KSRTC ಟಿಕೆಟ್ ನಲ್ಲೂ ಚುನಾವಣಾ ಮತದಾನ ಜಾಗೃತಿ: ಫೋಟೋ
ಬೆಂಗಳೂರು, ಏಪ್ರಿಲ್ 02: ಚುನಾವಣೆಗಳು ಪ್ರಜಾಪ್ರಭುತ್ವದ ಹಬ್ಬ ಅಂತಲೇ ಭಾವಿಸಲಾಗುತ್ತದೆ. ಇದಕ್ಕೆ ರಾಜಕೀಯ ಪಕ್ಷಗಳು, ಚುನಾವಣಾ ಆಯೋಗ ತಮ್ಮದೇ ಆದ ರೀತಿಯಲ್ಲಿ ಸಿದ್ಧತೆ ಆರಂಭಿಸುತ್ತವೆ. ಆದರೆ ಮತದಾರರು ಮಾತ್ರ ಚುನಾವಣೆ ವೇಳೆ ಆಸಕ್ತಿ ಕಳೆದುಕೊಳ್ಳುತ್ತಾರೆ. ಹೀಗಾಗಿ ಮತದಾನ ಪ್ರಮಾಣ ಹೆಚ್ಚಿಸಲು ನಾನಾ ರೂಪದಲ್ಲಿ ಪ್ರಯತ್ನಿಸಲಾಗುತ್ತದೆ.
ಇದೀಗ ಲೋಕಸಭಾ ಚುನಾವಣೆಯಲ್ಲಿ ಮತದಾರರ ಸೆಳೆಯಲು, ಮತದಾನ ಜಾಗೃತಿ ಮೂಡಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಕೈ ಜೋಡಿಸಿದೆ. KSRTC ಸಾರಿಗೆ ನಿಗಮವು ಪ್ರಯಾಣಿಕರಿಗೆ ನೀಡುವ 'ಟಿಕೆಟ್' ನಲ್ಲೂ ಮತದಾನ ಜಾಗೃತಿ ಮೂಡಿಸುತ್ತಿದೆ. ಈ ಕುರಿತು ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.

ನೀವು ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸಿದರೆ, ನಿಮ್ಮ ಕೈಗೆ ಸಿಗುವ ಟಿಕೆಟ್ನಲ್ಲಿ ಮತದಾನ ಜಾಗೃತಿಯ ವಾಕ್ಯವನ್ನು ಕಾಣಬಹುದಾಗಿದೆ. ನಿಗಮವು ಟಿಕೆಟ್ ನಲ್ಲಿ 'ಮತದಾನ ನಮ್ಮೆಲ್ಲರ ಹಕ್ಕು ದಿ: 26.04.2024 ಮತ್ತು 07.05.2024 ರಂದು ತಪ್ಪದೇ ಮತದಾನ ಮಾಡಿ' ಎಂದು ಮತದಾರರಲ್ಲಿ ಮನವಿ ಮಾಡಲಾಗಿದೆ.
ಎರಡು ಹಂತದಲ್ಲಿ ಚನಾವಣೆ: ಮತದಾನ ಮಾಡಿ
ಈ ಮೂಲಕ ಎಲ್ಲರ ಹಕ್ಕು-ಕರ್ತವ್ಯವಾಗಿರುವ ಮತದಾನ ಅವನ್ನು ತಪ್ಪದೇ ಚಲಾಯಿಸುವಂತೆ ಸಾರಿಗೆ ನಿಗಮವು ತಿಳಿಸಿದೆ. ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಎರಡು ಹಂತದಲ್ಲಿ ನಡೆಯಲಿದೆ. ಒಟ್ಟು 28 ಲೋಕಸಭಾ ಕ್ಷೇತ್ರಗಳಲ್ಲಿ ಏಪ್ರಿಲ್ 26 ರಂದು ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ನಂತರ ಮೇ 07ರಂದು ಬಾಕಿ ಉಳಿದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ ಎಂದು ಚುನಾವಣೆ ಆಯೋಗ ಘೋಷಿಸಿದೆ.

ಎಲ್ಲೆಡೆ ಮತದಾನ ಜಾಗೃತಿ
ಬೆಂಗಳೂರು ಸೇರಿದಂತೆ ಕರ್ನಾಟಕದೆಲ್ಲಡೆ ಚುನಾವಣೆಯನ್ನು ಹಬ್ಬ ರೀತಿಯಲ್ಲಿ ಆಚರಿಸಲಾಗುತ್ತದೆ. ಅಂದು ಮತದಾನ ಸುಸೂತ್ರವಾಗಿ ಮತ್ತು ಹೆಚ್ಚಿನ ಪ್ರಮಾಣದಲ್ಲಿ ನಡೆಯಲು ಅನುಕೂಲವಾಗುವಂತೆ ಸರ್ಕಾರಿ, ಖಾಸಗಿ ಸಂಸ್ಥೆಗಳಿಗೆ ರಜೆ ನೀಡಲಾಗಿರುತ್ತದೆ. ಹೀಗಿದ್ದರೂ ರಜೆಯ ಸದುಪಯೋಗ ಮಾಡಿಕೊಂಡು ಮತದಾನ ಹಾಕುವವರ ಜೊತೆಗೆ ಹಲವರು ರಜೆಗೆ ಮತದಾನ ಮಾಡದಿರುವುದು ಕಂಡು ಬರತ್ತಿದೆ.
ಹೀಗಾಗಿ ಮತದಾನ ಜಾಗೃತಿ ಮೂಡಿಸಲಾಗುತ್ತದೆ. ಬಿಬಿಎಂಪಿ ನಗರದಲ್ಲಿ ಜಾಗೃತಿ ಜಾಥಾ ಮೂಲಕ ಜನರಲ್ಲಿ ಮತದಾನದ ಅರಿವು ಮೂಡಿಸುತ್ತಿದೆ. ಅದರ ಭಾಗವಾಗಿ ಸಾರ್ವಜನಿಕ ಸಾರಿಗೆಯ ಟಿಕೆಟ್ನಲ್ಲಿಯೂ ಇದೀಗ ಮತದಾನ ಜಾಗೃತಿ ಮೂಡಿಸಲಾಗುತ್ತಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications