ಬೆಂಗಳೂರು-ಚೆನ್ನೈ ನಡುವೆ ದೇಶದ ಮೊದಲ ಬಯೋ ಬಸ್ ಸಂಚಾರ
ಬೆಂಗಳೂರು, ಜುಲೈ 05 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಶೇ 100ರಷ್ಟು ಜೈವಿಕ ಇಂಧನದಿಂದ ಸಂಚಾರ ನಡೆಸುವ ದೇಶದ ಪ್ರಥಮ ಬಸ್ ಸಂಚಾರಕ್ಕೆ ಚಾಲನೆ ನೀಡಿದೆ. ಬೆಂಗಳೂರು-ಚೆನ್ನೈ ನಡುವೆ ಪ್ರಾಯೋಗಿಕವಾಗಿ ಈ ಬಸ್ ಸಂಚಾರ ನಡೆಸಲಿದೆ.
ಸೋಮವಾರ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮತ್ತು ನಟಿ ಹರ್ಷಿಕಾ ಪೂಣಚ್ಛ ಅವರು ಜೈವಿಕ ಬಸ್ ಸಂಚಾರಕ್ಕೆ ಚಾಲನೆ ನೀಡಿದರು. ಐರಾವತ ಮಲ್ಟಿ ಆಕ್ಸೆಲ್ ಬಸ್ ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ಸಂಚಾರ ನಡೆಸಲಿದ್ದು, ಸಂಪೂರ್ಣವಾಗಿ ಜೈವಿಕ ಇಂಧನವನ್ನು ಇದಕ್ಕೆ ಬಳಸಲಾಗುತ್ತಿದೆ. [ಬಯೋ ಬಸ್ ಉಪಯೋಗಗಳು]

ಮಾಧ್ಯಮಗಳ ಜೊತೆ ಮಾತನಾಡಿದ ರಾಮಲಿಂಗಾ ರೆಡ್ಡಿ ಅವರು, 'ಪ್ರಾಯೋಗಿಕವಾಗಿ ಒಂದು ಬಸ್ಸಿಗೆ ಶೇ 100 ರಷ್ಟು ಜೈವಿಕ ಇಂಧನ ಬಳಸಿ ಕಾರ್ಯಾಚರಣೆಗೆ ಇಳಿಸಲಾಗಿದೆ. ಹಿಂದೆ ಶೇ 20ರಷ್ಟು ಜೈವಿಕ ಇಂಧನ ಬಳಸಿ 10 ಬಸ್ಸುಗಳ ಸಂಚಾರಕ್ಕೆ ಚಾಲನೆ ನೀಡಲಾಗಿತ್ತು' ಎಂದರು. [ರಸ್ತೆಗಿಳಿದ KSRTC ಬಯೋ ಬಸ್]
'ವಾಯುವ್ಯ ಮತ್ತು ಈಶಾನ್ಯ ಸಾರಿಗೆ ಸಂಸ್ಥೆಗಳ 1,700 ಬಸ್ಸುಗಳಿಗೆ ಶೇ 20ರಷ್ಟು ಬಯೋ ಡೀಸೆಲ್ ಬಳಸಲು ಟೆಂಡರ್ ಕರೆಯಲಾಗಿದೆ. ಶೀಘ್ರದಲ್ಲೇ ಈ ಬಸ್ಸುಗಳು ಸಂಚಾರ ಆರಂಭಿಸಲಿವೆ. ಜೈವಿಕ ಇಂಧನ ಬಳಕೆಯಿಂದ ಪರಿಸರ ಮಾಲಿನ್ಯ ಕಡಿಮೆಯಾಗುತ್ತದೆ ಮತ್ತು ಡೀಸೆಲ್ಗಿಂತ 5 ರೂ. ಕಡಿಮೆ ದರದಲ್ಲಿ ಇಂಧನ ಲಭ್ಯವಾಗುತ್ತದೆ' ಎಂದರು.

'ಜೈವಿಕ ಇಂಧನವನ್ನು ವಿದೇಶದಿಂದ ಅಮದು ಮಾಡಿಕೊಳ್ಳುವ ಅವಶ್ಯಕತೆ ಇಲ್ಲ. ಕೊಳೆತ ಆಹಾರ, ಕೊಬ್ಬು, ಖಾದ್ಯ ತೈಲಗಳನ್ನು ನಾನಾ ಪ್ರಕ್ರಿಯೆಗಳ ಮೂಲಕ ಜೈವಿಕ ಇಂಧನ ತಯಾರಿಸಲಾಗುತ್ತದೆ. ಇದರಿಂದ ಪರಿಸರಕ್ಕೆ ಯಾವುದೇ ಹಾನಿಇಲ್ಲ' ಎಂದು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಕುಮಾರ್ ಕಟಾರಿಯಾ ಹೇಳಿದರು.
-
KSRTC: ಕನಕಪುರ-ಬೆಂಗಳೂರು ಬಸ್ ಪ್ರಯಾಣಿಕರಿಗೆ ಶುಭ ಸುದ್ದಿ, 20 ವರ್ಷದ ಬಳಿಕ 4 ಬಸ್ ಸಂಚಾರ -
2nd PUC Result: ದ್ವಿತೀಯ ಪಿಯು ಫಲಿತಾಂಶ ಇಂದು ಮಧ್ಯಾಹ್ನ 3 ಗಂಟೆಗೆ ಪ್ರಕಟ: ನೋಡುವುದು ಹೇಗೆ? -
Devdutt Padikkal: ಆರ್ಸಿಬಿಗೆ ಮರಳಿದ ಬಗ್ಗೆ ಮನದಾಳದ ಮಾತು ಹಂಚಿಕೊಂಡ ಕನ್ನಡಿಗ ದೇವದತ್ ಪಡಿಕ್ಕಲ್ -
Darshan: ನಟ ದರ್ಶನ್ ಕಾನೂನು ಹೋರಾಟಕ್ಕೆ ಗೆಲುವು: 'ಬಾಸ್' ಸಿನಿಮಾ ಬಿಡುಗಡೆಗೆ ಕೋರ್ಟ್ ತಡೆ -
Copra Price: ಇದೇ ಮೊಟ್ಟ ಮೊದಲ ಬಾರಿ ತಿಪಟೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ -
KSRTC ನೌಕರರ ಹಿಂಬಾಕಿ 1271 ರೂ ಬಿಡುಗಡೆ; ವೇತನ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ಏ.17ಕ್ಕೆ ನಿರ್ಣಾಯಕ ಸಭೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು












Click it and Unblock the Notifications