ಕೆಎಸ್ಸಾರ್ಟಿಸಿಗೆ ಗ್ರೀನ್ಟೆಕ್ ಎಚ್ಆರ್ ಪ್ರಶಸ್ತಿ
ಬೆಂಗಳೂರು, ಜೂ.1: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ)ಗೆ ರಾಷ್ಟ್ರೀಯ ಗ್ರೀನ್ಟೆಕ್ ಎಚ್ಆರ್ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಕೆಎಸ್ಸಾರ್ಟಿಸಿ ನಿಗಮದಲ್ಲಿ ಅನುಷ್ಠಾನಗೊಳಿಸಿರುವ ಸ್ಟಾಫ್ ಡ್ಯೂಟಿ ರೋಟಾ ಸಿಸ್ಟಮ್ ಉಪಕ್ರಮದ ಯಶಸ್ಸಿಗೆ ಮಾನವ ಸಂಪನ್ಮೂಲ ವಿಭಾಗದ ಅತ್ಯುತ್ತಮ ಉಪಕ್ರಮ ಎಂದು ಎಚ್ಆರ್ ವರ್ಗದಲ್ಲಿ ಪ್ಲಾಟಿನಂ ಪ್ರಶಸ್ತಿ ನೀಡಲಾಗಿದೆ.
ನಗರದಲ್ಲಿ ನಡೆದ ಸಮಾರಂಭದಲ್ಲಿ ಕೆಎಸ್ಆರ್ಟಿಸಿಗೆ ಎಕ್ಸಲೆನ್ಸ್ ಇನ್ ಎಚ್ಆರ್ ವರ್ಗದಲ್ಲಿ ಪ್ಲಾಟಿನಂ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಗ್ರೀನ್ಟೆಕ್ ಎಚ್ಆರ್ ಪ್ರಶಸ್ತಿಯನ್ನು ದೇಶದ ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿಗಳ ಹಿತದೃಷ್ಟಿಯಿಂದ ತಂತ್ರಜ್ಞಾನವನ್ನು ಉಪಯೋಗಿಸಿಕೊಂಡು ಅಭಿವೃದ್ಧಿಪಡಿಸಿರುವ ಅತ್ಯುತ್ತಮ ಉಪಕ್ರಮಗಳನ್ನು ಗುರುತಿಸಿ ಗೌರವಿಸುವ ಪ್ರಸಸ್ತಿ ಇದಾಗಿದೆ.

ಸ್ಟಾಫ್ ಡ್ಯೂಟಿ ರೋಟಾ ಸಿಸ್ಟಮ್ : ಸಿಬ್ಬಂದಿಗಳ ಸೇವಾ ಹಿರಿತನ ಆಧಾರದ ಮತ್ತು ಸಮಾಲೋಚನೆಯ ಮೇಲೆ ಪ್ರತಿ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸುವ ವ್ಯವಸ್ಥೆಯಾಗಿರುತ್ತದೆ. ಇದರಿಂದ ಪಕ್ಷಪಾತವಿಲ್ಲದೆ, ಪಾರದರ್ಶಕವಾಗಿ ಸಿಬ್ಬಂದಿಗಳಿಗೆ ಆಡಳಿತ ವ್ಯವಸ್ಥೆ ದೊರಕುತ್ತದೆ ಮತ್ತು ದಿಢೀರ್ ಮಾರ್ಗ ರದ್ಧತಿಗೆ ಅವಕಾಶವಿಲ್ಲದಂತೆ ಪ್ರಯಾಣಿಕರಿಗೆ ಸಮರ್ಥ ಸೇವೆ ಒದಗಿಸಲು ಸಹಕಾರಿಯಾಗಿರುತ್ತದೆ.
ನಿಗಮವು ಒಂದು ಕಾರ್ಮಿಕ ಸಮೂಹವನ್ನು ಹೊಂದಿರುವ ಸಂಸ್ಥೆಯಾಗಿದ್ದು, ಸುಮಾರು 37,381 ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕರ್ತವ್ಯ ನಿಯೋಜನೆ ಮತ್ತು ರಜೆ ನಿರ್ವಹಣೆ ಹಂಚಿಕೆಯು ಬಹಳ ಸೂಕ್ಷ್ಮವಾದ ವಿಷಯವಾಗಿದ್ದು, ಅತ್ಯಂತ ಪಾರದರ್ಶಕತೆಯಿಂದ ಮತ್ತು ವಸ್ತುನಿಷ್ಠವಾಗಿ ನಿಭಾಯಿಸುವ ವಿಷಯವಾಗಿರುತ್ತದೆ.
ಗ್ರೀನ್ ಟೆಕ್ ನಿಂದ ಎಚ್ ಆರ್ ವಿಭಾಗ, ಸಿಎಸ್ ಆರ್, ಪರಿಸರ, ಸುರಕ್ಷತೆ, ಆರೋಗ್ಯ ಸೇರಿದಂತೆ ಹಲವು ವಿಭಾಗಗಳಲ್ಲಿ ವಾರ್ಷಿಕ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಸುರಕ್ಷತೆ ಹಾಗೂ ಪರಿಸಹ ಸ್ನೇಹಿ ಸಂಸ್ಥೆ ಎಂದು ಕೆಎಸ್ಸಾರ್ಟಿಸಿ ಈ ಹಿಂದೆ ಪ್ರಶಸ್ತಿ ಪಡೆದಿದ್ದನ್ನು ಇಲ್ಲಿ ಸ್ಮರಿಸಬಹುದು.
-
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು











Click it and Unblock the Notifications