ಪ್ರಯಾಣಕ್ಕೆ ಅವಕಾಶ ನೀಡದ ಕೆಎಸ್ ಆರ್ ಟಿಸಿಗೆ 10 ಸಾವಿರ ದಂಡ
ಬೆಂಗಳೂರು, ಜನವರಿ 23: ಬೆಂಗಳೂರಿನ ನಿವಾಸಿ ಜಿ.ಎಂ.ಪಂಚಾಕ್ಷರಿ ಮತ್ತು ಕುಟುಂಬದವರು ಮುಂಗಡವಾಗಿ ಟಿಕೆಟ್ ಕಾಯ್ದಿರಿಸಿದ್ದರೂ ಪ್ರಯಾಣಕ್ಕೆ ಅವಕಾಶ ನೀಡಲಿಲ್ಲ ಎಂಬ ಕಾರಣಕ್ಕೆ ಗ್ರಾಹಕರ ವೇದಿಕೆಯು ಕೆಎಸ್ ಆರ್ ಟಿಸಿಗೆ 10 ಸಾವಿರ ರುಪಾಯಿ ದಂಡ ವಿಧಿಸಿದೆ. ಈ ತೀರ್ಮಾನ ದೂರು ದಾಖಲಿಸಿದ ನಾಲ್ಕು ವರ್ಷಗಳ ನಂತರ ಬಂದರೂ ಗ್ರಾಹಕರ ಹಕ್ಕು ವಿಚಾರವಾಗಿ ಮಹತ್ವದ್ದಾಗಿದೆ.
ಈ ತೀರ್ಪಿನ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನಲ್ಲಿ ವರದಿ ಪ್ರಕಟವಾಗಿದೆ. ಪಂಚಾಕ್ಷರಿ ಅವರು ತೋರಣ ಎಂಟರ್ ಪ್ರೈಸಸ್ ಎಂಬ ಫ್ರಾಂಚೈಸಿಯಿಂದ ಬೆಂಗಳೂರಿನಿಂದ ತಿರುಪತಿಗೆ ತೆರಳಲು ಅಕ್ಟೋಬರ್ 12, 2012ರ ರಾತ್ರಿಗೆ ಕೆಎಸ್ ಆರ್ ಟಿಸಿಯ ನಾಲ್ಕು ಟಿಕೆಟ್ ಕಾಯ್ದಿರಿಸಿದ್ದರು. ಅದಕ್ಕಾಗಿ 744 ರುಪಾಯಿ ಪಾವತಿಸಿದ್ದರು.[ಬೈಂದೂರಿನ ಗೋಪಾಲ ಪೂಜಾರಿಗೆ ಕೆಎಸ್ಆರ್ ಟಿಸಿ ಅಧ್ಯಕ್ಷ ಪಟ್ಟ]

ಪಂಚಾಕ್ಷರಿ ಮತ್ತು ಕುಟುಂಬದವರು ಆ ದಿನ ಬಸ್ ನಲ್ಲಿ ತೆರಳಲು ಮೆಜೆಸ್ಟಿಕ್ ಗೆ ಹೋಗಿದ್ದಾರೆ. ಆಗ ಅಲ್ಲಿನ ಸಿಬ್ಬಂದಿ, ಇದು ಕೆಎಸ್ ಆರ್ ಟಿಸಿ ಟಿಕೆಟ್ ಅಲ್ಲ ಎಂದು ಪ್ರಯಾಣಕ್ಕೆ ಅವಕಾಶ ಕೊಟ್ಟಿಲ್ಲ. ಮತ್ತೆ ಹೊಸದಾಗಿ ಟಿಕೆಟ್ ಖರೀದಿಸಿದ ಪಂಚಾಕ್ಷರಿ, ತಿರುಪತಿಗೆ ತೆರಳಿದ್ದಾರೆ.
ಅಲ್ಲಿಂದ ಹಿಂತಿರುಗಿದ ಮೇಲೆ, ಕೆಎಸ್ ಆರ್ ಟಿಸಿ ನೌಕರರು ಎಲ್ಲರ ಮುಂದೆ ಅವಮಾನ ಮಾಡಿದರು ಎಂದು ಗ್ರಾಹಕರ ವೇದಿಕೆಯಲ್ಲಿ ದೂರು ದಾಖಲಿಸಿದ್ದಾರೆ. ಆದರೆ ಕೆಎಸ್ ಆರ್ ಟಿಸಿಯು ಟಿಕೆಟ್ ಕಾಯ್ದಿರಿಸಿದ ಕೆಲ ನಿಮಿಷದಲ್ಲೇ ತಾಂತ್ರಿಕ ಕಾರಣದಿಂದ ರದ್ದಾಗಿದೆ ಎಂದು ತಿಳಿಸಿದೆ.[5,500 ಹೊಸ ಬಸ್ಗಳ ಖರೀದಿಗೆ ಸಾರಿಗೆ ಇಲಾಖೆ ನಿರ್ಧಾರ]
ಈ ಸಮಜಾಯಿಷಿಯನ್ನು ತಿರಸ್ಕರಿಸಿ, ತೀರ್ಪು ನೀಡಿರುವ ಅಧ್ಯಕ್ಷೆ ಟಿ ಶೋಭಾದೇವಿ ಹಾಗೂ ಸದಸ್ಯ ಅನೂರಾಧಾ, ತಾಂತ್ರಿಕ ಸಮಸ್ಯೆಗೆ ದೂರುದಾರರು ಹೊಣೆಯಲ್ಲ ಎಂದು ಹೇಳಿದ್ದಾರೆ. ಜೊತೆಗೆ ಕೆಎಸ್ ಆರ್ ಟಿಸಿಗೆ ಸೂಚನೆ ನೀಡಿರುವ ವೇದಿಕೆ, ದೂರುದಾರರಿಗೆ 744 ರುಪಾಯಿ ಟಿಕೆಟ್ ಹಣ, ದಂಡವಾಗಿ 8 ಸಾವಿರ ಹಾಗೂ 2 ಸಾವಿರ ರುಪಾಯಿ ಕೋರ್ಟ್ ಖರ್ಚು ಎಂದು ಕಟ್ಟಿಕೊಡಲು ಸೂಚನೆ ನೀಡಿದ್ದಾರೆ.
ತಾಂತ್ರಿಕ ಸಮಸ್ಯೆಗೆ ಕಾರಣರಾದವರ ವಿರುದ್ಧ ಕೆಎಸ್ ಆರ್ ಟಿಸಿ ಕ್ರಮ ತೆಗೆದುಕೊಳ್ಳಬೇಕು. ದೂರುದಾರರು ತಾಂತ್ರಿಕ ತೊಂದರೆ ಹೊಣೆಗಾರರಲ್ಲ ಎಂದು ಹೇಳಲಾಗಿದೆ.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ











Click it and Unblock the Notifications