KSRTC: ಮೈಸೂರು ನಗರ ಸಾರಿಗೆ: ಧ್ವನಿ ಸ್ಪಂದನ ಯೋಜನೆ ಪ್ರಮುಖ ಪ್ರಶಸ್ತಿ
ನವದೆಹಲಿ, ನವೆಂಬರ್ 06: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) 'ಮೈಸೂರು ನಗರ ಸಾರಿಗೆಯಲ್ಲಿ ಧ್ವನಿ ಸ್ಪಂದನ' ಆನ್ಬೋರ್ಡ್ ಬಸ್ ಐಡೆಂಟಿಫಿಕೇಶನ್ ಮತ್ತು ನ್ಯಾವಿಗೇಶನ್ ಸಿಸ್ಟಮ್ ಎಂಬ ದೇಶದ ಮೊದಲ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೆ ತಂದಿರುವ ಉಪಕ್ರಮವು 'ಸ್ವಯಂ ಆಕ್ಸೆಸಿಬಿಲಿಟಿ ಪ್ರಶಸ್ತಿ2025' ಪಡೆದುಕೊಂಡಿದೆ.
ಈ ಪ್ರಶಸ್ತಿಯನ್ನು ಎನ್ಐಸಿ ನ್ಯಾಷನಲ್ ಇನ್ಫಾಮೆಟಿಕ್ಸ್ ಸೆಂಟರ್ ಡೆಪ್ಯುಟಿ ಡೈರೆಕ್ಟರ್ ಜನರಲ್ ಪ್ರಶಾಂತ್ ಕುಮಾರ್ ಮಿತ್ತಲ್, ಸ್ವಯಂ ಸಂಸ್ಥೆ ಸಂಸ್ಥಾಪಕರು ಸೈಮು ಜಿಂದಾಲ್, ಮಂಡ್ಯ ವಿಭಾಗ ವಿಭಾಗಿಯ ನಿಯಂತ್ರಣಧಿಕಾರಿ ಶರಣ್ ಬಸವರಾಜ ಕೆ.ಎಂ. ಮಂಡ್ಯ ವಿಭಾಗ ಹಾಗೂ ಕೆಎಸ್ಆರ್ಟಿಸಿ ಉಪ ಮುಖ್ಯ ಗಣಕ ವ್ಯವಸ್ಥಾಪಕರು ಸುಧಾರಾಣಿ.ಆರ್ ಉಪ ಮುಖ್ಯ ಗಣಕ ವ್ಯವಸ್ಥಾಪಕರು ಅವರು ನವದೆಹಲಿಯಲ್ಲಿ ಗುರುವಾರ ಪ್ರಶಸ್ತಿ ಸ್ವೀಕರಿಸಿದರು.

ಸ್ವಯಂ ಸಂಸ್ಥೆಯು ಪ್ರಶಸ್ತಿಯನ್ನು ಸ್ಥಾಪಿಸಿದೆ. ಅಂತರರಹಿತ ವಿನ್ಯಾಸ ಮತ್ತು ಒಳಗೊಳ್ಳುವಿಕೆಯ ಕ್ಷೇತ್ರದಲ್ಲಿ ಮಾದರಿಗಳನ್ನು ನಿರ್ಮಿಸಿರುವ ಸಂಸ್ಥೆಗಳನ್ನು ಗೌರವಿಸುವ ಉದ್ದೇಶ ಹೊಂದಿದೆ. 2025ನೇ ಆವೃತ್ತಿ ಸ್ವಯಂ ಸಂಸ್ಥೆಯ 25ನೇ ವಾರ್ಷಿಕೋತ್ಸವವಾಗಿದೆ. ಜಾಗತಿಕ ಮಟ್ಟದಲ್ಲಿ ಕ್ಷೇತ್ರದಲ್ಲಿ 25 ವರ್ಷಗಳ ಸೇವೆಯನ್ನು ಆಚರಿಸುತ್ತಿದೆ.
ಧ್ವನಿ ಸ್ಪಂದನ - ಆನ್ಬೋರ್ಡ್ ಬಸ್ ಐಡೆಂಟಿಫಿಕೇಶನ್ ಮತ್ತು ನ್ಯಾವಿಗೇಶನ್ ಸಿಸ್ಟಮ್, ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ದೆಹಲಿಯ ರೈಸ್್ಡ ಲೈನ್ಸ್ ಫೌಂಡೇಶನ್ ಅಭಿವೃದ್ಧಿಪಡಿಸಿದ ತಂತ್ರಜ್ಞಾನವಾಗಿದೆ. ಮೈಸೂರು ನಗರ ಬಸ್ಸುಗಳಲ್ಲಿ ದೃಷ್ಟಿ ಸಮಸ್ಯೆಯುಳ್ಳ ಪ್ರಯಾಣಿಕರ ಸ್ವತಂತ್ರ ಚಲನವಲನವನ್ನು ಸುಗಮಗೊಳಿಸಲು ಜಾರಿಗೆ ತರಲಾಗಿದೆ.
ಯಶಸ್ವಿ ಯೋಜನೆಗೆ ಪ್ರಶಸ್ತಿ
ಈ ವ್ಯವಸ್ಥೆಯು ಬಳಕೆದಾರರಿಗೆ ಬರುತ್ತಿರುವ ಬಸ್ಗಳನ್ನು ಗುರುತಿಸಲು ಹಾಗೂ ಧ್ವನಿ ಆಧಾರಿತ ಸೂಚನೆಗಳ ಮೂಲಕ ಬಸ್ ಪ್ರವೇಶದ ಸ್ಥಳವನ್ನು ಸುರಕ್ಷಿತವಾಗಿ ಕಂಡುಹಿಡಿಯಲು ಸಹಾಯ ಮಾಡುತ್ತದೆ. ಈಗಾಗಲೇ 200 ಕ್ಕೂ ಹೆಚ್ಚು ನಗರ ಬಸ್ಸುಗಳಲ್ಲಿ ಈ ವ್ಯವಸ್ಥೆ ಅಳವಡಿಸಲಾಗಿದೆ. 400 ಕ್ಕೂ ಹೆಚ್ಚು ದೃಷ್ಟಿ ವಿಕಲ ಬಳಕೆದಾರರಿಗೆ ಇದರ ಬಳಕೆಯ ಕುರಿತು ತರಬೇತಿ ನೀಡಲಾಗಿದೆ. ಈ ಯೋಜನೆಯಿಂದ ದೃಷ್ಟಿ ವಿಕಲ ಪ್ರಯಾಣಿಕರ ಪ್ರಯಾಣ ಅವಲಂಬನೆ ಗಣನೀಯವಾಗಿ ಕಡಿಮೆಯಾಗಿದ್ದು, ಅವರ ಆತ್ಮವಿಶ್ವಾಸ, ಭದ್ರತೆ ಮತ್ತು ಸ್ವಾತಂತ್ರ್ಯದಲ್ಲಿ ದೊಡ್ಡ ಮಟ್ಟದ ಪ್ರಗತಿ ಕಂಡುಬಂದಿದೆ.
ಈ ಯೋಜನೆಯ ಯಶಸ್ಸಿಗೆ ಜರ್ಮನಿಯ ಡಾಯಿಚೆ ಗೆಸೆಲ್ಶಾಫ್ಟ್ ಫ್ಯೂರ್ ಇಂಟರ್ನ್ಯಾಷನಾಲೆ ಜುಸಮ್ಮೆನಾರ್ಬೈಟ್ (GIZ) GmbH ಸಂಸ್ಥೆಯು ತಾಂತ್ರಿಕ ಸಹಯೋಗ ನೀಡಿದೆ. ಈ ಸಹಯೋಗವು SUM-ACA ಯೋಜನೆಯ ಅಡಿಯಲ್ಲಿ, ಎಲ್ಲರಿಗೂ ಸಮಾನ ಅವಕಾಶದ ನಗರ ಸಾರಿಗೆಯನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದೆ ಎಂದು KSRTC ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
-
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್












Click it and Unblock the Notifications