KSRP:ಮಹಿಳಾ ಸಿಬ್ಬಂದಿಗಳಿಗೆ ವಾಹನಗಳಲ್ಲಿ ಶೌಚಾಲಯ ವ್ಯವಸ್ಥೆ
ಬೆಂಗಳೂರು, ಏಪ್ರಿಲ್ 02: ಕೆಎಸ್ಆರ್ ಪಿ ಮಹಿಳಾ ಸಿಬ್ಬಂದಿಗಳು ತರಬೇತಿ ಪಡೆಯುವ ಜಾಗದಲ್ಲಿ ಶೌಚಾಲಯ ವ್ಯವಸ್ಥೆ ಇಲ್ಲದ ಪರದಾಡುತ್ತಿದ್ದರು. ಹಾಗಾಗಿ ಕೆಎಸ್ಆರ್ ಪಿ ವಾಹನದಲ್ಲಿಯೇ ಶೌಚಾಲಯ ನಿರ್ಮಿಸಲಾಗಿದೆ.
ಸುಮಾರು 6330 ಮಹಿಳಾ ಸಿಬ್ಬಂದಿಗಳು ತರಬೇತಿ ಪಡೆಯುವ ಜಾಗದಲ್ಲಿ ಶೌಚಾಲಯವಿರಲಿಲ್ಲ. ಮೊದಲ ಶೌಚಾಲಯ ಕೊಯಮತ್ತೂರಿನಲ್ಲಿ 1.5ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ್ದು ಶೀಘ್ರದಲ್ಲಿ ಇನ್ನುಳಿದ ವಾಹನಗಳಿಗೂ ವಿಸ್ತರಿಸಲಾಗುತ್ತದೆ ಎಂದು ಕೆಎಸ್ಆರ್ ಪಿ ತಿಳಿಸಿದೆ.
ಸದ್ಯಕ್ಕೆ ಒಂದು ವಾಹನದಲ್ಲಿ ಶೌಚಾಲಯ ನಿರ್ಮಿಸಿದ್ದು ಶೀಘ್ರದಲ್ಲಿ ಐದು ವಾಹನಗಳಿಗೆ ವಿಸ್ತರಿಸಲಾಗುತ್ತದೆ. ಮಹಿಳೆಯರು ಹಾಗೂ ಪುರುಷ ಪೊಲೀಸ್ ಸಿಬ್ಬಂದಿಗಳ ಬೇಡಿಕೆ ಮೇರೆಗೆ ನಿರ್ಮಿಸಲಾಗುತ್ತದೆ. ಈಗಿರುವ ವಾಹನಗಳ ಪೈಕಿ ಶೇ.50ರಷ್ಟು ವಾಹನಗಳಿಗೆ ಶೌಚಾಲಯ ಅಳವಡಿಸುವ ಗುರಿ ಹೊಂದಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವಾಹನದ ಹಿಂಭಾಗ 12 ಚದರಡಿ ವಿಸ್ತೀರ್ಣದಲ್ಲಿ ಶೌಚಾಲಯ ನಿರ್ಮಿಸಲಾಗುತ್ತದೆ. ಹಾಗೆಯೇ 300 ಲೀಟರ್ ವಾಟರ್ ಟ್ಯಾಂಕ್ ಅಳವಡಿಸಲಾಗಿರುತ್ತದೆ. ಎರಡು ಹತ್ತಿರದಲ್ಲಿರುವ ಮ್ಯಾನ್ ಹೋಲ್ನಿಂದ ಎರಡು ಒಳಚರಂಡಿ ಪೈಪ್ಗಳನ್ನು ಅಳವಡಿಸಲಾಗಿರುತ್ತದೆ.
ದೊಂಬಿ, ಗಲಾಟೆ, ಬಂದ್ ಗಳು ನಡೆದಾಗ ಶುಚಿತ್ವದ ಕೊರತೆ ಉಂಟಾಗುತ್ತದೆ. ಕೆಲವೊಂದು ವಾಹನಗಳಲ್ಲಿ ಅಡುಗೆ ತಯಾರಿಸಲು ಸಲಕರಣೆ, ಬುಲೆಟ್ ಪ್ರೂಫ್ ಜಾಕೆಟ್ ಗಳು, ಟಿಯರ್ ಗ್ಯಾಸ್ ಹೀಗೆ ಎಲ್ಲಾ ಸೌಕರ್ಯಗಳು ಇರುವಾಗ ಶೌಚಾಲಯ ಮಾತ್ರ ಯಾಕೆ ಇಲ್ಲ ಎನ್ನುವ ಪ್ರಶ್ನೆ ಎಲ್ಲರನ್ನು ಕಾಡುತ್ತದೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications