ಗುಡ್ನ್ಯೂಸ್: ಬೆಂಗಳೂರು-ಸಿಗಂದೂರಿಗೆ KSRTC ಸ್ಲೀಪರ್ ಬಸ್ ಸೇವೆ! ಟಿಕೆಟ್ ದರ, ವೇಳಾಪಟ್ಟಿ ಹೀಗಿದೆ
ಬೆಂಗಳೂರು, ಆಗಸ್ಟ್ 22: ಬಹುನಿರೀಕ್ಷೆಯ ಮಲೆನಾಡಿನ ಸಿಗಂದೂರು ಚೌಡೇಶ್ವರಿ ದೇವಾಲಯ ಸಂಪರ್ಕಿಸುವ ಕೇಬಲ್ ಬ್ರಿಡ್ಜ್ ಉದ್ಘಾಟನೆಗೊಂಡಿದೆ. ಈಗಾಗಲೇ ಸಾಕಷ್ಟು ಭಕ್ತರು ಭೇಟಿ ನೀಡುತ್ತಿದ್ದಾರೆ. ಹೊಸ ಬ್ರಿಡ್ಜ್ ಕಣ್ತುಂಬಿಕೊಳ್ಳುತ್ತಿದ್ದಾರೆ. ಇದೀಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ನಾನ್ ಎಸಿ ಸ್ಲೀಪರ್ ಸಾರಿಗೆ ಬಸ್ ಕಾರ್ಯಾಚರಣೆ ಆರಂಭಿಸಿದೆ ಎಂದು ನಿಗಮದ ಅಧಿಕಾರಿಗಳು ಶುಕ್ರವಾರ ಮಾಹಿತಿ ನೀಡಿದ್ದಾರೆ. ಹಾಗಾದರೆ ಸಮಯ, ದಿನಾಂಕ, ಟಿಕೆಟ್ ದರ, ವೇಳಾಪಟ್ಟಿ ತಿಳಿಯಲು ಮುಂದೆ ಓದಿ..
ರಾಜ್ಯ ರಾಜಧಾನಿ ಬೆಂಗಳೂರಿನಿಂದ ಶಿವಮೊಗ್ಗ ಜಿಲ್ಲೆಯ ಸಿಗಂದೂರಿಗೆ ಆಗಸ್ಟ್ 22ರಿಂದ ಈ ಮಾರ್ಗಗಳ ಮೂಲಕ ನಾನ್ ಎಸಿ ಸ್ವೀಪರ್ ಸಾರಿಗೆ ಬಸ್ ಕಾರ್ಯಾಚರಣೆ ಆರಂಭಿಸಿದೆ. ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಈ ಸೇವೆ ನೀಡಲಾಗುತ್ತಿದೆ. ಬೆಂಗಳೂರು-ಸಿಗಂದೂರು ವಯಾ ಚಿತ್ರದುರ್ಗ, ಹೊಳಲ್ಕೆರೆ, ಚನ್ನಗಿರಿ, ಶಿವಮೊಗ್ಗ ಮಾರ್ಗದಲ್ಲಿ ನಾನ್ ಎಸಿ ಸ್ವೀಪರ್ ಸಾರಿಗೆ ಸೇವೆ ನೀಡಲಿದೆ. ಈ ಊರುಗಳಲ್ಲಿ ಈ ಬಸ್ಗೆ ನಿಲುಗಡೆ ನೀಡುತ್ತದೆ.

ಪ್ರತಿ ದಿನ ಬೆಂಗಳೂರಿನಿಂದ ಬೆಂಗಳೂರಿನಿಂದ ಸಿಗಂದೂರಿಗೆ ಬಸ್ ಸೇವೆ ಲಭ್ಯವಿದೆ. ಪ್ರಯಾಣ ದರ ವಯಸ್ಕರು 950 ರೂಪಾಯಿ ನಿಗದಿ ಮಾಡಲಾಗಿದೆ. ಬೆಂಗಳೂರಿನಿಂದ ರಾತ್ರಿ 21.40 (09.40) ಗಂಟೆಗೆ ಹೊರಡಲಿದೆ. ಸಿಗಂದೂರನ್ನು ಬೆಳಗ್ಗೆ 06.00 ಗಂಟೆಗೆ ತಲುಪುತ್ತದೆ. ಅಲ್ಲಿ ಭಕ್ತರ ದೇವರ ದರ್ಶನ ಪಡೆದು ಪ್ರಯಾಣಿಕರು ರಾತ್ರಿ ಬಸ್ಗೆ ಬೆಂಗಳೂರಿಗೆ ಮರಳಿ ಬರಬಹುದು. ರಾತ್ರಿ ಸಿಗಂದೂರಿನಿಂದ 20.00 (08) ಗಂಟೆಗೆ ಹೊರುಟು, ಮರುದಿನ ಬೆಳಗ್ಗೆ 04.15 ಗಂಟೆಗೆ ಬೆಂಗಳೂರು ತಲುಪಲಿದೆ.
ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳ, ಜಿಲ್ಲೆಗಳ ಜನರು ಮುಂಗಾರು ಪ್ರವಾಸಕ್ಕೆಂದು ಇಲ್ಲವೇ ಮಲೆನಾಡಿನ ಭಾಗದ ದೇವರ ದರ್ಶನಕ್ಕೆ ಪ್ಲಾನ್ ಮಾಡಿದರೆ ಅಂತವರಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಅಲ್ಲದೇ ಒಂದು ದಿನ ಪ್ರವಾಸಕ್ಕೆ ಈ ಪ್ರಯಾಣ ಹೇಳಿ ಮಾಡಿಸಿದ್ದಾಗಿದೆ. ಯಾರಾದರೂ ಸಿಗಂದೂರಿಗೆ ತೆರಳಬೇಕೆನ್ನುವವರು ಕೂಡಲೇ KSRTC ಅಧಿಕೃತ ವೆಬ್ಸೈಟ್ಗೆ (www.ksrtc.in) ತೆರಳಿ ಮುಂಗಡ ಟಿಕೆಟ್ ಬುಕ್ಕ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ 080-26252625 /7760990100, 7760990560/7760990287 ಈ ಸಂಖ್ಯೆಗೆ ಸಂಪರ್ಕಿಸಬಹುದು.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications