಾತಿ ಶುಲ್ಕದಲ್ಲಿ ವಿನಾಯಿತಿ ಪಡೆಯಬಹುದು. ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ಶೇಕಡ 25ರಷ್ಟು ವಿನಾಯಿತಿ ನೀಡಲಾಗುವುದು.
ಹೆಚ್ಚಿನ ಮಾಹಿತಿಗೆ ಪ್ರಾದೇಶಿಕ ನಿರ್ದೇಶಕರು, ಕ.ರಾ.ಮು.ವಿ ಮಹಿಳಾ ಪ್ರಾದೇಶಿಕ ಕೇಂದ್ರ, ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜು, 4ನೇ ಮುಖ್ಯರಸ್ತೆ, 13ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-03. ದೂರವಾಣಿ- 080 23448811, 9844506629 ಸಂಪರ್ಕಿಸಬಹುದೆಂದು ಪ್ರಾದೇಶಿಕ ನಿರ್ದೇಶಕರು ತಿಳಿಸಿದ್ದಾರೆ.
-
SSLC Exam 2026: ಕೊನೆಯ ಕ್ಷಣದಲ್ಲಿ ಒತ್ತಡವಿಲ್ಲದೆ ರಿವಿಷನ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
ಕನ್ನಡಿಗರ ಮುಕ್ತಜ್ಞಾನದ ತಾಣ ‘ಕಣಜ’ಕ್ಕೆ ಸಿಕ್ಕಿಬಿಟ್ಟಿತೆ ಮುಕ್ತಿ? 3 ತಿಂಗಳಿಂದ ಕಣ್ಮರೆಯಾದ ವೆಬ್ಸೈಟ್ -
ಇನ್ಮುಂದೆ ಗ್ರಾಮೀಣ ವಿದ್ಯಾರ್ಥಿಗಳಿಗೆ ಸರ್ಕಾರದಿಂದಲೇ ಸಿಗಲಿದೆ ಉಚಿತ 'NEET' ತರಬೇತಿ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
CBSE 12ನೇ ತರಗತಿಯ ಹಿಂದಿ ಪರೀಕ್ಷೆ: ಪ್ರಶ್ನೆಪತ್ರಿಕೆ ಸುಲಭ, ನಿಗದಿತ ಸಮಯದಲ್ಲೇ ಪರೀಕ್ಷೆ ಬರೆದು ನಿರಾಳರಾದ ವಿದ್ಯಾರ್ಥಿಗಳು -
CBSE ಉತ್ತರಪತ್ರಿಕೆ ಮೌಲ್ಯಮಾಪನ: ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಳ್ಳದಂತೆ ಶಿಕ್ಷಕರಿಗೆ ಸಿಬಿಎಸ್ಇ ಎಚ್ಚರಿಕೆ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ












Click it and Unblock the Notifications