ಕಸಾಪ ಮಾಜಿ ಅಧ್ಯಕ್ಷ ಪುಂಡಲೀಕ ಹಾಲಂಬಿ ನಿಧನ
ಬೆಂಗಳೂರು, ಏಪ್ರಿಲ್ 24 : ಕನ್ನಡ ಸಾಹಿತ್ಯ ಪರಿಷತ್ತಿನ 24ನೇ ಅಧ್ಯಕ್ಷರಾಗಿ ಕರ್ತವ್ಯ ನಿಭಾಯಿಸಿದ್ದ ಪುಂಡಲೀಕ ಹಾಲಂಬಿ ಅವರು ಭಾನುವಾರ ನಿಧನರಾಗಿದ್ದಾರೆ. ಕೆಲ ಕಾಲದಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಬಸವನಗುಡಿಯ ಶೇಖರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಇತ್ತೀಚೆಗೆ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿ, ಚೇತರಿಸಿಕೊಳ್ಳುತ್ತಿದ್ದರು. ಆದರೆ, ಭಾನುವಾರ ಬೆಳಗ್ಗೆ ಕಿಡ್ನಿ ವೈಫಲ್ಯದಿಂದ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ, ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. [ಕಸಾಪ 24ನೇ ಅಧ್ಯಕ್ಷರಾಗಿ ಪುಂಡಲೀಕ ಹಾಲಂಬಿ]

ಹಾಲಂಬಿ ಅವರ ಪಾರ್ಥೀವ ಶರೀರವನ್ನು ಮೊದಲಿಗೆ ಜಯನಗರದ ಅವರ ಸ್ವಗೃಹಕ್ಕೆ ಕೊಂಡೊಯ್ಯಲಾಗುತ್ತದೆ ನಂತರ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಆವರಣದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಇಡಲು ಕುಟುಂಬದವರು ನಿರ್ಧರಿಸಿದ್ದಾರೆ. ಅಂತಿಮ ಸಂಸ್ಕಾರವನ್ನು ಟಿ.ಆರ್ ಮಿಲ್ ಬಳಿಯ ಸ್ಮಶಾನದಲ್ಲಿ ಸಂಜೆ ವೇಳೆಗೆ ನೆರವೇರಿಸಲಾಗುತ್ತದೆ.
ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಹಾಲಾಡಿಯಲ್ಲಿ ಜನಿಸಿದ ಹಾಲಂಬಿ ಅವರು ಕನ್ನಡ ಪರ ಚಿಂತಕರಾಗಿದ್ದರು. ಕನ್ನಡ ಸಾಹಿತ್ಯ ಪರಿಷತ್ತಿನ ಕೋಶಾಧಿಕಾರಿಯಾಗಿ ಸುಮಾರು 14 ವರ್ಷ ಕರ್ತವ್ಯ ನಿರ್ವಹಿಸಿರುವ ಹಾಲಂಬಿ ಅವರು ಪ್ರೊ ಚಂದ್ರಶೇಖರ ಪಾಟೀಲರ ನಂತರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದರು.[ಕಸಾಪ ಯಜಮಾನ್ಯಕ್ಕೆ ಕನ್ನಡ ಮಾತೆಯರೇ ಇಲ್ವಾ?]
ಪಂಪನ 'ಮಾನವ ಜಾತಿ ತಾನೊಂದೇ ವಲಂ' ಎಂಬುದನ್ನು ಪಾಲಿಸುತ್ತೇನೆ. ಇದನ್ನು ಅಧಿಕಾರ ಎಂದು ಸ್ವೀಕರಿಸದೆ ಸೇವಾ ಮನೋಭಾವದಿಂದ ನನ್ನ ಕರ್ತವ್ಯ ಪಾಲಿಸುತ್ತೇನೆ ಎಂದು ಹೇಳಿದ್ದರು.
ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾಗಿದ್ದ ಪುಂಡಲೀಕ ಹಾಲಂಬಿಯವರ ನಿಧನಕ್ಕೆ ತೀವ್ರ ಸಂತಾಪಗಳು. pic.twitter.com/6blokakya7
— CM of Karnataka (@CMofKarnataka) April 24, 2016
ಮನು ಬಳಿಗಾರ್ ಅವರಿಂದ ಸಂತಾಪ ಸಂದೇಶ: ಉತ್ತಮ ವಾಗ್ಮಿಗಳು, ಪ್ರಬುದ್ಧ ಸಂಘಟಕರು, ಕ್ರಿಯಾಶೀಲರು, ಶುದ್ಧಹಸ್ತರು, ಸಕಲರನ್ನೂ ಸಮಾನ ಗೌರವದಿಂದ ಕಾಣುವ ವಿಶಾಲ ಹೃದಯಿಗಳು, ನನಗೆ ಮಾಗ೯ದಶ೯ಕರೂ, ಜಾತ್ಯಾತೀತ ಮನೋಭಾವವನ್ನು ಮೈಗೂಡಿಸಿಕೊಂಡಿರುವವರಾದ ಪುಂಡಲೀಕ ಹಾಲಂಬಿ ಅವರು ಇತರರಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರ ಪ್ರೀತಿಯನ್ನು ಪಡೆದುಕೊಂಡಿದ್ದ ಪರಿಷತ್ತಿನ ನಿಕಟ ಪೂವ೯ ಅಧ್ಯಕ್ಷರಾಗಿ ಕನ್ನಡ ಕಟ್ಟುವ ಕೆಲಸವನ್ನು ಪ್ರಾಮಾಣಿಕವಾಗಿ ನಿವ೯ಹಿಸಿ ಕನ್ನಡಿಗರ ಹೃದಯದಲ್ಲಿ ಜನಮಾನಸರಾಗಿದ್ದ ಹಾಲಂಬಿ ಅವರು ಇಂದು ನಮ್ಮನ್ನು ಅಗಲಿದ್ದು ಕನ್ನಡ ನಾಡಿಗೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬಕ್ಕೆ ದುಖಃ ಸಹಿಸಿಕೊಳ್ಳುವ ಶಕ್ತಿ ಭಗವಂತ ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲೆಂದು ಪ್ರಾಥಿ೯ಸುತ್ತೇನೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications