ಬೆಂಗಳೂರು: ಚಲಿಸುವ ಬಸ್‌ನಿಂದ ವಿದ್ಯಾರ್ಥಿನಿಯನ್ನು ಹೊರದಬ್ಬಿದ ಕಂಡಕ್ಟರ್

ಬೆಂಗಳೂರು, ನವೆಂಬರ್ 19: ಚಲಿಸುವ ಬಸ್ಸಿನಿಂದ ವಿದ್ಯಾರ್ಥಿನಿಯನ್ನು ಕಂಡಕ್ಟರ್ ಒಬ್ಬ ಹೊರದಬ್ಬಿರುವ ಅಮಾನವೀಯ ಘಟನೆ ನಗರದಲ್ಲಿ ನಡೆದಿದೆ.

ವಿದ್ಯಾರ್ಥಿನಿಯು ಬಸ್ ಪಾಸ್ ಹೊಂದಿದ್ದು, ಟಿಕೆಟ್ ತೆಗೆದುಕೊಳ್ಳಲು ನಿರಾಕರಿಸಿದಳೆಂಬ ಕಾರಣಕ್ಕೆ ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕ ವಿದ್ಯಾರ್ಥಿನಿಯನ್ನು ಚಲಿಸುವ ಬಸ್‌ನಿಂದ ಹೊರಕ್ಕೆ ದಬ್ಬಿದ್ದಾನೆ, ವಿದ್ಯಾರ್ಥಿನಿಗೆ ಹಲವು ಗಾಯಗಳಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾಳೆ.

ನಗರದ ಜ್ಯೋತಿ ಕೇಂದ್ರ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ಓದುತ್ತಿರುವ ವಿದ್ಯಾರ್ಥಿನಿ ಭೂಮಿಕ ಕಾಲೇಜು ಮುಗಿದ ಬಳಿಕ ತನ್ನ ಊರು ಕನಕಪುರಕ್ಕೆ ಹೋಗಲು ಕೆ.ಎಸ್.ಆರ್‌.ಟಿ.ಸಿ ಬಸ್ ಏರಿದ್ದಾಳೆ. ಆಗ ಆಕೆಯನ್ನು ಟಿಕೆಟ್ ಖರೀದಿಸುವಂತೆ ನಿರ್ವಾಹಕ ಕೇಳಿದ್ದಾನೆ. ಆದರೆ ತನ್ನ ಬಳಿ ಬಸ್ ಪಾಸ್ ಇರುವುದಾಗಿ ವಿದ್ಯಾರ್ಥಿನಿ ಉತ್ತರಿಸಿದ್ದಾಳೆ.

KSRTC Bus Conductor Pushed College Student Out Of The Bus

ಇದರಿಂದ ಸಿಟ್ಟುಕೊಂಡ ನಿರ್ವಾಹಕ, ಇದು ದೂರದ ಊರಿಗೆ ಪ್ರಯಾಣಿಸುವ ಬಸ್ಸು ಇದರಲ್ಲಿ ಪಾಸ್ ನಡೆಯುವುದಿಲ್ಲ ಖಡ್ಡಾಯವಾಗಿ ಟಿಕೆಟ್ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾನೆ. ತಾನು ಟಿಕೆಟ್ ತೆಗೆದುಕೊಳ್ಳುವುದಿಲ್ಲ, ಮುಂದಿನ ಸ್ಟಾಪ್‌ನಲ್ಲಿ ಇಳಿದುಬಿಡುತ್ತೇನೆ ಎಂದು ಭೂಮಿಕ ಮನವಿ ಮಾಡಿದ್ದಾಳೆ.

ಭೂಮಿಕಾ ಮನವಿಗೆ ಒಪ್ಪದ ನಿರ್ವಾಹಕ ಮಾರ್ಗಮಧ್ಯದಲ್ಲಿಯೇ ಇಳಿಯುವಂತೆ ಹೇಳಿದ್ದಾನೆ. ಆದರೆ ಇದಕ್ಕೆ ಭೂಮಿಕ ಒಪ್ಪದೇ ಇದ್ದಾಗ, ಆಕೆಯನ್ನು ಬಸ್ಸಿನಿಂದ ಹೊರಕ್ಕೆ ತಳ್ಳಿದ್ದಾನೆ.

ಭೂಮಿಕಾಗೆ ಮುಖ, ಎದೆ ಭಾಗ, ಮೊಣಕಾಲಿಗೆ ಗಾಯಗಳಾಗಿದ್ದು, ಸ್ಥಳೀಯರು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ. ಭೂಮಿಕಾಳನ್ನು ಹೊರಕ್ಕೆ ದಬ್ಬಿದ ಕಂಡಕ್ಟರ್ ಅನ್ನು ಕೆ.ಎಸ್‌.ಆರ್‌.ಟಿ.ಸಿಯು ಅಮಾನತ್ತು ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+