ದೈಹಿಕ ಕ್ಷಮತೆಗಾಗಿ ಕೆಎಸ್ಆರ್ಪಿ ಪೊಲೀಸರ ಓಟ
ಬೆಂಗಳೂರು, ಜನವರಿ 25: ಶನಿವಾರ ಬೆಳಿಗ್ಗೆ ಬೆಂಗಳೂರಿನ ಕಬ್ಬನ್ ಪಾರ್ಕ್ನಲ್ಲಿ ಕರ್ನಾಟಕ ಮೀಸಲು ಪೊಲೀಸ್ (ಕೆಎಸ್ಆರ್ಪಿ) ವತಿಯಿಂದ ಆಯೋಜಿಸಿದ್ದ 'ದೈಹಿಕ ಕ್ಷಮತೆಗಾಗಿ ಓಟ'ದಲ್ಲಿ ನೂರಾರು ಪೊಲೀಸ್ ಸಿಬ್ಬಂದಿ ಪಾಲ್ಗೊಂಡು ಗಮನ ಸೆಳೆದರು.
ದೈಹಿಕ ಕ್ಷಮತೆಗಾಗಿ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯಿಂದ ಕಬ್ಬನ್ ಪಾರ್ಕ್ನಲ್ಲಿ 5 ಕಿ.ಮೀ. ಮ್ಯಾರಥಾನ್ ಹಮ್ಮಿಕೊಳ್ಳಲಾಗಿತ್ತು. ಮ್ಯಾರಥಾನ್ಗೆ ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಆರ್.ಕೆ.ದತ್ತಾ ಚಾಲನೆ ನೀಡಿದರು. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಕೆಎಸ್ಆರ್ಪಿ ಸಿಬ್ಬಂದಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಕಬ್ಬನ್ ಪಾರ್ಕ್ನ ಕ್ವೀನ್ಸ್ ಪ್ರತಿಮೆಯಿಂದ ಓಟಕ್ಕೆ ಚಾಲನೆ ನೀಡಲಾಗಿತ್ತು.
ಈ ವೇಳೆ ಮಾತನಾಡಿದ ಆರ್ ಕೆ ದತ್ತಾ, ''ದೈರ್ಯ ಸಾಹಸಗಳಿಗೆ ಕರ್ನಾಟಕ ಪೊಲೀಸ್ ಇಡೀ ರಾಷ್ಟ್ರದಲ್ಲಿ ಹೆಸರು ವಾಸಿಯಾಗಿದೆ. ಇದಕ್ಕೆ ಕಾರಣ ಕರ್ನಾಟಕ ಪೊಲೀಸ್ ಉತ್ತಮ ದೈಹಿಕ ಕ್ಷಮತೆಯನ್ನು ಹೊಂದಿದ್ದಾರೆ. ಪ್ರತಿನಿತ್ಯ ಬೆಳಿಗ್ಗೆ ಕನಿಷ್ಠ ಎರಡು ಕಿಲೋ ಮೀಟರ್ ಓಡುವುದರ ಮೂಲಕ ಎಲ್ಲರೂ ತಮ್ಮ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕು'' ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಕೆಎಸ್ಆಆರ್ಪಿ) ಅಲೋಕ್ ಕುಮಾರ್, ಉಪ ಪೊಲೀಸ್ ಮಹಾ ನಿರೀಕ್ಷಕ ಎನ್ ಸತೀಶ್ ಕುಮಾರ್, ಪೊಲೀಸ್ ಮಹಾ ನಿರೀಕ್ಷಕ ಹರಿ ಶೇಖರನ್ ಪಾಲ್ಗೊಂಡು ಪೊಲೀಸ್ ಸಿಬ್ಬಂದಿಗೆ ಪ್ರೋತ್ಸಾಹ ನೀಡಿದರು.












Click it and Unblock the Notifications