KSRTC-Jog Falls: ಬೆಂಗಳೂರಿನಿಂದ ಜೋಗ ಜಲಪಾತಕ್ಕೆ ಊಟ ಸಹಿತ ಟೂರ್ ಪ್ಯಾಕೇಜ್: ಟಿಕೆಟ್ ದರ, ವೇಳಾಪಟ್ಟಿ
ಬೆಂಗಳೂರು, ಜುಲೈ 15: ಬದಲಾಗುತ್ತಿರುವ ಹವಾಮಾನ ವೈಪರಿತ್ಯಗಳಿಂದಾಗಿ ಮುಂಗಾರು ಮಳೆ ಎಲ್ಲೆಡೆ ಸಕ್ರಿಯವಾಗಿದೆ. ಮಲೆನಾಡು, ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಇನ್ನಿಲ್ಲದಂತೆ ಮಳೆ ನಿರಂತರವಾಗಿ ಸುರಿದಿದೆ. ಪರಿಣಾಮ ಶಿವಮೊಗ್ಗದ ಜೋಗ ಜಲಪಾತ ಸೇರಿದಂತೆ ಅನೇಕ ಜಲಪಾತಿಗಳು ಮೈದುಂಬಿ ಹರಿಯುತ್ತಿವೆ. ಈ ಸಂಬಂಧ ಪ್ರವಾಸಿಗರಿಗೆ ಅನುಕೂಲ ಕಲ್ಪಿಸಲು KSRTC ವಿಶೇಷ ಊಟ ಸಹಿತ ಟೂರ್ ಪ್ಯಾಕೇಜ್ ಘೋಷಿಸಿದೆ.
ಹೌದು ರಾಜ್ಯ ರಾಜಧಾನಿಯಿಂದ ಮೆಲನಾಡಿನ ಹೆಬ್ಬಾಗಿಲ ಜಿಲ್ಲೆಯಾದ ಶಿವಮೊಗ್ಗಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ವಿಶೇಷ ಟೂರ್ ಪ್ಯಾಕೇಜ್ ಘೊಷಿಸಿದೆ.

ಹಚ್ಚ ಹಸಿರ ಹೊದಿಕೆಯ ಮಧ್ಯೆ ಉಕ್ಕುವ ಹಾಲಿನಿಂತ ಪ್ರಪಾತಕ್ಕೆ ಧುಮ್ಮಿಕ್ಕುವ ಜೋಗ ಜಲಪಾತ, ಅದರ ಸೌಂದಯವನ್ನು ಈ ಮಳೆಗಾಲದಲ್ಲಿ ಕಣ್ತುಂಬಿಕೊಳ್ಳುವುದೇ ಆನಂದದ ಸಂಗತಿ. ಶರಾವತಿ ನದಿ ನೀರೆ ಜೋಗದಲ್ಲಿ ಭೋರ್ಗರೆಯುತ್ತಿದೆ. ದೇಶದ ಎರಡನೇ ಅತೀ ದೊಡ್ಡ ಜಲಪಾತವನ್ನು ನೀವು ಈ ಮಾನ್ಸೂನ್ ವೇಳೆ ನೋಡಬಯಸಿದರೆ ನಿಮಗಾಗಿ ಕೆಎಸ್ಆರ್ಟಿಸಿ ನಿಗಮವು ಊಟ, ತಿಂಡಿ ಸಹಿತವಾಗಿ ವಿಶೇಷ ಟೂರ್ ಪ್ಯಾಕೇಜ್ ಘೋಷಿಸಿದೆ.
ಜೋಗಕ್ಕೆ ಹೊರಡುವ ದಿನಾಂಕ
ಮುಂದಿನ ವಾರಾಂತ್ಯಕ್ಕೆ ಶುಕ್ರವಾರ (ಜುಲೈ 19) ಮತ್ತು ಶನಿವಾರ (ಜುಲೈ 20) ಎರಡು ದಿನವು KSRTCಯಿಂದ ಬಸ್ಗಳು ಪ್ರವಾಸಿಗರನ್ನು ಕರೆದುಕೊಂಡು ಹೋಗಿ, ಮರಳಿ ಕರೆತರಲಿವೆ. ಒಬ್ಬರಿಗೆ ರೂ. 3000 ರೂಪಾಯಿ (6ರಿಂದ 12 ವರ್ಷದವರಿಗೆ ರೂ.2800) ನಿಗದಿ ಮಾಡಲಾಗಿದೆ.
ಒಟ್ಟಾರೆ ಟೂರ್ ಸಮಯದ ಪೂರ್ಣ ವಿವರ
KSRTC ಬಸ್ ಬೆಂಗಳೂರು ಮೆಜೆಸ್ಟಿಕ್ ನಿಂದ ಹೊರಡಲಿದೆ. ಬೆಂಗಳೂರಿನಿಂದ ರಾತ್ರಿ 22.30 ಗಂಟೆಗೆ ಹೊರಟು ಬೆಳಗ್ಗೆ 05.30ಕ್ಕೆ ಸಾಗರ ತಲುಪುತ್ತದೆ. ನಂತರ ಅಲ್ಲಿನ ಹೋಟೆಲ್ನಲ್ಲಿ ಫ್ರೆಶ್ ಅಪ್ ಹಾಗೂ ವಿಶ್ರಾಂತಿ ಪಡೆಯಲು ಬೆಳಗ್ಗೆ 07 ಗಂಟೆವರೆಗೆ ಅವಕಾಶ ಇರುತ್ತದೆ.

ನಂತರ ಬೆಳಗ್ಗೆ 7.15ರ ಹೊತ್ತಿಗೆ ತಿಂಡಿ ತಿಂದು ಅಲ್ಲಿಂದ (ಸಾಗರ) ವರದಹಳ್ಳಿಗೆ 0730 ತಲುಪುತ್ತದೆ. ನಂತರ ವರದಹಳ್ಳಿಯಿಂದ 8.30ಕ್ಕೆ ಹೊರಟು 9 ಗಂಟೆಗೆ ವರದಮೂಲ ತಲುಪಲಿದೆ. ನಂತರ ಅರ್ಧ ಗಂಟೆಯ ಆಸು ಪಾಸಿನಲ್ಲಿ ವರದಮೂಲದಿಂದ ಇಕ್ಕೇರಿ, ಇಕ್ಕೇಯಿಂದ ಕೆಳದಿ, ಕೆಳದಿಯಿಂದ ಸಾಗರ ಬರಲಿದೆ.
ಮಧ್ಯಾಹ್ನ ಸಾಗರದಲ್ಲಿ 13.15 ಗಂಟೆವರೆಗೆ ಊಟಕ್ಕೆ ಸಮಯ ನೀಡಲಾಗುತ್ತದೆ. ಊಟದ ಬಳಿಕ ಸಾಗರದಿಂದ ಜೋಗಕ್ಕೆ ಮಧ್ಯಾಹ್ನ 14.15ರ ಹೊತ್ತಿಗೆ ತೆರಳಲಿದೆ. ನಂತರ ಸಂಜೆ ಜೋಗದಿಂದ 18.15 ಹೊರಟು 19 ಗಂಟೆಗೆ ಬಸ್ ಸಾಗರ ತಲುಪಲಿದೆ. ಅಲ್ಲಿ ಒಂದು ಗಂಟೆ ಶಾಪಿಂಗ್ ಗೆ ಸಮಯ ಇರುತ್ತದೆ. ನಂತರ ರಾತ್ರಿ ಊಟ ಮುಗಿಸಿ 22.00 ಗಂಟೆಗೆ ಸಾಗರದಿಂದ ಹೊರಟು ಮರುದಿನ ಬೆಳಗ್ಗೆ 05.00 ಗಂಟೆಗೆ ಬೆಂಗಳೂರು ಬಂದು ಸೇರಲಿದೆ.
ಹುಬ್ಬಳ್ಳಿಯಿಂದಲೂ ಜೋಗಕ್ಕೆ ವಿಶೇಷ ಬಸ್
ಇದರೊಂದಿಗೆ ಕೆಎಸ್ಆರ್ಟಿಸಿ ಬೆಂಗಳೂರಿನಿಂದ ಸೋಮನಾಥಪುರ, ತಲಕಾಡು, ಮಧ್ಯರಂಗ, ಭರಚುಕ್ಕಿ, ಗಗನಚುಕ್ಕಿ ಜಲಾಪತಕ್ಕೂ ಟೂರ್ ಪ್ಯಾಕೇಜ್ ಘೋಷಿಸಿದೆ.
ಇದಷ್ಟೇ ಅಲ್ಲದೇ ಹುಬ್ಬಳ್ಳಿಯಿಂದ ವಾಯುವ್ಯ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಕಳೆದ ಶನಿವಾರ ಮತ್ತು ಭಾನುವಾರ ಜೋಗ ಜಲಪಾತಕ್ಕೆ ಅತಿ ಕಡಿಮೆ ದರದಲ್ಲಿ ಬಸ್ ನಿಯೋಜಿಸಲಾಗಿತ್ತು. ಸಾಮಾನ್ಯ ಮತ್ತು ಎಸಿ ಬಸ್ ಸಹ ಬಿಡಲಾಗಿತ್ತು. ಇದೀಗ ಬೆಂಗಳೂರಿನಿಂದ ಜೋಗ ಜಲಪಾತಕ್ಕೆ ಕೆಎಸ್ಆರ್ಟಿಸಿ ಬಸ್ ಘೋಷಿಸಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications