ಎಸ್ಟಿಪಿ ಮೇಲ್ದರ್ಜೆ: ಬೆಂಗಳೂರಿನ 60 ಅಪಾರ್ಟ್ ಮೆಂಟ್ಗಳಿಗೆ ನೋಟಿಸ್
ಬೆಂಗಳೂರು, ಸೆಪ್ಟೆಂಬರ್ 7: ಕೊಳಚೆ ನೀರು ಶುದ್ಧೀಕರಣ ಘಟಕ(ಎಸ್ಟಿಪಿ) ಅಳವಡಿಸದ ಬೆಂಗಳೂರಿನ 60 ಅಪಾರ್ಟ್ ಮೆಂಟ್ಗಳಿಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಜಾರಿ ಮಾಡಿದೆ.
ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಈಗಾಗಲೇ ಬೆಂಗಳೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವೃಷಭಾವತಿ ನದಿ ಬಳಿ ಇರುವ ಎಸ್ಟಿಪಿ ಅಳವಡಿಸದ 50 ಮನೆಗಳಿಗಿಂತ ಹೆಚ್ಚು ಮನೆಗಳನ್ನು ಹೊಂದಿರುವ ಅಪಾರ್ಟ್ ಮೆಂಟ್ಗಳಿಗೆ ನೋಟೀಸ್ ಜಾರಿ ಮಾಡಿತ್ತು.
ಇದೀಗ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಒಟ್ಟು ನಗರದ 60 ಅಪಾರ್ಟ್ ಮೆಂಟ್ ಗಳಿಗೆ ನೋಟಿಸ್ ಜಾರಿ ಮಾಡಿದೆ.ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ಕೊಳಚೆ ನೀರು ಶುದ್ಧೀಕರಣ ಘಟಕಕ್ಕೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಅದರಂತೆ ಮಂಡಳಿ ಅಪಾರ್ಟ್ ಮೆಂಟ್ ನಲ್ಲಿ ಅಳವಡಿಸಿರುವ ಗುಣಮಟ್ಟವಿಲ್ಲದ ಎಸ್ಟಿಪಿಗಳನ್ನು ಪರಿಶೀಲಿಸಿ ಅವುಗಳನ್ನು ಮೇಲ್ದರ್ಜೆಗೇರಿಸಲು ಸೂಚಿಸಿದೆ.

ಹೊಸ ಎಸ್ಟಿಪಿ ನಿಯಮದಲ್ಲೇನಿದೆ?
ಎಸ್ಟಿಪಿಗಳಲ್ಲಿ ಎರಡು ಪೈಪ್ಗಳ ಸಂಪರ್ಕವಿರಬೇಕು. ಅದರಲ್ಲಿ ಕೊಳಚೆ ನೀರನ್ನು ಸಂಸ್ಕರಿಸಿದ ಬಳಿಕ ಗಟ್ಟಿಯಾದ ಕಸ ಹೊರಬರುವುದನ್ನು ಸಂಸ್ಕರಣೆ ಮಾಡುವ ವ್ಯವಸ್ಥೆಯೂ ಇರಬೇಕು. ಹಳೇ ಎಸ್ಟಿಪಿಗಳಲ್ಲಿ ಇಂತಹ ವ್ಯವಸ್ಥೆ ಇಲ್ಲ ಮತ್ತು ಕೊಳಚೆ ನೀರು ಸರಿಯಾಗಿ ಸಂಸ್ಕರಣೆ ಆಗುತ್ತಿಲ್ಲ, ಆದ್ದರಿಂದ ಈ ಕ್ರಮಕ್ಕೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿದ್ಯುತ್ ಕಡಿತ ಮಾಡಲ್ಲ
ಒಂದೊಮ್ಮೆ ಎಸ್ಟಿಪಿ ಮೇಲ್ದರ್ಜೆಗೇರಿಸದಿದ್ದರೆ ಅಪಾರ್ಟ್ ಮೆಂಟ್ ನ ವಿದ್ಯುತ್ ಕಡಿತಗೊಳಿಸಲಾಗುತ್ತದೆ ಎನ್ನುವ ಮಾತುಗಳಲ್ಲವೂ ಸುಳ್ಳು ಆ ರೀತಿ ಯಾವುದೇ ಹೇಳಿಕೆಯನ್ನು ನೀಡಿಲ್ಲ, ಎಸ್ಟಿಪಿಯಲ್ಲಿ ನಿಗಿತ ಗುಣಮಟ್ಟ ಕೊಳಚೆ ನೀಡು ಸಂಸ್ಕರಣೆ ಬಗ್ಗೆ ಖಚಿತಪಡಿಸಿಕೊಳ್ಳಲು ಪರಿಶೀಲನೆ ನಡೆಸಲಾಗಿದೆ ಆದರೆ ವಿದ್ಯುತ್ ಕಡಿತಗೊಳಿಸುವ ಬಗ್ಗೆ ಎಲ್ಲಿಯೂ ಹೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಹೊಸ ಎಸ್ಟಿಪಿ ಅಳವಡಿಸಿದ ಬಳಿಕ ಪರವಾನಗಿ ಪಡೆಯಬೇಕು
ಹಳೆಯ ಅಪಾರ್ಟ್ ಮೆಂಟ್ ಗಳು ಎಸ್ಟಿಪಿ ಅಳವಡಿಸಿಕೊಂಡ ಬಳಿಕ ಮಂಡಳಿಗೆ ಮಾಹಿತಿ ನೀಡಿ ಪರವಾನಗಿ ಪಡೆಯಬೇಕು, ಕೆಲ ಅಪಾರ್ಟ್ ಮೆಂಟ್ ಗಳು ಪರವಾನಗಿಯನ್ನು ಪಡೆದಿಲ್ಲ, ಇನ್ನೂ ಕೆಲವು ಅಪಾರ್ಟ್ ಮಂಟ್ ಗಳು ಪರವಾನಗಿ ನವೀಕರಣವನ್ನು ಮಾಡಿಕೊಂಡಿಲ್ಲ.

ಮಂಡಳಿ ಅಧಿಕಾರಿಗಳೊಂದಿಗೆ ಚರ್ಚೆ
ನೋಟಿಸ್ ನೀಡಿದ ಬಳಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳೊಂದಿಗೆ ಒಂದು ಸುತ್ತಿನ ಮಾತುಕತೆ ನಡೆದಿದೆ. ಈಗಾಗಲೇ ಎಸ್ಟಿಪಿಯಲ್ಲಿ ಹಲವು ಬದಲಾವಣೆಗಳಾಗಿದೆ. ಮೇಲ್ದರ್ಜೆಗೇರಿಸಿಕೊಳ್ಳಲು ಸೂಚನೆ ನೀಡಲಾಗಿದೆ ಎಂದು ಅಪಾರ್ಟ್ ಮೆಂಟ್ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನರಸಿಂಹನ್ ತಿಳಿಸಿದ್ದಾರೆ.
-
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
ಪ್ರಸ್ತುತ ಅಧಿವೇಶನದಲ್ಲೇ KAOMA 2025 ತಕ್ಷಣ ಜಾರಿಗೊಳಿಸಿ, ತಾರತಮ್ಯದ ತ್ಯಾಜ್ಯ ಶುಲ್ಕ ರದ್ದುಪಡಿಸಿ: BAF ಆಗ್ರಹ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು












Click it and Unblock the Notifications