ವಾಮನ್ ಆಚಾರ್ಯ- ಮಂಡಳಿ ಬಿಟ್ಟ ಕಟ್ಟಕಡೆಯ ಬಿಜೆಪಿಯವ
ಬೆಂಗಳೂರು ಜುಲೈ 25: ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನದಿಂದ ಡಾ. ವಾಮನ್ ಆಚಾರ್ಯ ಕೆಳಗಿಳಿದಿದ್ದಾರೆ. ಈ ಮೂಲಕ ನಿಗಮ -ಮಂಡಳಿ ತೊರೆದ ಬಿಜೆಪಿಯ ಕಟ್ಟಕಡೆಯ ಕಟ್ಟಾಳು ಎನಿಸಿಕೊಂಡಿದ್ದಾರೆ.
ತಮ್ಮನ್ನು ತಾವು 'ಗಾರ್ಬೇಜ್ ಮ್ಯಾನ್' ಎಂದು ಕರೆಸಿಕೊಳ್ಳುತ್ತಿದ್ದ ವಾಮನ್ ಆಚಾರ್ಯ ಅವರು ಶುಕ್ರವಾರ ಸಂಜೆ ವೇಳೆಗೆ ಕಳುಹಿಸಿದ ರಾಜೀನಾಮೆ ಪತ್ರ ತಕ್ಷಣವೇ ಸಮ್ಮತಿ ಪಡೆದುಕೊಂಡಿದೆ.
ಅರಣ್ಯ ಸಚಿವ ಬಿ ರಮಾನಾಥ್ ರೈ ಅವರ ಜೊತೆಗಿನ ವೈಮನಸ್ಯದಿಂದ ಉಸಿರುಗಟ್ಟಿನ ವಾತಾವರಣ ನಿರ್ಮಾಣವಾಗಿದ್ದರಿಂದ ನಿವೃತ್ತಿಗೂ ಎರಡು ತಿಂಗಳು ಮುಂಚೆ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ವಾಮನ್ ಆಚಾರ್ಯ ಅವರ ಆಪ್ತ ವಲಯ ಹೇಳಿದೆ.
ವೃತ್ತಿಯಿಂದ ವೈದ್ಯರಾದ ವಾಮನ್ ಆಚಾರ್ಯ ಅವರು ಸೆಪ್ಟೆಂಬರ್ 20, 2012ರಂದು ಅಧಿಕಾರ ವಹಿಸಿಕೊಂಡಿದ್ದು 2015ರ ಸೆಪ್ಟೆಂಬರ್ 20ಕ್ಕೆ ಅಧಿಕಾರ ಅವಧಿ ಮುಕ್ತಾಯವಾಗಲಿದೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ನಂಬುಗೆಯ ಆಡಳಿತ ಅಧಿಕಾರಿಯಾಗಿದ್ದ ಸಿಎನ್ ಶಿವಪ್ರಕಾಶ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿದ್ದನ್ನು ವಾಮನ್ ಆಚಾರ್ಯ ವಿರೋಧಿಸಿದ್ದರು.
ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಮಾರ್ಕೋನಹಳ್ಳಿಯಲ್ಲಿ ರಾಸಾಯನಿಕ ಕಾರ್ಖಾನೆಗೆ ಸರ್ಕಾರ ಅನುಮತಿ ನೀಡಿದ ಪ್ರಕರಣ ಲೋಕಾಯುಕ್ತ ಸಂಸ್ಥೆ ತನಕ ತಲುಪಿತ್ತು.
ಬೆಂಗಳೂರಿನ ಜಲ, ನೆಲ, ವಾಯು, ಕೆರೆ ಮಾಲಿನ್ಯ ನಿಯಂತ್ರಣ ಮಾಡುವಲ್ಲಿ ಕೆಎಸ್ ಪಿಸಿಬಿ ವಿಫಲವಾಗಿದೆ ಎಂದು ಹೈಕೋರ್ಟ್ ಅನೇಕ ಬಾರಿ ಛೀಮಾರಿ ಹಾಕಿತ್ತು.
ನೋ ಹಾಂಕಿಂಗ್ ಡೇ: ನಗರ ಪೊಲೀಸ್ ಜೊತೆ ಸೇರಿ ವಾರದ ಪ್ರತಿ ಸೋಮವಾರ ನೋ ಹಾಂಕಿಂಗ್ ಡೇ(ವಾಹನದ ಹಾರ್ನ ಶಬ್ದ ಮಾಡದಂತೆ) ಜಾರಿಗೆ ತಂದಿದ್ದರು. ಕೈಗಾರಿಕೆಗಳಿಗೆ ಲೈಸನ್ಸ್ ನೀಡುವ ಪ್ರಕ್ರಿಯೆ ಆನ್ ಲೈನ್ ಮೂಲಕ ನಡೆಯುವಂತೆ ಮಾಡಿ ಪಾರದರ್ಶಕತೆ ಮೂಡಿಸಿದ್ದರು.
ವಿಆರ್ ಎಸ್: ಇದೊಂಥರ ಸ್ವಯಂ ನಿವೃತ್ತಿ ಪಡೆದ ಹಾಗೆ. ಜುಲೈ 16ರಂದೇ ನಾನು ರಾಜೀನಾಮೆ ನೀಡಿದ್ದೆ. ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ನನ್ನನ್ನು ಕರ್ತವ್ಯದಿಂದ ಮುಕ್ತಗೊಳಿಸುವಂತೆ ಕೋರಿಕೊಂಡೆ. ಅಧಿಕಾರಿಗಳ ವರ್ಗಾವಣೆ ಕೂಡಾ ರಾಜೀನಾಮೆ ಕಾರಣ ಎಂಬುದನ್ನು ಸಿಎಂಗೆ ಮನವರಿಕೆ ಮಾಡಿಕೊಂಡಿದ್ದೇನೆ ಎಂದು ವಾಮನ್ ಆಚಾರ್ಯ ಅವರು ದಿನಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.
ಟೆರಾ ಫಾರ್ಮಾಗೆ ಪೈಪೋಟಿ ನೀಡುವ ಜೈವಿಕ ಕಾಂಪೋಸ್ಟ್ ತಯಾರಿಕಾ ಘಟಕ ಹೊಂದಿರುವ ವಾಮನ್ ಆಚಾರ್ಯ ಅವರು ನಗರದ ಕಸದ ಸಮಸ್ಯೆಗೆ ಒಂದು ಪರಿಹಾರ ಕಂಡುಕೊಳ್ಳುವಲ್ಲಿ ವಿಫಲರಾದರು.
ಘನ ತ್ಯಾಜ್ಯ ವಿಂಗಡಣೆ, ಕಸ ನಿರ್ವಹಣೆಗೆ ತಂತ್ರಜ್ಞಾನ ಬಳಕೆ , ಜೈವಿಕ ಗೊಬ್ಬರ ಬಳಕೆಗೆ ಪ್ರೋತ್ಸಾಹ ಹೀಗೆ ಅನೇಕ ಕ್ರಮಗಳನ್ನು ಆಚಾರ್ಯ ಜಾರಿಗೆ ತಂದಿದ್ದನ್ನು ಇಲ್ಲಿ ಸ್ಮರಿಸಬಹುದು. ಅಂದ ಹಾಗೆ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬ್ಲಾಗ್ ಲಿಂಕ್ ಇಲ್ಲಿದೆ (ಒನ್ ಇಂಡಿಯಾ ಸುದ್ದಿ)
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications